Tel: 7676775624 | Mail: info@yellowandred.in

Language: EN KAN

    Follow us :


ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

Posted date: 29 Jun, 2023

Powered by:     Yellow and Red

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡುತ್ತಿವೆ. ಕಳೆದ ಮೂರು ನಾಲ್ಕು ದಿನಗಳಿಂದ ಚನ್ನಪಟ್ಟಣ ತಾಲೂಕಿನ ಹಲವು ಗ್ರಾಮಗಳಲ್ಲಿ ಆನೆಗಳು ದಾಳಿಯನ್ನು ನಡೆಸುತ್ತಿವೆ. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿ, ಪೀಹಳ್ಳಿ ದೊಡ್ಡಿ ಹಾಗೂ ಉಜ್ಜನಹಳ್ಳಿ, ದೊಡ್ಡನಹಳ್ಳಿ ಗ್ರಾಮದಲ್ಲಿ ಆನೆಗಳು‌ ದಾಳಿಯನ್ನು ನಡೆಸಿವೆ.


*ಬೈಕ್ ಜಖಂಗೊಳಿಸಿದ ಆನೆಗಳು:*

ತಾಲ್ಲೂಕಿನ ವಿಠಲೇನಹಳ್ಳಿ ಗ್ರಾಮದ ಕೂಗಳತೆ ದೂರದಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿವೆ. 4 ಕಾಡನೆಗಳು ಪ್ರತ್ಯಕ್ಷವಾಗಿದ್ದು, ಪಶುಗಳಿಗೆ ಮೇವನ್ನು ತರಲು ಜಮೀನಿಗೆ ಹೋಗಿದ್ದ ಸತೀಶ್ ಕುಮಾರ್ ಅವರ ಬೈಕ್ ಜಖಂಗೊಳಿಸಿವೆ. ಆನೆಗಳು ಕಾಣುತ್ತಿದಂತೆ ಸತೀಶ್ ಕುಮಾರ್ ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ತಾಲೂಕಿನಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ರೈತರು ಭಯ ಭೀತರಾಗಿದ್ದಾರೆ.


*ವಯೋವೃದ್ಧನ ಮೇಲೆ ದಾಳಿ:*

ಚನ್ನಪಟ್ಟಣ ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ವಯೋವೃದ್ಧನ ಮೇಲೆ ಆನೆ ದಾಳಿ ನಡೆಸಿದೆ. ಹಾಲಯ್ಯ ಎಂಬ ವೃದ್ಧ ಕುರಿ ಮಂದೆಯನ್ನ ಕಾಯುತ್ತಿದ್ದರು. ಕುರಿ ಮಂದೆಯಲ್ಲಿ ಇದ್ದಂತಹ ಜನ ಹಾಗೂ ಗ್ರಾಮದ ಜನರು ಜೋರಾಗಿ ಕೂಗಿಕೊಂಡಿದ್ದರಿಂದ ಭಯದಿಂದ ಆನೆ ಅಲ್ಲಿಂದ ಕಾಲ್ಕಿತ್ತಿದೆ. ಹಾಲಯ್ಯ ಎಂಬುವವರಿಗೆ ಕಾಲು, ಬಾಯಿ ಮತ್ತಿತರ ಕಡೆ ರಕ್ತಗಾಯಗಳಾಗಿದ್ದು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 


*ಉಜ್ಜನಹಳ್ಳಿ, ಪೀಹಳ್ಳಿದೊಡ್ಡಿ ರೈತರ ಜಮೀನಿಗೆ ದಾಳಿ:*

ಚನ್ನಪಟ್ಟಣ ತಾಲೂಕಿನ ಉಜ್ಜನಹಳ್ಳಿ ಮತ್ತು ಪೀಹಳ್ಳಿ ದೊಡ್ಡಿ, ರೈತರ ಜಮೀನಿನ ಮೇಲೆ ಆನೆಗಳು ದಾಳಿ ನಡೆಸಿವೆ. ಉಜ್ಜನಹಳ್ಳಿ ಗ್ರಾಮದ ಭಾನುಪ್ರಸಾದ್ ಹಾಗೂ ಪುಟ್ಟಸ್ವಾಮಿಗೌಡರ ಮಗ ರವಿ ಮತ್ತು ಪೀಹಳ್ಳಿದೊಡ್ಡಿ ಗ್ರಾಮದ ರೈತರ ಜಮೀನಿನ ಮೇಲೆ ಆನೆಗಳು ದಾಂಗುಡಿಯನ್ನು ಇಟ್ಟಿವೆ. ದಾಳಿ ಮಾಡಿದ ಕಾಡಾನೆಗಳು 8 ರಿಂದ 10 ಮಾವಿನ ಮರಗಳು, ಸೀಮೆ ಹುಲ್ಲು ಮತ್ತು ಹಲಸಿನ ಮರವನ್ನು ನಾಶಪಡಿಸುವೆ. ಇದೇ ಸಂದರ್ಭದಲ್ಲಿ ಕೃಷಿ ಪರಿಕರಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಾವು ಎಷ್ಟೇ ಮನವಿ ಮಾಡಿದರು ಸಹ ಅವರು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಈಗಾಗಲೇ ಪ್ರತಿಭಟನೆ ಮಾಡಿದ್ದು ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾಮದ ರೈತರು ಎಚ್ಚರಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಆನೆಗಳನ್ನು ಸೆರೆಹಿಡಿಯಲಾಗಿತ್ತು ಕಳೆದ ವರ್ಷ ಎರಡು ಮತ್ತು ಈ ತಿಂಗಳು ಎರಡು ಸೇರಿದಂತೆ ನಾಲ್ಕು ಪುಂಡಾನೆಗಳನ್ನು ಸೆರೆಹಿಡಿದ ನಂತರ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಎಷ್ಟೇ ಪುಂಡಾನೆಗಳನ್ನು ಸೆರೆ ಹಿಡಿದರು ಸಹ ಮತ್ತಷ್ಟು ಆನೆಗಳ ಕಾಟ ಹೆಚ್ಚಾಗಿದೆಯೇ ಹೊರತು ಕಡಿಮೆಯಾಗಿಲ್ಲ. ಇದರಿಂದಾಗಿ ರೈತರು ಬೇಸತ್ತು ಹೋಗಿದ್ದಾರೆ ಆನೆಗಳು ಗ್ರಾಮಗಳಿಗೆ ಬಾರದಂತೆ ಸೂಕ್ತ ಕ್ರಮವನ್ನ ತೆಗೆದುಕೊಳ್ಳದೇ ಇದ್ದರೆ ರೈತರು ಪ್ರತಿಭಟನೆಯ ಹಾದಿಯನ್ನ ತುಳಿಯುವುದಾಗಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑