ತಾಲ್ಲೂಕಿನಲ್ಲಿ ಚುರುಕಾದ ಬಿತ್ತನೆ ಕಾರ್ಯ
ಚನ್ನಪಟ್ಟಣ: ಮುಂಗಾರು ಮಳೆ ಕೈಕೊಟ್ಟ ಹಾಗೂ ತಡವಾಗಿ ಆಗಮಿಸಿದ ಕಾರಣ ಸರಿಯಾದ ಸಮಯದಲ್ಲಿ ಬಿತ್ತನೆ ಮಾಡಲಾಗದೇ ಕಂಗಲಾಗಿದ್ದ ರೈತ, ತಡವಾಗಿ ಆಗಮಿಸಿರುವ ಮಳೆಯಿಂದ ಉಲ್ಲಾಸಗೊಂಡ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಕಳೆದ ತಿಂಗಳೇ ಪ್ರಾರಂಭ ಆಗಬೇಕಿದ್ದ ಬಿತ್ತನೆ ಮಳೆಯು ವಾತಾವರಣದ ಏರುಪೇರಿನಿಂದ ಇಳೆಗೆ ಇಳಿಯದ್ದರಿಂದ ಬಿತ್ತನೆ ಮಾಡಲು ಕಾತರಿಸುತ್ತಿದ್ದ ರೈತ ಕಂಗಾಲಾಗಿದ್ದರೂ ಸಹ ತಿಂಗಳು ತಡವಾಗಿ ಬಂದ ಮಳೆಗೆ ರೈತ ಬಿತ್ತನೆ ಮಾಡುವ ತವಕದಲ್ಲಿದ್ದಾನೆ.
ಕೆಲವು ರೈತರು ಮಾತ್ರ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು ಈ ಮಳೆಯನ್ನು ನಂಬಿಕೊಳ್ಳಲು ಬರುವುದಿಲ್ಲ, ಬಿತ್ತನೆ ಮಾಡಿ ಕೈಸುಟ್ಟುಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ಹಲವಾರು ರೈತರು ಬಿತ್ತನೆ ಗೆ ಮುಂದಾಗದೆ ಕೈಚೆಲ್ಲಿದ್ದಾರೆ.
ಸಂಬಂಧಿಸಿದ ಕೃಷಿ ಅಧಿಕಾರಿಗಳು ರೈತರ ನೆರವಿಗೆ ಧಾವಿಸಿ ತಡವಾಗಿ ಬಿತ್ತನೆ ಮಾಡುವ ರೈತರಿಗೆ ಯಾವ ತಳಿ ಬಿತ್ತನೆ ಮಾಡಿದರೆ ಉಪಯೋಗವಾಗಲಿದೆ, ಎಷ್ಟು ಅವಧಿಗೆ ಅದು ಬರಲಿದೆ ಮತ್ತು ತಡವಾಗಿರುವುದರಿಂದ ಕೀಟ ಬಾಧೆ ಬರಲಿದೆಯೇ ಎಂಬ ಮಾಹಿತಿಯನ್ನು ಒದಗಿಸಿಕೊಟ್ಟರೆ ರೈತನ ಶ್ರಮಕ್ಕೆ ಬೆಲೆ ಸಿಗಲಿದೆ.
ಮುಂಗಾರು ಮಳೆ ತಡವಾಗಿ ಆಗಮಿಸಿರುವುದರಿಂದ ರೈತರು ಪರ್ಯಾಯ ಬೆಳೆಗೆ ಒಗ್ಗಿಕೊಳ್ಳಬೇಕು, ಉದಾಹರಣೆಗೆ ಕಳೆದ ತಿಂಗಳಲ್ಲಾಗಿದ್ದರೆ ಎಂಆರ್ ೦೧ ಅಥವಾ ಎಂಆರ್ ೦೬ ತಳಿಯ ರಾಗಿ ಬಿತ್ತನೆ ಮಾಡಬಹುದಾಗಿತ್ತು, ತಡವಾಗಿರುವುದರಿಂದ ೧೦೫ ದಿವಸಗಳಿಗೆ ಬರುವಂತಹ ಜಿಪಿಯು ೨೮, ೪೬ ಮತ್ತು ೬೬ ಎಂಬ ತಳಿಯ ರಾಗಿಯನ್ನು ಬಿತ್ತನೆ ಮಾಡಿದರೆ ಅನುಕೂಲವಾಗಲಿದೆ.
ನಮ್ಮಲ್ಲಿ ಜಿಪಿಯು ತಳಿಯ ರಾಗಿಯು ದಾಸ್ತಾನು ಇದ್ದು ರೈತರು ನೇರವಾಗಿ ಬಂದು ಖರೀದಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಬೊಮ್ಮೇಶ್ ರವರು ನಮ್ಮ ಪತ್ರಿಕೆಗೆ ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು