ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ

ಚನ್ನಪಟ್ಟಣ ಜ..೧೬: ತಾಲೂಕು ಕಚೇರಿಯಲ್ಲಿ ಸೋಮವಾರ ವಿಶೇಷವಾಗಿ ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ನೌಕರರ ಸಂಘವು ಸಂಕ್ರಾಂತಿ ಹಬ್ಬ ಆಚರಣೆ ಮೂಲಕ ರೈತರನ್ನು ಸನ್ಮಾನಿಸಿ ಹು(ಸು)ಗ್ಗಿ ಹಬ್ಬಕ್ಕೆ ಮತ್ತಷ್ಟು ಮರೆಗು ನೀಡಿದರು.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗ ಇದೇ ಪ್ರಥಮವಾಗಿ ವಿಶೇಷವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ ಅಧಿಕಾರಿಗಳು, ಸಿಬ್ಬಂದಿಗಳು ಕಚೇರಿಯ ಆವರಣದಲ್ಲಿ ಬಣ್ಣ ಬಣ್ಣಗಳಿಂದ ರಂಗೋಲೆಯನ್ನು ಬಿಡಿಸಿ, ಕಬ್ಬು, ಎಳ್ಳು, ಬೆಲ್ಲ, ಬಣ್ಣದ ಮಡಿಕೆಗಳನ್ನು ಜೋಡಿಸಿ ವಿಶೇಷವಾಗಿ ಸಿಂಗಾರ ಮಾಡಿ ತಾಲೂಕು ಕಚೇರಿಯಲ್ಲಿ ಹಳ್ಳಿಯ ಸೊಗಡನ್ನು ರಚಿಸಿದ್ದರು.
ಸಂದರ್ಭದಲ್ಲಿ ಕಂದಾಯ ಇಲಾಖೆ ನೌಕರರ ಸಂಘದವರು ಸಾಂಪ್ರದಾಯಿಕ ಉಡುಗೆ ಉಟ್ಟು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ತಹಶೀಲ್ದಾರ್ ಶ್ರೀಮತಿ ಲಕ್ಷೀದೇವಿ ರವರು ತಾಲೂಕಿನ ಪ್ರಗತಿ ಪರ ರೈತರುಗಳನ್ನು ಆಹ್ವಾನಿಸಿ ಎಳ್ಳು, ಬೆಲ್ಲ ಹಂಚಿ, ಅವರಿಗೆ ಹಸಿರು ಶಾಲು, ತೆಂಗಿನ ಸಸಿ ನೀಡಿ ಗೌರವಿಸಿದರು. ಹಾಗೂ ರೈತ ಭಾಂದವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಮತ್ತು ಗೋ ಪೂಜೆ ಮಾಡಿ ಸಿಹಿ ತಿನ್ನಿಸಿ ತಾಲ್ಲೂಕಿನ ಜನತೆಗೆ ಶುಭಕೋರಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಉಪ ತಹಶೀಲ್ದಾರ್ ಹರೀಶ್ ಕುಮಾರ್, ಶಿರೆಸ್ಥೇದಾರ್ ಸೋಮೇಶ್, ಲೋಕೇಶ್, ದೀಪಕ್, ಕಂದಾಯ ಇಲಾಖೆ ನೌಕರ ಸಂಘದ ಅಧ್ಯಕ್ಷರಾದ ಭರತ್, ನಿರ್ದೇಶಕರಾದ ಶಿವು, ಗಿರೀಶ್, ರೆವಿನ್ಯೂ ಇನ್ಸ್ಪೆಕ್ಟರ್ಗಳಾದ ಶ್ರೀಧರ್, ವೀರೇಶ್, ಸೋಮಶೇಖರ್ ಹಾಗೂ ಸಂಘದ ಪದಾಧಿಕಾರಿಗಳಾದ ನಿಖತ್, ಬಿಂದುಶ್ರೀ, ಕವಿತಾ, ಸೌಮ್ಯ, ಉಮೇಶ್, ಜಯರಾಂ ಇತರೇ ಪದಾಧಿಕಾರಿಗಳು ಹಾಗೂ ತಹಶೀಲ್ದಾರ್ ಕಛೇರಿಯ ಎಲ್ಲಾ ನೌಕರರು ಭಾಗವಹಿಸಿದ್ದರು.
ರೈತರುಗಳಾದ ಸೀಬನಹಳ್ಳಿ ಗ್ರಾಮದ ಶಶಿಕುಮಾರ್, ಮೆಣಸಿಗನಹಳ್ಳಿ ಗ್ರಾಮದ ಬಸವೇಶ್ವರ, ದ್ಯಾವಪಟ್ಟಣ ಗ್ರಾಮದ ಜಯರಾಮು, ದೇವರಹೊಸಹಳ್ಳಿ ಲಕ್ಷ್ಮೀನರಸಿಂಹೇಗೌಡ, ಕೋಟಮಾರನಹಳ್ಳಿ ವೆಂಕಟೇಶ್ ಅವರುಗಳನ್ನು ಸನ್ಮಾನಿಸಲಾಯಿತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ
ಚನ್ನಪಟ್ಟಣ ಜ..೧೬: ತಾಲೂಕು ಕಚೇರಿಯಲ್ಲಿ ಸೋಮವಾರ ವಿಶೇಷವಾಗಿ ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ನೌಕರರ ಸಂಘವು ಸಂಕ್ರಾಂತಿ ಹಬ್ಬ ಆಚರಣೆ ಮೂ

ಇ-ಕೆವೈಸಿ ಮಾಡಿಸದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಇಲ್ಲ
ರಾಮನಗರ, ಡಿ. 08: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂಕಿಸಾನ್) ಯೋಜನೆಯನ್ನು 2018ರ ಡಿಸೆಂಬರ್

ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ
ಮದ್ದೂರು: ಮಾನವರ ಪ್ರಾಣಹಾನಿ, ರೈತ ಬೆಳೆದ ಬೆಳೆ ನಾಶಮಾಡುವ ಕಾಡುಹಂದಿಗಳನ್ನು ಕೊಲ್ಲಲು ಸರ್ಕಾರ ಅನುಮತಿ ನೀಡಿದೆ. ಆದರೆ ರೈತರಿಗೆ ಅರಣ್ಯಾಧಿಕಾರ

ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ
ಮಂಡ್ಯ: ನ: ೧೫/೨೦೨೨. ಅನ್ನದಾತೋ ಸುಖೀನೋಭವ ಎಂಬ ಮಾತನ್ನು ಉಳಿಸಿಕೊಂಡಿರುವ ರೈತ ಇಂದು ತಲ್ಲಣಗೊಂಡಿದ್ದಾನೆ. ರೈತನ ಸೋಗಿನಲ್ಲಿ ಮಾರಾಟ ಮಾಡುತ್ತಿರುವ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭ

ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ
ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.

ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ
ರಾಮನಗರ-ಅ.11: ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾ

ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ
ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್

ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ
ಚನ್ನಪಟ್ಟಣ.ಆ.೧೦: ೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್

ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ
ಆರಿದ್ರಾ ಮತ್ತು ಆಶ್ಲೇಷ ಮಳೆಯು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಪರಿಣಾಮ ರೇಷ್ಮೆನಾಡು ರಾಮನಗರ ಜಿಲ್ಲೆ ತಲ್ಲಣಗೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಕಳಲ್ಲಿ ಬೆಳೆದ ಬೆಳೆ ಮತ್ತು ಮನೆಗಳಿಗೆ ಹೆಚ್
ಪ್ರತಿಕ್ರಿಯೆಗಳು