ತಾಲ್ಲೂಕಿನ ಅಭಿವೃದ್ಧಿ ಬಿಟ್ಟು, ಬೇಡದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಹೆಚ್ಡಿಕೆ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಸು
ಚನ್ನಪಟ್ಟಣ: ಆಯಾಯ ಕ್ಷೇತ್ರದ ಶಾಸಕರು ಮೊದಲಿಗೆ ತಂತಮ್ಮ ಕ್ಷೇತ್ರದ ಅಭಿವೃದ್ಧಿ ಗೆ ಒತ್ತು ನೀಡಬೇಕೆ ವಿನಹ ಬೇರೆಯವರನ್ನು ತೆಗಳವುದನ್ನೇ ವೃತ್ತಿ ಮಾಡಿಕೊಂಡಿದ್ದರೆ ಅದು ಅವರಿಗೆ ಶೋಭೆ ತರುವುದಿಲ್ಲ.ತಾಲೂಕಿನಲ್ಲಿ ನಾನು ನಡೆಸುವ ಜನಸಂಪರ್ಕಸಭೆಗೆ ಸಂಬಂಧಿಸಿದಂತೆ ಕೆಲವರು ಸಂಸದರು ಇಲ್ಲಿಗೆ ಏಕೆ ಬರಬೇಕು ಅವರಿಗೆ ಏನು ಅಧಿಕಾರ ಇದೆ ಎಂದು ಪ್ರಶ್ನಿಸುತ್ತಾರೆ. ನನಗೆ ಅಧಿಕಾರ ನೀಡಿರುವುದು ಜನ
ಒಳ್ಳೆಯವರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ, ರೌಡಿ ಶೀಟರ್ ಗಳಿಗೆ ಪಾಠ ಮಾಡಿದ ಡಿವೈಎಸ್ಪಿ ಕೆ ಸಿ ಗಿರಿ
ಚನ್ನಪಟ್ಟಣ: ರೌಡಿಶೀಟರ್ ಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು. ಸಮಾಜದಲ್ಲಿ ತಮ್ಮ ನಡತೆಯನ್ನು ಸುಧಾರಿಸಿಕೊಳ್ಳಬೇಕು. ತಮ್ಮ ಸನ್ನಡತೆಯ ಆಧಾರದ ಮೇಲೆ ರೌಡಿ ಶೀಟರ್ ನಿಂದ ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ, ಇಲ್ಲದಿದ್ದಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಡಿವೈಎಸ್ಪಿ ಕೆ.ಸಿ.ಗಿರಿ ತಿಳಿಸಿದರು.ನಗರದ ಪುರಪೊಲೀಸ್ ಠಾಣೆ ಆವರಣದಲ್ಲಿ ತಾಲ್ಲೂಕಿನ ಎಲ್ಲಾ ಪ
ಟಿಎಪಿಸಿಎಂಎಸ್ ಅಕ್ಕಿ ಹಗರಣದ ತನಖೆ ಮುಗಿಯುವ ತನಕ ಚುನಾವಣೆ ಬೇಡ ಎಸ್ ಗಂಗಾಧರ
ಚನ್ನಪಟ್ಟಣ: ಟಿಎಪಿಸಿಎಂಎಸ್ನಲ್ಲಿ ೫೦ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ಕಿ ಕಳುವಾಗಿದೆ, ಅದು ಜೆಡಿಎಸ್ ಪಕ್ಷದ ಬೆಂಬಲಿತರೇ ಅಧಿಕಾರ ನಡೆಸುತ್ತಿದ್ದಾಗಲೇ ಹಗರಣ ನಡೆದಿದ್ದು, ಮತ್ತೆ ಅವರೇ ಅಧಿಕಾರಕ್ಕೆ ಬಂದಲ್ಲಿ ಈ ಹಗರಣವನ್ನು ಮುಚ್ಚಿಹಾಕಬಹುದು, ಇಲ್ಲದಿದ್ದಲ್ಲಿ ನಾವು ಬೀದಿಗೆ ಬರಬೇಕಾಗುತ್ತದೆ ಎಂಬ ಆತಂಕದಲ್ಲಿ ಜೆಡಿಎಸ್ನವರು ಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ. ಟಿಎಪಿಸಿಎಂಎಸ್ ಗೋದಾಮಿನಿಂದ ಅಕ್ಕಿ ನಾಪತ್ತೆಯಾಗಿರುವ ಹಗರಣದ ತನಿಖೆ ಪೂರ್ಣಗೊಂ
ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್
ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ ಬಾನು ಅವರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಬೇಕು ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸೀಲ್ ಅಲಿಖಾನ್ ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಸ
ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ
ಚನ್ನಪಟ್ಟಣ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯ ವಾಸೀಲ್ ಅಲಿಖಾನ್ ಮತ್ತು ಅಬಿದಾಬಾನು ರವರ ನಡುವೆ ವಾಗ್ವಾದ ನಡೆದಿತ್ತು. ಅದೇ ದಿನ ನಗರಸಭೆ ಆವರಣದಲ್ಲಿ ವಾಸೀಲ್ ಅಲಿಖಾನ್ ಮತ್ತು ಅಬಿದಾಬಾನು ರವರ ಪುತ್ರ ಸುಹೇಲ್ ಮತ್ತು ಸ್ನೇಹಿತರು ಹೊಡೆದಾಡಿಕೊಂಡಿದ್ದರು. ನಂತರ ವಾಸೀಲ್ ಅಲಿಖಾನ್ ರವರ ಪುತ್ರ ಮತ್ತು ಸುಹೇಲ್ ಹಾಗೂ ಸ್ನೇಹಿತರು ನಗರಸಭೆಯ ಹೊರಗೆ ಕಿತ್ತಾಡಿಕೊಂಡಿದ್ದರು. ಪುರ ಪೋಲಿಸ್ ಠಾಣೆಯಲ್ಲಿ ಪರ
ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು
ಚನ್ನಪಟ್ಟಣ: ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ನಡೆದ ಮಾತಿನ ಚಕಮಕಿಯ ನಂತರ ಹೊರ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದಸ್ಯರುಗಳ ಜೊತೆಗೆ ಅವರ ಕುಟುಂಬದವರು ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಲ್ಲದೆ, ಪಾದರಕ್ಷೆಗಳ ಮೂಲಕ ಹೊಡೆದಾಡಿಕೊಂಡಿದ್ದು, ಇಬ್ಬರು ನಗರಸಭೆ ಸದಸ್ಯರು ಪುರ ಪೋಲಿಸ್ ಠಾಣೆಗೆ ಪರಸ್ಪರರ ವಿರುದ್ಧ ದೂರು, ಪ್ರತಿದೂರು ನೀಡಿರುವ ಘಟನೆ ನಡೆದಿದೆ.
ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್
ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದರಲ್ಲಿ ಅರ್ಥವಿಲ್ಲಾ. ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು. ಇದರ ಸಂಪೂರ್ಣ ಹೊಣೆಯನ್ನು ಮಾಜಿ ಮುಖ್ಯಮಂತ್ರಿ, ಹಾಲಿ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರು ಹೊರಬೇಕು ಎಂದು ರಾಮ
ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು
ಚನ್ನಪಟ್ಟಣ: ಹಿಂದಿನ ಉಪಾಧ್ಯಕ್ಷೆ ಹಸೀನಾ ಫರ್ಹೀನ್ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ 27ನೇ ವಾರ್ಡ್ನ ನಿಗಾರ್ ಬೇಗಂ ಹೊರತು ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಬಿನೋಯ್ ರವರು ನಿಗಾರ್ ಬೇಗಂ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ
ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯೆಲ್ಲೆಡೆ ಬರದ ಪರಿಸ್ಥಿತಿ ಇದ್ದು, ಎಲ್ಲಾ ಇಲಾಖೆಗಳು ರೈತರಿಗೆ ಸ್ಪಂದಿಸಬೇಕು. ವಿಶೇಷವಾಗಿ ಕೃಷಿ ಇಲಾಖೆ, ರೇಷ್ಮೇ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಿಸಿ ರೈತರಿಗೆ ನೆರವಾಗಿ, ಸರ್ಕಾರದ ಹಣ
ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಚನ್ನಪಟ್ಟಣ, ನ.೦೬: ಜನಸಂಪರ್ಕ ಸಭೆ ಹೆಸರಲ್ಲಿ ಅಧಿಕಾರಿಗಳನ್ನು ಬೆದರಿಸುವ ಸಂಸದರಿಗೆ ಸಾತನೂರು ಸರ್ಕಲ್ ರಸ್ತೆಯ ಗುಂಡಿಗಳು ಕಾಣಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಸದರ ವಿರುದ್ಧ ಪರೋಕ್ಷವಾಗಿ, ವ್ಯಂಗ್ಯವಾಗಿ ವಾಗ್ದಾಳಿ ಮಾಡಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ಇ-ಆಡಳಿತ ತಂತ್ರಾಂಶದ ಸೇವೆಗೆ ಸೋಮವಾರ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದ ವೇಳೆ ಕ್