ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಸಿದ್ದಯ್ಯ ಕಾಡಾನೆ ದಾಳಿ ವೇಳೆ ಕೊದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ.
ಪ್ರತಿದಿನದಂತೆ ಸೋಮವಾರ ಸಹ ಕೆರೆ ಬಳಿಯ ಜಮೀನಿಗೆ ಮೇವು ತರಲು ಸಿದ್ದಯ್ಯ ತೆರಳಿದ್ದ ವೇಳೆ ಕಾಡಾನೆ ಸೊಂಡಲಿನಿಂದ ದಾಳಿ ಮಾಡಿದ್ದು, ತಕ್ಷಣ ನೀರಿಗೆ ಬಿದ್ದ ಈತ ಈಜಿ ದಡ ಸೇರಿ ಆನೆ ದಾಳಿಯಿಂದ ಪಾರಾಗಿದ್ದಾನೆ. ಆನೆ ತನ್ನ ಸೊಂಡಲಿನಿಂದ ಬಾರಿಸಿದ ಪರಿಣಾಮ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸಿ ಸಿದ್ದಯ್ಯನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.
*ಗ್ರಾಮಸ್ಥರ ಆಕ್ರೋಶ :*
ಸಿದ್ದಯ್ಯನ ಮೇಲೆ ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿ ನಮ್ಮ ಜೀವಕ್ಕೆ ಬೆಲೆ ಇಲ್ಲದಂತಾಗಿದ್ದು, ದಿನನಿತ್ಯ ಆನೆ ಭಯದಲ್ಲಿ ನಾವ್ಯಾರು ಬೇಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲಿ ಆನೆಗಳು ನಮ್ಮನ್ನು ಬಲಿ ತೆಗೆದುಕೊಳ್ಳುತ್ತಾವೋ ಎಂಬ ಆತಂಕ ಮನೆ ಮಾಡಿದ್ದು, ಒಂದು ಕಡೆ ಬೆಳೆದ ಫಸಲು ಸಹ ಆನೆಗಳ ದಾಳಿಯಿಂದ ನಾಶವಾಗುತ್ತಿದ್ದು, ಮತ್ತೊಂದು ಕಡೆ ಜೀವ ಭಯ ಕಾಡುತ್ತಿದ್ದು, ಇದೆಲ್ಲದರಿಂದ ಸರಕಾರ ನಮಗೆ ಮುಕ್ತಿ ಕೊಡಬೇಕಾದರೆ ನಮ್ಮ ಜಮೀನುಗಳನ್ನು ವಶಕ್ಕೆ ಪಡೆದು ನಮಗೂ ಇಂತಿಷ್ಟು ಪರಿಹಾರ ನೀಡಿಬಿಡಲೆಂದು ಆಕ್ರೋಶ ವ್ಯಕ್ತ ಪಡಿಸಿದರು.
*ಸತ್ತ ಮೇಲೆ ಪರಿಹಾರ ಬೇಡ :*
ಆನೆಗಳ ದಾಳಿಯಿಂದ ಸತ್ತರೆ ಪರಿಹಾರ ಸಿಗುತ್ತದೆ ಎಂಬುದು ನಿಜಕ್ಕೂ ನಾಚಿಕೆ ಸಂಗತಿಯಾಗಿದ್ದು, ದುಡಿದು ತಿನ್ನುವ ನಾವುಗಳು ಯಾವತ್ತು ಬಿಟ್ಟಿ ಹಣಕ್ಕೆ ಕೈ ಚಾಚುವುದಿಲ್ಲ, ಸತ್ತ ಮೇಲೆ ಪುಟಗೊಸಿ ಪರಿಹಾರ ನಿಡುವ ಬದಲು ನೆಮ್ಮದಿಯಿಂದ ಬೇಸಾಯ ಮಾಡಲು ಅವಕಾಶ ಕಲ್ಪಿಸಿ. ಇಲ್ಲವೇ ಆನೆಗಳನ್ನು ಓಡಿಸಲು ನಿಮ್ಮ ಕೈಲಾಗದಿದ್ದರೆ ನಮಗೆ ಅವಕಾಶ ನೀಡಿ ನೋಡಿ ಎಂದು ಅರಣ್ಯ ಇಲಾಖೆ ವಿರುದ್ದ ರೈತರು ಆವೇಶ ಭರಿತ ರಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
*ಗ್ರಾಮದ ಹಲವೆಡೆ ದಾಳಿ :*
ದಿನ ಬೆಳಗಾದರೆ ಕಾಡಾನೆಯೊಂದು ಗ್ರಾಮದ ಹಲವು ರೈತರ ತೋಟಗಳಿಗೆ ನುಗ್ಗಿ ಬಾಳೆ, ಮಾವು, ತೆಂಗು, ರೇಷ್ಮೆ, ಸೇರಿದಂತೆ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿದ್ದು, ಒಂದು ದಿನ ಬಿ.ವಿ.ಹಳ್ಳಿ, ಮತ್ತೊಂದು ದಿನ ಪಕ್ಕದ ಊರು, ಮಗದೊಂದು ದಿನ ಅದರ ಪಕ್ಕದ ಊರು ಹೀಗೆ ಸುತ್ತಮುತ್ತಲ ಗ್ರಾಮಗಳ ಜನರಿಗೆ ಇನ್ನಿಲದ ರೀತಿಯ ಉಪಟಳ ನೀಡುತ್ತಾ ಅರಣ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು