ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡಬೇಕು, ಅವರು ಸಾಲ ಮರುಪಾವತಿ ಮಾಡುವಲ್ಲಿ ಒಂದೆರಡು ದಿನ ತಡವಾಗಬಹುದೇ ವಿನಹ ಮೋಸ ಮಾಡುವ ಯಾವುದೇ ದುರುದ್ದೇಶಗಳಿರುವುದಿಲ್ಲ ಎಂದು ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ತಿಳಿಸಿದರು. ಅವರು ತಾಲ್ಲೂಕಿನ ನಾಗಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಹಾಗೂ ೨೦೨೨-೨೩ ನೇ ಸಾಲಿನ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಕೆಲವೇ ಸಂಘಗಳು ನಿಷ್ಕ್ರಿಯವಾಗಿವೆ. ಬಹುತೇಕ ಸಂಘಗಳು ಉನ್ನತ ಹಾಗೂ ಆರ್ಥಿಕವಾಗಿ ಬೆಳವಣಿಗೆ ಹೊಂದುತ್ತಿವೆ. ಪ್ರತಿಯೊಬ್ಬ ಹಾಲು ಉತ್ಪಾದಕರು ಪ್ರಶ್ನೆ ಮಾಡಿದಾಗ ಮಾತ್ರ ಸಂಘಗಳಲ್ಲಿ ಅಕ್ರಮಗಳು ನಿಲ್ಲುತ್ತವೆ. ಬಹುತೇಕ ಸಂಘಗಳು ಈಗಾಗಲೇ ಸ್ವಂತ ಕಟ್ಟಡಗಳನ್ನು ಹೊಂದಿವೆ, ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ತಾಲ್ಲೂಕು ಎಂದು ಪರಿಗಣಿತವಾಗಿದ್ದು, ರೈತರಿಗೆ ಹೆಚ್ಚಿನ ಅನುಕೂಲ ಮಾಡುವ ನಿಟ್ಟಿನಲ್ಲಿ ಬಮೂಲ್ ಹೆಚ್ಚಿನ ಶ್ರಮ ವಹಿಸುತ್ತದೆ ಎಂದರು.
ಇಡೀ ಒಕ್ಕೂಟದ ವ್ಯವಸ್ಥೆಯಲ್ಲಿ ಇದೇ ಪ್ರಥಮ ಬಾರಿಗೆ ಸಂಘದ ನಿವೇಶನ ಕೊಳ್ಳಲು ಐದು ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ, ಕಟ್ಟಡ ನಿರ್ಮಾಣಕ್ಕೆ ಎಲ್ಲಾ ಸಂಘಟನೆಗಳಿಂದ ಹನ್ನೊಂದು ಲಕ್ಷ ರೂಪಾಯಿ ನೀಡಲಾಗುತ್ತದೆ.ನಾಗಾಪುರ ಹಾಲು ಉತ್ಪಾದಕರ ಸಹಕಾರ ಸಂಘವು ಮಾದರಿ ಸಹಕಾರ ಸಂಘವಾಗಬೇಕಾಗಿದೆ, ಇದಕ್ಕೆ ಗ್ರಾಮದ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿ ಹೇಳಿದರು. ಹೆಚ್ಚು ಹಾಲು ಉತ್ಪಾದನೆ ಮಾಡುವ ರೈತರಿಗೆ ಇತ್ತೀಚೆಗೆ ಸಂಘಗಳು ಗುರುತಿಸಿ, ಪ್ರೋತ್ಸಾಹಿಸುವ ಸಲುವಾಗಿ ಅವರಿಗೆ ಬಹುಮಾನಗಳನ್ನು ನೀಡಿ, ಸನ್ಮಾನಿಸುವ ಕೆಲಸಗಳನ್ನು ಮಾಡುತ್ತಿದ್ದು ಇದು ಒಳ್ಳೆಯ ಬೆಳವಣಿಗೆಯಾಗಿದೆ, ಇದು ಮಿಕ್ಕುಳಿದ ರೈತರಿಗೆ ಉತ್ತೇಜನ ನೀಡುವಂತದ್ದಾಗಿದೆ, ಇನ್ನೂ ಹೆಚ್ಚಿನ ರೈತರು ಹೆಚ್ಚು ಹಾಲು ಉತ್ಪಾದನೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ಕೋಡಂಬಹಳ್ಳಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಶ್ವಾಂಭರ ಮಾತನಾಡಿ, ನೀವು ಹಾಲು ಉತ್ಪಾದನೆ ಎಷ್ಟು ಮಾಡುತ್ತೀರಿ ಎಂಬ ಆದಾಯದ ಮೇಲೆ ನಾವು ನಿಮಗೆ ಸಾಲಸೌಲಭ್ಯ ನೀಡುತ್ತೇವೆ. ಜಮೀನು ಅಡಮಾನ ಮಾಡಿದರೆ ಹೆಚ್ಚಿನ ಸಾಲ ನೀಡಲಾಗುತ್ತದೆ, ಕೇವಲ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಜೊತೆಗೆ ರಾಸುಗಳಿಗೆ ವಿವಿಧ ರೀತಿಯ ವಿಮೆ ಗಳನ್ನು ಮಾಡಿಸಲಾಗುತ್ತದೆ, ರಾಸುಗಳು ಮತ್ತು ಮಾಲೀಕರು ವಿಮೆ ಮಾಡಿಕೊಂಡರೆ ಇನ್ನೂ ಹೆಚ್ಚಿನ ಅನುಕೂಲ ಮಾಡಿಕೊಳ್ಳಬೇಕು. ಬ್ಯಾಂಕುಗಳಿಗೆ ಸರ್ಕಾರಿ ಹಣ ಬರುವುದಿಲ್ಲ, ಉಳ್ಳವರು ಹಣ ಡಿಪಾಸಿಟ್ ಮಾಡಿದರೆ ಆ ಹಣವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ, ನೀವು ಸದೃಢರಾಗಿ ಹಣ ಡಿಪಾಸಿಟ್ ಮಾಡುವ ಮೂಲಕ ಇನ್ನಷ್ಟು ರೈತರಿಗೆ ಸಹಾಯ ಮಾಡಬಹುದು ಎಂದು ಸಲಹೆ ನೀಡಿದರು.
ಬಮೂಲ್ ನ ವಿಸ್ತರಣಾಧಿಕಾರಿ ರಾಜು ರವರು ಸರ್ವಸದಸ್ಯರ ಸಭೆಗೆ ಸಂಬಂಧಿಸಿದಂತೆ ಆಹ್ವಾನ ಪತ್ರಿಕೆ ಓದಿ ಅಂಗೀಕರಿಸುವುದರ ಜೊತೆಗೆ ಲೆಕ್ಕ ಪರಿಶೋಧನಾ ವರದಿ, ನಿವ್ವಳ ಲಾಭ ವಿಲೇವಾರಿ, ಅಂದಾಜು ಬಡ್ಜೆಟ್, ಬೈಲಾ ತಿದ್ದುಪಡಿ ಯಂತಹ ಮಹತ್ವದ ವರದಿಗಳನ್ನು ಓದಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷೆ ವೆಂಕಟಲಕ್ಷ್ಮಮ್ಮ, ನಿರ್ದೇಶಕರುಗಳಾದ ಸೋಮಲಾ, ಸಿದ್ದೇಗೌಡ, ನರಸೇಗೌಡ, ಸಿದ್ದರಾಜು, ಜಯರಾಮು, ಅನಂತ, ಕೃಷ್ಣ, ದೇವರಾಜು, ಮುಖಂಡರುಗಳಾದ ನಂದೀಶ್, ಮಹೇಶ್ ಮೆಂಗಹಳ್ಳಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ
ಪ್ರತಿಕ್ರಿಯೆಗಳು