ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ

ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬಂದ ಪೈರುಗಳು ಮಳೆ ಹೆಚ್ಚಾಗಿರುವುದರಿಂದ ಸಂಪೂರ್ಣವಾಗಿ ಬಿಳಿಚಿಕೊಂಡಿವೆ. ಈಗ ಯೂರಿಯಾ ರಸಗೊಬ್ಬರ ಹಾಕಲಿಲ್ಲ ಎಂದರೆ ಅಲ್ಪಸ್ವಲ್ಪ ಉಳಿದಿರುವ ಬೆಳೆಯೂ ಕೈಸೇರುವುದಿಲ್ಲಾ ಎಂಬುದು ರೈತರ ಅಳಲಾಗಿದೆ. ಬಹುತೇಕ ಸೊಸೈಟಿ ಸೇರಿದಂತೆ ಖಾಸಗಿ ಅಂಗಡಿಗಳಲ್ಲಿ ರಸಗೊಬ್ಬರ ಸಿಗುತ್ತಿಲ್ಲಾ. ಇರುವ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಕೊಳ್ಳಬೇಕಾದ ಪರಿಸ್ಥಿತಿ ಇದೆ.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಈಗಲೂ ಯೂರಿಯಾ ದೊರೆಯುತ್ತದೆ. ದರ ಮಾತ್ರ ಅವರು ಹೇಳುವಷ್ಟು ಕೊಟ್ಟು ಕೊಂಡುಕೊಳ್ಳಬೇಕು. 249₹ ರೂಪಾಯಿ ಬೆಲೆಯ ಯೂರಿಯಾ ಗೆ 300₹ 350₹ 400₹ ಗೂ ಮೀರಿ ಬೆಲೆ ತೆರಬೇಕಾಗಿದೆ. ದಬಾಯಿಸಿದರೆ, ನಾವೂ ಹೆಚ್ಚು ದುಡ್ಡು ನೀಡಿಯೇ ಕೊಂಡಿದ್ದೇವೆ. ಇಷ್ಟವಿದ್ದರೆ ಕೊಳ್ಳಿ ಇಲ್ಲವಾದರೆ ಬಿಡಿ ಎಂದು ನಿಷ್ಠುರವಾಗಿ ಹೇಳುವ ವ್ಯಾಪಾರಿಗಳೇ ಹೆಚ್ಚಿದ್ದಾರೆ. ಫೆರಿಕಿನ್ ಬೂಸ್ಟರ್ ಎಂಬ ರಸಗೊಬ್ಬರ ಕೊಳ್ಳಲು ಡಿಮ್ಯಾಂಡ್ ಮಾಡುತ್ತಾರೆ. ನಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತರಹೇವಾರಿ ದರ ಹೇಳುತ್ತಾರೆ. ಹಳದಿ ಬಣ್ಣದ ಒಂದು ಕಿಲೋ ರಸಗೊಬ್ಬರ ನೀಡುತ್ತಾರೆ. ನೂರು ರೂಪಾಯಿ ಕೇಳುತ್ತಾರೆ ಅಂದರೆ ಚೀಲವೊಂದಕ್ಕೆ ಐದು ಸಾವಿರ ರೂಪಾಯಿ ಯೇ ಎಂಬುದು ರೈತರ ಯಕ್ಷಪ್ರಶ್ನೆಯಾಗಿದೆ.
ಒಂದು ಅಥವಾ ಎರಡು ಚೀಲ ಯೂರಿಯಾ ಬೇಕು ಎಂದರೆ 1,500₹ ಬೆಲೆಯ ಕಾಂಪ್ಲೆಕ್ಸ್ ಖರೀದಿಸಲೇಬೇಕು ಎಂದು ಕಂಡೀಷನ್ ಹಾಕುತ್ತಾರೆ. ರಾಕ್ಷಸನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಎರಡು ಸಾವಿರಕ್ಕೂ ಮಿಗಿಲ ಹಣಕ್ಕೆ ಐವತ್ತು ಕಿಲೋ ಯೂರಿಯಾ ಕೊಂಡಂತಾಗುತ್ತಿದೆ ಎಂಬುದು ರೈತರ ಅಳಲಾಗಿದೆ. ಚನ್ನಪಟ್ಟಣ ತಾಲ್ಲೂಕು ಮಳೆಗಾಲದಲ್ಲಷ್ಟೇ ಅಲ್ಲದೆ ವರ್ಷಪೂರ್ತಿ ನೀರಾವರಿಯಿರುವುದರಿಂದ, ಹೈನುಗಾರಿಕೆಯನ್ನೇ ಹಲವಾರು ಕುಟುಂಬಗಳು ನಂಬಿಕೊಂಡಿರುವುದರಿಂದ ಮೇವು, ರೇಷ್ಮೆ, ಬಾಳೆ, ಭತ್ತ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಂತಹಂತವಾಗಿ 365 ದಿನಗಳೂ ಸಹ ಯೂರಿಯಾ ಬಳಕೆ ಮಾಡುತ್ತಾರೆ. ಈಗಲಾದರೂ ಸರಿಯಾದ ಸಮಯಕ್ಕೆ ರಸಗೊಬ್ಬರ ನೀಡಲಿ ಎಂದು ರೈತರು ಆಗ್ರಹಿಸಿದ್ದಾರೆ.
ಪ್ರತಿವಾರವೂ ನಾವೂ ಇಂಡೆಂಟ್ ಹಾಕುತ್ತಲೇ ಇದ್ದೇವೆ. ದಾಸ್ತಾನು ಮಾಡುವಷ್ಟು ಗೊಬ್ಬರ ಬರುತ್ತಿಲ್ಲ. ಬಂದದ್ದು ಖಾಲಿಯಾಗುತ್ತಿದೆ. ಯೂರಿಯಾ ಜೊತೆಗೆ ಕಾಂಪ್ಲೆಕ್ಸ್ ಹಾಕಿದಾಗ ಮಾತ್ರ ಉತ್ತಮ ಬೆಳೆ ಬರುತ್ತದೆ. ಒಂದು ಚೀಲ ಯೂರಿಯಾ ಕೊಳ್ಳುವವರಿಗೆ ಹತ್ತು ಕಿಲೋ ಕಾಂಪ್ಲೆಕ್ಸ್ ಕೊಳ್ಳಲು ಹೇಳಲಾಗುತ್ತದೆ. ನಾವು ಮಂಡ್ಯ ಮತ್ತು ಬೆಂಗಳೂರಿನ ಮೇಲೆ ಅವಲಂಬಿತರಾಗಿದ್ದೇವೆ. ರಾಮನಗರ ಜಿಲ್ಲೆಯಲ್ಲೇ ವ್ಯವಸ್ಥೆ ಮಾಡಲು ಶಾಸಕರಿಗೆ ಮನವಿ ಮಾಡಲಾಗಿದೆ.
*ರವಿ ಎಸ್ ಕೆ. ಪ್ರಭಾರ ಕೃಷಿ ಅಧಿಕಾರಿ ಚನ್ನಪಟ್ಟಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ
ಚನ್ನಪಟ್ಟಣ ಜ..೧೬: ತಾಲೂಕು ಕಚೇರಿಯಲ್ಲಿ ಸೋಮವಾರ ವಿಶೇಷವಾಗಿ ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ನೌಕರರ ಸಂಘವು ಸಂಕ್ರಾಂತಿ ಹಬ್ಬ ಆಚರಣೆ ಮೂ

ಇ-ಕೆವೈಸಿ ಮಾಡಿಸದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಇಲ್ಲ
ರಾಮನಗರ, ಡಿ. 08: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂಕಿಸಾನ್) ಯೋಜನೆಯನ್ನು 2018ರ ಡಿಸೆಂಬರ್

ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ
ಮದ್ದೂರು: ಮಾನವರ ಪ್ರಾಣಹಾನಿ, ರೈತ ಬೆಳೆದ ಬೆಳೆ ನಾಶಮಾಡುವ ಕಾಡುಹಂದಿಗಳನ್ನು ಕೊಲ್ಲಲು ಸರ್ಕಾರ ಅನುಮತಿ ನೀಡಿದೆ. ಆದರೆ ರೈತರಿಗೆ ಅರಣ್ಯಾಧಿಕಾರ

ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ
ಮಂಡ್ಯ: ನ: ೧೫/೨೦೨೨. ಅನ್ನದಾತೋ ಸುಖೀನೋಭವ ಎಂಬ ಮಾತನ್ನು ಉಳಿಸಿಕೊಂಡಿರುವ ರೈತ ಇಂದು ತಲ್ಲಣಗೊಂಡಿದ್ದಾನೆ. ರೈತನ ಸೋಗಿನಲ್ಲಿ ಮಾರಾಟ ಮಾಡುತ್ತಿರುವ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭ

ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ
ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.

ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ
ರಾಮನಗರ-ಅ.11: ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾ

ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ
ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್

ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ
ಚನ್ನಪಟ್ಟಣ.ಆ.೧೦: ೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್

ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ
ಆರಿದ್ರಾ ಮತ್ತು ಆಶ್ಲೇಷ ಮಳೆಯು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಪರಿಣಾಮ ರೇಷ್ಮೆನಾಡು ರಾಮನಗರ ಜಿಲ್ಲೆ ತಲ್ಲಣಗೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಕಳಲ್ಲಿ ಬೆಳೆದ ಬೆಳೆ ಮತ್ತು ಮನೆಗಳಿಗೆ ಹೆಚ್
ಪ್ರತಿಕ್ರಿಯೆಗಳು