"ನಾಡೋಜ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ "
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ವತಿಯಿಂದ ದಿನಾಂಕ 26/06/2018 ನೇ ಮಂಗಳವಾರ ಸಂಜೆ 05:00 ಗಂಟೆಗೆ ಬೆಂಗಳೂರಿನ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ತೊಗಲುಗೊಂಬೆ ಕಲಾವಿದ ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ರವರಿಗೆ ನಾಡೋಜ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು.
ಕರ್ನಾಟಕ ಜಾನಪದ ಪರಿಷತ್ತು ಮತ್ತು ಹೆಚ್ ಎಲ್ ನಾಗೇಗೌಡರ ಬಗ್ಗೆ;
ದಿವಂಗತ ಹೆಚ್ ಎಲ್ ನಾಗೇಗೌಡರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದವರು, ಅಧಿಕಾರದಲ್ಲಿದ್ದಾಗಲೇ ಮೂಲ ಜಾನಪದದ ಬಗ್ಗೆ ಅಪಾರ ತಿಳುವಳಿಕೆಯ ಜೊತೆಗೆ ಅಭಿಮಾನ ಬೆಳೆಸಿಕೊಂಡಿದ್ದರು.
ಮೂಲ ಜಾನಪದ ಕಲೆ, ಸಾಹಿತ್ಯ ಮತ್ತು ಪರಿಕರಗಳನ್ನು ಉಳಿಸಲು ಕೆಲವು ಸ್ನೇಹಿತರ ತಂಡ ಕಟ್ಟಿಕೊಂಡು ಹಳ್ಳಿ ಹಳ್ಳಿಗಳನ್ನು ಸಂಪರ್ಕಿಸಿ ಹಳ್ಳಿಗರು ನಿತ್ಯ ಉಪಯೋಗಿಸುತಿದ್ದ ಹಲವಾರು ರೀತಿಯ ಅದರಲ್ಲೂ ವ್ಯವಸಾಯ ಪರಿಕರಗಳನ್ನು ಸಂಗ್ರಹಿಸುವ ಜೊತೆಗೆ ಜಾನಪದ ಕಲೆಗಳನ್ನು, ಕಲಾತಂಡಗಳನ್ನು ಹಾಗೂ ಮೂಲ ಜನಪದ ಗೀತೆಗಳನ್ನು ಸಂಗ್ರಹಿಸಿ ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ಚನ್ನಪಟ್ಟಣದ ನಡುವೆ ಜಾನಪದ ಲೋಕ ವನ್ನು ಸೃಷ್ಟಿಸಿ ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಿಂದಿನ ಪ್ರಶಸ್ತಿ ಪುರಸ್ಕೃತರು;
ಶ್ರೀಯುತ ಹೆಚ್ ಎಲ್ ನಾಗೇಗೌಡ ರಿಗೆ ನೂರು ವಸಂತಗಳು ತುಂಬಿದಕ್ಕಾಗಿ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ ತಿಮ್ಮೇಗೌಡರು ಮತ್ತು ಆಡಳಿತ ಮಂಡಳಿಯು ಈ ಪ್ರಶಸ್ತಿಯನ್ನು ಕೊಡಲು ತೀರ್ಮಾನಿಸಿದರು. 2015 ನೇ ಸಾಲಿನಲ್ಲಿ ಪದ್ಮಶ್ರೀ, ಪದ್ಮಭೂಷಣ ಪಾಂಡವಾನಿ ಕಲಾವಿದೆ ಶ್ರೀ ತೀಜನ್ ಬಾಯಿ ರವರಿಗೆ, 2016 ನೇ ಸಾಲಿನಲ್ಲಿ ಮಣಿಪಾಲದ ಹಸ್ತಶಿಲ್ಪ ಟ್ರಸ್ಟ್ ನ ರೂವಾರಿ ಶ್ರೀ ವಿಜಯನಾಥ ಶೆಣೈ ರವರಿಗೆ, 2017 ನೇ ಸಾಲಿನಲ್ಲಿ ರಾಜಸ್ಥಾನಿ ಜನಪದ ಸೂಫಿ ಹಾಗೂ ಕಬೀರ್ ತಾತ್ವಿಕ ಹಿನ್ನೆಲೆಯ ಪ್ರಸಿದ್ಧ ಸಂಗೀತ ಕಲಾವಿದ ಪದ್ಮಶ್ರೀ, ಪದ್ಮಭೂಷಣ ಶ್ರೀ ಮುಖ್ತಿಯಾರ್ ಅಲಿ ರವರಿಗೆ ಹಾಗೂ 2018 ನೇ ಸಾಲಿನ ಪ್ರಶಸ್ತಿಯನ್ನು ಬಳ್ಳಾರಿ ಜಿಲ್ಲೆಯ ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ರವರಿಗೆ ನೀಡಲಾಗುತ್ತಿದೆ.
ಈ ಸಾಲಿನ ಪ್ರಶಸ್ತಿ ಪುರಸ್ಕೃತರ ಬಗ್ಗೆ ಒಂದಿಷ್ಟು;
84 ವಯಸ್ಸಿನ ಉತ್ಸಾಹಿ ತೊಗಲುಗೊಂಬೆಯ ಕಲಾವಿದರಾದ ಶ್ರೀ ಬೆಳಗಲ್ಲು ವೀರಣ್ಣ ರವರು ಅತ್ಯಂತ ಸುಂದರ, ಕಲಾತ್ಮಕ ಕುಸುರಿಯ ಚರ್ಮದ ತೊಗಲುಗೊಂಬೆಗಳ ಆಟ ಪರಂಪರೆಗೆ ಸೇರಿದ ಕುಟುಂಬದವರು.
ಇವರು ರಂಗಭೂಮಿಯಲ್ಲಿನ ರಂಗಭಾಷೆ, ರಂಗಸಂಗೀತ, ಸ್ವಾತಂತ್ರ್ಯ ಸಂಗ್ರಾಮ, ಬಾಪು ಪ್ರವಾದಿ ಬಸವೇಶ್ವರ, ಸೀತಾಪಹರಣ ಹಾಗೂ ಕನಕದಾಸರು ಹೀಗೆ ಅನೇಕಾನೇಕ ಮಹನೀಯರ ಬಗ್ಗೆ ತೊಗಲುಗೊಂಬೆಯಾಟವನ್ನು ನಡೆಸಿಕೊಟ್ಟಿದ್ದಾರೆ.
ಭಾರತವಲ್ಲದೇ ಸ್ವಿಟ್ಜರ್ಲೆಂಡ್, ಜರ್ಮನಿ ಹಾಗೂ ಥೈಲ್ಯಾಂಡ್ ದೇಶಗಳಲ್ಲಿಯೂ ಇವರ ತಂಡ ಪ್ರದರ್ಶನ ನೀಡಿದೆ.
ಹಲವು ಪ್ರಶಸ್ತಿಗಳ ಸರಮಾಲೆ;
ಶ್ರೀ ಬೆಳಗಲ್ಲು ವೀರಣ್ಣ ರವರಿಗೆ ನಾಡೋಜ, ರಾಜ್ಯೋತ್ಸವ, ಜಾನಪದಶ್ರೀ, ಕೇಂದ್ರ ಸರ್ಕಾರದ ಸಂಗೀತ ನಾಟಕ ಅಕಾಡೆಮಿ, ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಜಾನಪದ ಲೋಕದ ದೊಡ್ಡಮನೆ ಪ್ರಶಸ್ತಿ, ಗುಜರಾತಿನ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ, ಗೋಮತಿ ಪ್ರಶಸ್ತಿ, ತಮಿಳುನಾಡಿನ ಕಲೈಭೂಷಣ ಪ್ರಶಸ್ತಿ ಸೇರಿದಂತೆ ಅನೇಕಾ ಬಿರುದುಗಳು ಸಂದಿವೆ.
ಕಾರ್ಯಕ್ರಮ;
ದಿವ್ಯಸಾನಿಧ್ಯ ಹಾಗೂ ಉದ್ಘಾಟನೆ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳು ವಹಿಸುವರು.
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಡಾ ಜಯಮಾಲ ರಾಮಚಂದ್ರ ರವರು ಪ್ರಶಸ್ತಿ ಪ್ರದಾನ ಮಾಡುವರು.
ಮುಖ್ಯ ಅಥಿತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಶ್ರೀ ಎ ಜೆ ಸದಾಶಿವ ರವರು, ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ ತಿಮ್ಮೇಗೌಡರು, ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಯನ್ನು ಮ್ಯಾನೇಜಿಂಗ್ ಟ್ರಷ್ಟಿಯಾದ ಆದಿತ್ಯ ನಂಜರಾಜ್ ರವರು, ವಂದಾನಾರ್ಪಣೆಯನ್ನು ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ ರಾಜೇಗೌಡ ಹೊಸಹಳ್ಳಿ ರವರು ನಡೆಸಿಕೊಡಲಿದ್ದಾರೆ.
ಸಂಜೆ 06:30 ಕ್ಕೆ ಪ್ರಖ್ಯಾತ ಯಕ್ಷಗಾನ ಹಾಸ್ಯ ಕಲಾವಿದರಾದ ಶ್ರೀ ಶ್ರೀಧರ ಹೆಗ್ಗಡೆ ಚಪ್ಪರಮನೆ ಮತ್ತು ಸಂಗಡಿಗರಿಂದ 'ಮಂಥರೆಯ ಧುರ್ಮಂತ್ರ' ಎಂಬ ಯಕ್ಷಗಾನ ಪ್ರಸಂಗವನ್ನು ನಡೆಸಿಕೊಡಲಿದ್ದಾರೆ.
ಸರ್ವರಿಗೂ ಸ್ವಾಗತ ಕೋರುವವರು ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗ.
ಗೋ ರಾ ಶ್ರೀನಿವಾಸ...
ಕರ್ನಾಟಕ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷರು ಚನ್ನಪಟ್ಟಣ.
ಮೊ: 9845856139.
Recent news in arts »
ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ
ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು
ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ
ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ
ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ
ಬೆಂಗಳೂರು: ರಂಗ ನಿರ್ದೇಶಕ ಶಿವಲಿಂಗಯ್ಯ ನವರು ನಿರ್ದೇಶಿಸಿದ ಮಹಾಪೌರ್ಣಿಮೆ ನಾಟಕವು ಬಡಜನರ ದನಿಯಾಗಿದೆ, ಒಂದಲ್ಲಾ ಹತ್ತು ಬಾರಿ ನೋಡಿದರೂ ಮತ್ತೊಮ್ಮೆ ನೋಡಬ
ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗ
20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ
ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.
ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂ
ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದ
ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ
ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ,
ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*
ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂ
ಪ್ರತಿಕ್ರಿಯೆಗಳು