Tel: 7676775624 | Mail: info@yellowandred.in

Language: EN KAN

    Follow us :


ಕೂಡ್ಲೂರು ಕೆರೆ ಕೋಡಿಯಿಂದ ರೈತರ ಬೆಳೆ ನೀರು ಪಾಲು

Posted date: 25 Dec, 2018

Powered by:     Yellow and Red

ಕೂಡ್ಲೂರು ಕೆರೆ ಕೋಡಿಯಿಂದ ರೈತರ ಬೆಳೆ ನೀರು ಪಾಲು

ಹದಿನೈದು ವರ್ಷಗಳಿಂದ ತುಂಬದಿದ್ದ ಕೂಡ್ಲೂರು ಕೆರೆಯು ಏತ ನೀರಾವರಿ ಮೂಲಕ ತುಂಬಿ ತುಳುಕುತಿದ್ದು ಕೋಡಿ ಹರಿಯಲಾರಂಭಿಸಿದೆ, ಕೆರೆಯ ನೀರು ಮತ್ತು ಬೋರ್ ವೆಲ್ಲ ನೀರನ್ನು ನಂಬಿ ವ್ಯವಸಾಯ ಮಾಡುತ್ತಿದ್ದ ರೈತರಿಗೆ ಒಂದು ಕಡೆ ಸಂತಷವಾದರೆ ಅದೇ ನೀರು ಮತ್ತೊಂದು ಕಡೆ ಶಾಪವಾಗಿ ಪರಿಣಮಿಸಿದೆ.


ಕೂಡ್ಲೂರು ಗದ್ದೆ ಬಯಲು ಎಂದೇ ಹೆಸರಾದ ಸಹಸ್ರಾರು ಎಕರೆ ವಿಶಾಲವಾದ ಪ್ರದೇಶಕ್ಕೆ ನೀರುಣಿಸಿ ರೈತನ ಆದಾಯಕ್ಕೆ ಮುನ್ನುಡಿ ಬರೆಯುವುದು ಈ ಕೆರೆಯ ನೀರು, ಜೊತೆಗೆ ಬಹುತೇಕ ಎಲ್ಲಾ ಕೊಳವೆ ಬಾವಿಗಳು ಪುನಶ್ಚೇತನಗೊಂಡು ರೈತರ ಮೊಗದಲ್ಲಿ ಸಂತಸದ ಗೆರೆಗಳು ಮೂಡುತ್ತಿವೆ.


ಕೂಡ್ಲೂರು ಕೆರೆಯು ತುಂಬಿ ಕೋಡಿ ಹರಿದ ನೀರು ನೇರವಾಗಿ ಹೊಡಿಕೆಹೊಸಹಳ್ಳಿ ಕೆರೆಗೆ ಹೋಗುತ್ತದೆ, ಹಿಂದಿನಿಂದಲೂ ಇದ್ದ ಹಳ್ಳವನ್ನು ಕೆಲವು ರೈತರು ಒತ್ತುವರಿ ಮಾಡಿಕೊಂಡಿದ್ದರೆ ಕೆಲವು ಕಡೆ ಮುಚ್ಚಿಹೋಗಿರುವುದರಿಂದ ಕೋಡಿ ಹರಿದ ನೀರು ರೈತ ಬೆಳೆದ ಬೆಳೆಯ ಮೇಲೆ ಹರಿದು ಬೆಳೆಗಳೆಲ್ಲವೂ ಮಕಾಡೆ ಮಲಗಿಕೊಂಡಿವೆ.

ಗೋವಿಂದೇಗೌಡನದೊಡ್ಡಿ, ಚನ್ನಂಕೇಗೌಡನದೊಡ್ಡಿ ಮತ್ತು ಕೂಡ್ಲೂರು ಗ್ರಾಮದ ಅನೇಕ ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳು ನೀರಿನಲ್ಲಿ ನೆನೆದು ಕೊಳೆಯಲಾರಂಬಿಸಿವೆ.


ಕೂಡ್ಲೂರು ಕೆರೆಗೆ ನೀರು ತುಂಬಿಸುವ ಮುನ್ನವೇ ಹೊಡಿಕೆಹೊಸಹಳ್ಳಿ ಕೆರೆಗೆ ನೀರು ಹರಿದು ಹೋಗುವ ಕಾಲುವೆಯನ್ನು ದುರಸ್ತಿ ಮಾಡಬೇಕಾಗಿದ್ದು ಅಧಿಕಾರಿಗಳ ಕರ್ತವ್ಯ, ಇದ್ಯಾವುದನ್ನು ಮುಂದಾಲೋಚನೆ ಮಾಡದ ಪರಿಣಾಮವಾಗಿ ಕೋಡಿ ಹರಿದ ನೀರು ರೈತರ ಭತ್ತದ ಗದ್ದೆಗಳು, ಜಾನುವಾರುಗಳ ಜೋಳದ ಮೇವು ಹಾಗೂ ಇನ್ನಿತರ ಬೆಳೆಗಳು ನಾಶವಾಗಲು ಕಾರಣಕರ್ತರಾಗಿದ್ದಾರೆ ಹಾಗಾಗಿ ನಾಶವಾದ ಫಸಲಿನ ಹಣವನ್ನು ಕಟ್ಟಿಕೊಡಲಿ ಎಂದು ರೈತರು ಆಗ್ರಹಿಸುತ್ತಿದ್ದಾರೆ.


ಈ ಬಗ್ಗೆ ಇಂಜಿನಿಯರ್ ವೆಂಕಟೇಗೌಡರನ್ನು ಸಂಪರ್ಕ ಮಾಡಿದಾಗ ಈ ಸಂಬಂಧ ನನಗೆ ಮಾಹಿತಿ ಬಂದಿದೆ, ಬಹುತೇಕ ರೈತರು ಕಾಲುವೆ ಹೊತ್ತುವರಿ ಮಾಡಿಕೊಂಡಿದ್ದು, ಮತ್ತೆ‌ ಕೆಲವು ಭಾಗದಲ್ಲಿ ಸಂಪೂರ್ಣ ಮುಚ್ಚಿ ಹೋಗಿರುವುದರಿಂದ ನೀರು ರೈತರ ಜಮೀನಿನ ಮೇಲೆ ಹರಿಯುತ್ತಿದೆ, ಆದ್ದರಿಂದ ತಾತ್ಕಾಲಿಕವಾಗಿ ಕೂಡ್ಲೂರು ಕೆರೆಗೆ ನೀರು ಹರಿಸುವುದನ್ನು ನಿಲ್ಲಿಸಿಲಾಗಿದೆ, ಸದ್ಯದಲ್ಲಿಯೇ ಹೊಡಿಕೆಹೊಸಹಳ್ಳಿ ಕೆರೆಗೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು1 comments

  • Giriraju wrote:
    25 Dec, 2018 05:29 pm

    Danayavadagalu Srinivas ravarage raithara paravage spandeseddake.......

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑