Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ

Posted date: 25 Apr, 2020

Powered by:     Yellow and Red

ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ

ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ, ಪ್ರತಿಯೊಬ್ಬ ನಾಗರೀಕರಿಗೂ ಆರ್ಥಿಕವಾಗಿ ಹೊಡೆತ ಬಿದ್ದಿರುವುದು ಸತ್ಯ.

ಹಾಗೆಯೇ ಸಾಂಸ್ಕೃತಿಕ ಕಲೆಗಳನ್ನು ಶ್ರೀಮಂತಗೊಳಿಸಲು ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಕಲಾವಿದರ ಬದುಕು ಸಹ ಇದರಿಂದ ಹೊರತಾಗಿಲ್ಲ.


೨೦೧೯/೨೦ ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಬಂದ ರೀತಿಯಲ್ಲಿಯೇ ರಾಮನಗರ ಜಿಲ್ಲೆಗೂ ವಿಶೇಷ ಘಟಕದ ಯೋಜನೆಯಡಿಯಲ್ಲಿ ಹದಿನೈದು ಲಕ್ಷ ರೂಪಾಯಿಗಳ ಅನುದಾನ ಬಂದಿದ್ದು, ಅದನ್ನು ಕಲಾವಿದರಿಗೆ ಹಂಚಬೇಕಾಗಿತ್ತು. ಇಲ್ಲಸಲ್ಲದ ಹಾಗೂ ಅಪಥ್ಯ ಕಾರಣಗಳನ್ನು ನೀಡಿ ಅನುದಾನವು ಇಲಾಖೆಯಿಂದ ಸರ್ಕಾರಕ್ಕೆ ವಾಪಸ್ಸು ಹೋಗಿದ್ದು, ಕಲಾವಿದರ ಬದುಕು ಅತಂತ್ರ ಸ್ಥಿತಿಯಲ್ಲಿದೆ ಎಂಬುದು ಜಿಲ್ಲಾ ಕಲಾವಿದರ ಅಳಲಾಗಿದೆ.


ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅನುದಾನ ಬಳಕೆಯಾಗಿದ್ದು, ನಮ್ಮ ಜಿಲ್ಲೆಯ ಅನುದಾನ ವಾಪಸ್ಸು ಹೋಗಲು ಕಾರಣವೇನೆಂದು ಇಲಾಖೆಯ ನಿರ್ದೇಶಕರು ಮಾಧ್ಯಮದ ಮೂಲಕ ಕಲಾವಿದರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ವಾಪಸ್ಸು ಹೋಗಿರುವ ಹಣವನ್ನು ತರಿಸಿಕೊಂಡು ಸಂಕಷ್ಟದಲ್ಲಿರುವ, ಅದರಲ್ಲೂ ಕರೋನಾ ವೈರಸ್ ನಿಂದ ದುಡಿಮೆಯೇ ಇಲ್ಲದೆ ಮನೆಯಲ್ಲಿರುವ ಕಲಾವಿದರಿಗೆ ನೀಡಬೇಕೆಂಬುದು ಕಲಾವಿದರ ಒಕ್ಕೊರಲ ದನಿಯಾಗಿದೆ.


ಎಲ್ಲಾ ಟ್ರಸ್ಟ್ ಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟವಾಗಿದ್ದರಿಂದ ಸಮಿತಿಯು ಹಣವನ್ನು ವಾಪಸ್ಸು ಕಳುಹಿಸಿದ್ದು ಇದರಲ್ಲಿ ಇಲಾಖೆಯ ಹಸ್ತಕ್ಷೇಪವೇನು ಇಲ್ಲ. ಎಲ್ಲಾ ಕಲಾವಿದರೂ ಬಿಪಿಎಲ್ ಆಹಾರ ಪಡಿತರ ಹೊಂದಿದ್ದು ಸರ್ಕಾರ ಅವರಿಗೆ ಪಡಿತರ ನೀಡುತ್ತಿದೆ.

ಸದ್ಯದಲ್ಲೇ ಸರ್ಕಾರದ ವತಿಯಿಂದ ಎರಡು ಸಾವಿರ ರೂಪಾಯಿ ಪರಿಹಾರ ನೀಡುವುದಾಗಿಯೂ ಘೋಷಿಸಲಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವಿನಯಕುಮಾರ್ ತಿಳಿಸಿದರು.


ಮುಂದುವರೆದು ಮಾತನಾಡಿದ ಅವರು ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆ ಅಡಿಯಲ್ಲಿ, ಸಂಘಸಂಸ್ಥೆಗಳ ಚಟುವಟಿಕೆಗಳಿಗೆ, ಚಿತ್ರಕಲೆ, ಶಿಲ್ಪಕಲೆಗಳ ಪ್ರದರ್ಶನಕ್ಕೆ ಮತ್ತು ವಾದ್ಯ ಪರಿಕರಗಳುು ಹಾಗೂ ವೇಷಭೂಷಣಗಳ ಖರೀದಿಗೆ,  ಎಂದು ಹದಿನಾರು ಲಕ್ಷ ರೂಪಾಯಿಗಳನ್ನು, ಪ್ರಾಯೋಜಿತ ಕಾರ್ಯಕ್ರಮಗಳಿಗೆ ಗೌರವ ಸಂಭಾವನೆ ನೀಡಲು ಎಪ್ಪತ್ತು‌ ಲಕ್ಷ ರೂಪಾಯಿಗಳನ್ನು ಪರಿಷ್ಕರಿಸಿ ನೀಡಲು ಜಿಲ್ಲಾಧಿಕಾರಿಯವರ ಮೂಲಕ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in arts »

ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ
ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ
ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ

ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ
ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ

ಬೆಂಗಳೂರು: ರಂಗ ನಿರ್ದೇಶಕ ಶಿವಲಿಂಗಯ್ಯ ನವರು ನಿರ್ದೇಶಿಸಿದ ಮಹಾಪೌರ್ಣಿಮೆ ನಾಟಕವು ಬಡಜನರ ದನಿಯಾಗಿದೆ, ಒಂದಲ್ಲಾ ಹತ್ತು ಬಾರಿ ನೋಡಿದರೂ ಮತ್ತೊಮ್ಮೆ ನೋಡಬ

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗ

20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ  ಶುಭಾಪುಂಜಾ
20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.


ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ

ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂ

ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್

ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್

ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ

ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದ

ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ
ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ

ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ,

ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*
ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂ

Top Stories »  


Top ↑