ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಿಸಿ
ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸ್ತಕ ಸಾಲಿನಿಂದ ರಂಗ ಶಿಕ್ಷಕರನ್ನು ನೇಮಿಸಿ, ರಂಗ ಪದವೀಧರರಿಗೆ ಉದ್ಯೋಗ ಒದಗಿಸುವಂತೆ ಕರ್ನಾಟಕ ನಾಟಕ ಅಕಾಡೆಮಿ ಒತ್ತಾಯಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್, ನೀನಾಸಂ, ಸಾಣೇಹಳ್ಳಿ ಒಳಗೊಂಡಂತೆ ರಾಜ್ಯದ ವಿವಿಧ ರಂಗಶಾಲೆ ಹಾಗೂ ವಿಶ್ವವಿದ್ಯಾಲಯಗಳಿಂದ ಪ್ರತಿ ವರ್ಷ 600ಕ್ಕೂ ಹೆಚ್ಚು ವಿದ್ಯಾರ್

"ನಾಡೋಜ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ "
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ವತಿಯಿಂದ ದಿನಾಂಕ 26/06/2018 ನೇ ಮಂಗಳವಾರ ಸಂಜೆ 05:00 ಗಂಟೆಗೆ ಬೆಂಗಳೂರಿನ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ತೊಗಲುಗೊಂಬೆ ಕಲಾವಿದ ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ರವರಿಗೆ ನಾಡೋಜ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು. ಕರ್ನಾಟಕ ಜಾನಪದ ಪರಿಷತ್ತು ಮತ್ತು ಹೆಚ್ ಎಲ್ ನಾಗೇಗೌಡರ ಬಗ್ಗೆ; ದಿವಂಗತ ಹೆಚ್ ಎಲ್ ನಾಗೇಗೌಡರು ನಿವೃತ

ಜಾನಪದ ಲೋಕದ ತಿಂಗಳ ಅತಿಥಿ ಸೋಬಾನೆ ಪದ ಗಾಯಕ ಕೃಷ್ಣೇಗೌಡ.
ರಾಮನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅರ್ಹ ಸಂಸ್ಥೆ, ಕಲಾವಿದರಿಗೆ ಅನುದಾನ ದೊರೆಯುವುದಿಲ್ಲ ಎಂದು ಸೋಬಾನೆ ಪದ ಗಾಯಕ ಕೃಷ್ಣೇಗೌಡ ಬೇಸರ ವ್ಯಕ್ತಪಡಿಸಿದರು. ಇಲ್ಲಿನ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ಶನಿವಾರ ಸಂಜೆ ನಡೆದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ಕಳೆದ 45 ವರ್ಷಗಳಿಂದ ಸೋಬಾನೆ ಪದಗಳನ್ನು ಹಾಡುವ ಜತೆಗೆ, ಜನಪದ ಕಲೆಗಳ ಪ್ರದರ್ಶನವನ್ನು ಪಟ್ಟಲದಮ್ಮ ಜಾನಪದ ಕಲಾ ಬಳಗದ ಮೂಲಕ ನೀಡ
ಅರ್ಜಿ ಆಹ್ವಾನ
ರಾಮನಗರ :- ರಾಜ್ಯ ಜಾನಪದ ಅಕಾಡೆಮಿ ವತಿಯಿಂದ 2016-17ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರದಲ್ಲಿ ತರಬೇತಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ಈ ತರಬೇತಿ ಕೊಡಿಸುವ ಶಿಬಿರಕ್ಕೆ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕರ್ನಾಟಕ ಜಾನ