ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.
ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆಯ ಸಲುವಾಗಿ ಜಿಲ್ಲಾಡಳಿತ ಒಂದು ತಿಂಗಳ ಕಾಲ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧ ಮಾಡಿದೆ.
ತಮಿಳು ನಾಡಿನ ಗಡಿಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದೆ. ಅದರಲ್ಲೂ ಕನಕಪುರ ತಾಲೂಕಿನಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿದೆ. ಗಡಿಗ್ರಾಮದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವ ಕಾರಣ, ಚರ್ಮಗಂಟು ರೋಗ ಹೆಚ್ಚಾಗಿ ಬಾಧಿಸುತ್ತಿದೆ.
ಕನಕಪುರದ ಜತೆಗೆ, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನಲ್ಲಿ ಈ ಪ್ರಕರಣಗಳು ಕಂಡುಬಂದಿದೆ. ಆದರೆ, ಮಾಗಡಿ ತಾಲೂಕಿನಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ರಾಮನಗರ ತಾಲೂಕಿನಲ್ಲಿ ಗೋಶಾಲೆಯಲ್ಲಿಯೂ ಕಾಯಿಲೆ ಕಾಣಿಸಿಕೊಂಡಿತ್ತು. ಪ್ರಸ್ತುತ ಕಡಿಮೆಯಾಗಿದೆ. ಒಟ್ಟಾರೆ ಜಿಲ್ಲೆಯ ಮೂರು ತಾಲೂಕಿನಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ.
ಇನ್ನು ಕಾಯಿಲೆ ಕಾಣಿಸಿಕೊಳ್ಳುತ್ತಿರುವ ಗ್ರಾಮ ಸೇರಿದಂತೆ 5 ಕಿ.ಮೀಟರ್ ವ್ಯಾಪ್ತಿಯಲ್ಲಿನ ಗ್ರಾಮಗಳ ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ಈ ತನಕ ಒಟ್ಟು 6ಸಾವಿರ ದನಗಳಿಗೆ ಲಸಿಕೆ ನೀಡಲಾಗಿದೆ. ಜತೆಗೆ, ಇದೇ ತಿಂಗಳ 17ರಂದು ಕಾಯಿಲೆಗೆ ಸಂಬಂಧಿಸಿದ್ದ ವ್ಯಾಕ್ಸಿನ್ ವಿತರಣೆಯಾಗಲಿದ್ದು, ಸಾಮೂಹಿಕವಾಗಿ ಲಸಿಕೆ ನೀಡಲಾಗುತ್ತಿದೆ.
ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ನಿಯಂತ್ರಣಾ ಸಂಬಂಧ ರೈತರಲ್ಲಿ ಸಾಕಷ್ಟು ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಕಾಯಿಲೆ ಕಾಣಿಸಿಕೊಂಡ ಗ್ರಾಮಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ.
ರೋಗ ಲಕ್ಷಣ ಹಾಗೂ ಮಾಡಬೇಕಾದ ಕ್ರಮದ ಕುರಿತು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ, ಅಲ್ಲದೆ, ಕರ ಪತ್ರ ಹಂಚಿ ಅರಿವು ಮೂಡಿಸುತ್ತಿದ್ದಾರೆ.
ಸೊಳ್ಳೆ ಹಾಗೂ ತಿಗಣೆ ಕಡಿತದಿಂದ ಕಾಯಿಲೆ ಹೆಚ್ಚಾಗಲಿದೆ. ಶೇ.4 ರಿಂದ 5ರಷ್ಟು ಮಾತ್ರ ಜಾನುವಾರು ಸಾವಿಗೀಡಲಾಗಲಿವೆ. ಇದರಿಂದ ಉತ್ಪಾದನೆ ಕಡಿಮೆಯಾಗುವುದರ ಜತೆಗೆ, ರಾಸುಗಳಲ್ಲಿ ನಿಶ್ಯಕ್ತಿ ಕಾಣಿಸಿಕೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ
ಚನ್ನಪಟ್ಟಣ ಜ..೧೬: ತಾಲೂಕು ಕಚೇರಿಯಲ್ಲಿ ಸೋಮವಾರ ವಿಶೇಷವಾಗಿ ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ನೌಕರರ ಸಂಘವು ಸಂಕ್ರಾಂತಿ ಹಬ್ಬ ಆಚರಣೆ ಮೂ

ಇ-ಕೆವೈಸಿ ಮಾಡಿಸದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಇಲ್ಲ
ರಾಮನಗರ, ಡಿ. 08: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂಕಿಸಾನ್) ಯೋಜನೆಯನ್ನು 2018ರ ಡಿಸೆಂಬರ್

ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ
ಮದ್ದೂರು: ಮಾನವರ ಪ್ರಾಣಹಾನಿ, ರೈತ ಬೆಳೆದ ಬೆಳೆ ನಾಶಮಾಡುವ ಕಾಡುಹಂದಿಗಳನ್ನು ಕೊಲ್ಲಲು ಸರ್ಕಾರ ಅನುಮತಿ ನೀಡಿದೆ. ಆದರೆ ರೈತರಿಗೆ ಅರಣ್ಯಾಧಿಕಾರ

ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ
ಮಂಡ್ಯ: ನ: ೧೫/೨೦೨೨. ಅನ್ನದಾತೋ ಸುಖೀನೋಭವ ಎಂಬ ಮಾತನ್ನು ಉಳಿಸಿಕೊಂಡಿರುವ ರೈತ ಇಂದು ತಲ್ಲಣಗೊಂಡಿದ್ದಾನೆ. ರೈತನ ಸೋಗಿನಲ್ಲಿ ಮಾರಾಟ ಮಾಡುತ್ತಿರುವ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭ

ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ
ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.

ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ
ರಾಮನಗರ-ಅ.11: ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾ

ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ
ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್

ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ
ಚನ್ನಪಟ್ಟಣ.ಆ.೧೦: ೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್

ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ
ಆರಿದ್ರಾ ಮತ್ತು ಆಶ್ಲೇಷ ಮಳೆಯು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಪರಿಣಾಮ ರೇಷ್ಮೆನಾಡು ರಾಮನಗರ ಜಿಲ್ಲೆ ತಲ್ಲಣಗೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಕಳಲ್ಲಿ ಬೆಳೆದ ಬೆಳೆ ಮತ್ತು ಮನೆಗಳಿಗೆ ಹೆಚ್
ಪ್ರತಿಕ್ರಿಯೆಗಳು