ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ
ಚನ್ನಪಟ್ಟಣಃ ತಾಲೂಕಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಕೇಂದ್ರದಲ್ಲಿ ಮತದಾರರು ಶಾಂತಿಯುತವಾಗಿ ಮತಚಲಾಯಿಸಿದರು. ಸ್ಥಳೀಯ ಪೋಲಿಸರು, ಅರೆಸೇನಾ ಪಡೆ ಹಾಗೂ ಚುನಾವಣಾಧಿಕಾರಿಗಳ ಸಹಯೋಗದೊಂದಿಗೆ ಸಣ್ಣಪುಟ್ಟ ತಾಂತ್ರಿಕ ದೋಷ ಹಾಗೂ ಮಾತಿನ ಚಕಮಕಿ ಹೊರತು ಪಡಿಸಿ ಯಾವುದೇ ಅಹಿತಕರ ಘಟನೆಗಳು ಜರುಗದೆ ನಿರಾತಂಕವಾಗಿ ನಡೆದಿದೆ.
ತಾಲ್ಲೂಕಿನ ಕೆಲವೊಂದು ಗ್ರಾಮಗಳಲ್ಲಿ ಮತ್ತು ನಗರದ ಕೆಲ ವಾರ್ಡ್ಗಳಲ್ಲಿ
ಜೆಡಿಎಸ್. ಬಿಜೆಪಿ ಕಾರ್ಯಕರ್ತರ ನಡುವೆ ಮತಗಳ ಬಗ್ಗೆ ಜಟಾ ಪಟಿ ನಡೆದ ಘಟನೆಗಳು ಸಹ ಕಂಡು ಬಂದವು.
ಮಾಜಿ ಸಚಿವ ವಿಧಾನಪರಿಷತ್ ಸದಸ್ಯ ಬಿಜೆಪಿ ಅಭ್ಯರ್ಥಿಯಾದ
ಸಿ.ಪಿ.ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆ ಗ್ರಾಮದಲ್ಲಿ, ಮಾಜಿ ಶಾಸಕ ಎಂ.ಸಿ.ಅಶ್ವಥ್ ನಗರದಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಸೋಗಾಲ ಗ್ರಾಮದಲ್ಲಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರತ್ ಚಂದ್ರ ವಿರೂಪಾಕ್ಷಿಪುರ ಗ್ರಾಮದಲ್ಲಿ ತಮ್ಮ ತಮ್ಮ ಮತ
ಕೇಂದ್ರಗಳಲ್ಲಿ ಮತಚಲಾಯಿಸಿದರೆ ಹಿರಿಯ ಮುಖಂಡರು.
ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿ
ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಿ ಎಂದು
ಕೇಳಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.
ಕಾಂಗ್ರೆಸ್. ಬಿಎಸ್ಪಿ
ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು. ಅಭಿಮಾನಿಗಳು ನಿಶಬ್ಧವಾಗಿ
ಮತಯಾಚನೆ ಮಾಡುತ್ತಿದ್ದರು.
ಗ್ರಾಮಾಂತರ ಪ್ರದೇಶ, ನಗರ ಪ್ರದೇಶದಲ್ಲಿ ಬೆಳಿಗ್ಗೆಯಿಂದ
ಸಂಜೆಯವರೆಗೂ ಮತಚಲಾಯಿಸಲು ಆಗಮಿಸುತ್ತಿದ್ದ
ವಿಶೇಷ ಚೇತನರು. ಹಿರಿಯ ಮುತ್ಸದ್ದಿಗಳು ಸೇರಿದಂತೆ ಮಹಿಳೆಯರಿಗೆ
ವಾಹನಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಹಾಗೂ ಪಕ್ಷದ
ಕಾರ್ಯಕರ್ತರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತಚಲಾಯಿಸಲಿ
ಎಂಬ ಉದ್ಧೇಶದಿಂದ ಮತದಾರರ ಮನೆಗಳಿಗೆ ತೆರಳಿ ಅಲ್ಲಿಂದಲೆ ತಮ್ಮ
ವಾಹನಗಳ ಮೂಲಕ ಮತದಾರರನ್ನು ಕೇಂದ್ರಕ್ಕೆ
ಕರೆದುಕೊಂಡು ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಅದರಲ್ಲೂ
ಗ್ರಾಮಾಂತರಗಳಲ್ಲಿ ಬಿಜೆಪಿ. ಜೆಡಿಎಸ್. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ
ಸಂಖ್ಯೆಯಲ್ಲಿ ಮತ ಚೀಟಿಗಳನ್ನು ಹಂಚುವ ಮೂಲಕ ತಮ್ಮ
ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡುತ್ತಿದ್ದರು.
ರಾಷ್ಟ್ರೀಯ ಪಕ್ಷದ ಮುಖಂಡರು. ಪ್ರಾದೇಶಿಕ ಪಕ್ಷದ
ಮುಖಂಡರು ಜವಾಬ್ಧಾರಿಯುತವಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ
ಬೆಳಿಗ್ಗೆಯಿಂದ ಸಂಜೆಯವರೆಗೂ ಕಾದು ಕುಳಿತು ಮತ
ಚಲಾಯಿಸುವಂತೆ ಕೋರುತ್ತಿದ್ದ ಜೊತೆಯಲ್ಲಿ ಮುಂದೆ
ಆಗಬೇಕಾಗಿರುವ ಅಭಿವೃದ್ಧಿಗಳ ಬಗ್ಗೆ ತಿಳಿಸಿ ಈ ಬಾರಿ ನಮಗೆ ಬೇಕಾಗಿರುವ ಶಾಸಕರನ್ನು ಆಯ್ಕೆ ಮಾಡುವ ಮೂಲಕ ತಾಲೂಕಿನ ಅಭಿವೃದ್ಧಿಗೆ
ಸಹಕಾರ ನೀಡಿ ಎಂದು ಎಲ್ಲಾ ಪಕ್ಷದ ಮುಖಂಡರು ಮತಚಲಾಯಿಸಲು
ಕೇಂದ್ರಕ್ಕೆ ಹೋಗುತ್ತಿದ್ದ ಮತದರರ ಮನವೊಲಿಸಲು
ಮುಂದಾಗಿದ್ದರು. ಜೊತೆಯಲ್ಲಿ ಕೆಲ ಗ್ರಾಮಗಳಲ್ಲಿ ಪಕ್ಷ ಪಕ್ಷದ
ಕಾರ್ಯಕರ್ತರ ನಡುವೆ ಪರ-ವಿರೋಧ ಘೋಷಣೆಗಳು. ವಾದ-ವಿವಾದ ಹಾಗೂ ಜಗಳ ಕೂಗಾಟ ನಡೆಯುತಿತ್ತು. ಅದೇ ಹೊತ್ತಿನಲ್ಲಿ ಪೊಲೀಸ್
ಸಿಬ್ಬಂದಿ, ಸೈನಿಕರು ಶಾಂತಿ ವೈರುದ್ಯಗಳನ್ನು ಶಾಂತಿ ಗೊಳಿಸಿ
ಶಾಂತಿಯುತವಾಗಿ ಚುನಾವಣೆ ನಡೆಯುವಂತೆ ಮಾಡುವಲ್ಲಿ ಸಫಲರಾದರು.
*ಹತ್ತಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ವಿಳಂಬ*
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಯ್ಯದ್ ವಾಡಿ, ಮೆಹದಿ ನಗರ, ಟಿಪ್ಪುನಗರ, ಅಪ್ಪಗೆರೆ, ನೀಲಸಂದ್ರ, ನೀಲಕಂಠನಹಳ್ಳಿ, ನಾಗವಾರ, ಸೇರಿ ಸುಮಾರು ಹತ್ತಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಇವಿಎಂ ದೋಷ, ವಿವಿ ಪ್ಯಾಟ್ ಹಾಗೂ ಮತದಾರರು ಕೊನೆಗಳಿಗೆಯಲ್ಲಿ ಹೆಚ್ಚಾದ ಕಾರಣ ಬುಧವಾರ ರಾತ್ರಿ ಒಂಬತ್ತು ಗಂಟೆವರೆಗೂ ಮತದಾನವಾದ ಬಗ್ಗೆ ವರದಿಯಾಗಿದ್ದು, ಈ ಸಂಬಂಧ ತಾಲ್ಲೂಕು ಮುಖ್ಯ ಚುನಾವಣಾಧಿಕಾರಿ ಮುನೇಗೌಡ ಮಾಹಿತಿ ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು