ಕುವೆಂಪು ನಗರದ ಒಂದನೇ ತಿರುವಿನಲ್ಲಿ ವಾಹನಗಳ ದಟ್ಟಣೆ
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಒಂದನೇ ತಿರುವು ಸದಾ ಜನಜಂಗುಳಿ ಮತ್ತು ವಾಹನಗಳ ದಟ್ಟಣೆಯಿಂದ ಕೂಡಿದ್ದು ಪಾದಚಾರಿಗಳಿಗೆ ಹಾಗೂ ಆ ಭಾಗದ ನಿವಾಸಿಗಳಿಗೆ ಕಿರಿಕಿರಿಯನ್ನುಂಟು ಮಾಡಿದೆ. ಸದಾ ಜನಜಂಗುಳಿಯಿಂದ ಗಿಜಿಗುಡುವ ಕುವೆಂಪುನಗರದ ಒಂದನೇ ತಿರುವಿನಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಸಾರ್ವಜನಿಕರಿಗೆ ಇನ್ನಿಲ್ಲದ ರೀತಿಯಲ್ಲಿ ಸಮಸ್ಯೆ ಭಾದಿಸ ತೊಡಗಿದೆ.
ನಗರದ ಪ್ರಮುಖ ಜನಸಂದಣಿ ಸ್ಥಳಗಳಲ್ಲಿ ಇದೂ ಸಹ ಒಂದಾಗಿದ್ದು, ಇಲ್ಲಿನ ರಸ್ತೆಯಲ್ಲಿ ಸಬ್ ರಿಜಿಸ್ಟಾರ್ ಕಚೇರಿ, ಕರ್ನಾಟಕ ಬ್ಯಾಂಕ್, ಬರೋಡಾ ಬ್ಯಾಂಕ್, ಉಜ್ಜೀವನ್ ಬ್ಯಾಂಕ್, ಬಿಎಸ್ಎನ್ಎಲ್ ಕಛೇರಿ, ಸೆಂಟ್ ಆನ್ಸ್ ಸ್ಕೂಲ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಕಛೇರಿ, ಶ್ರೀ ರಾಮ್ ಪೈನಾನ್ಸ್, ಮುದ್ರಣಾಲಯ, ಗ್ರಂಥಾಲಯ, ಆಸ್ಪತ್ರೆ, ಮಾಲ್ ಸೇರಿದಂತೆ ಬಹುತೇಕ ಜನಸೇರುವ ಕಚೇರಿಗಳೆ ಅಧಿಕವಾಗಿದ್ದು ಜೊತೆಗೆ ಇದೊಂದು ಲಿಂಕ್ ರಸ್ತೆ ಯಾಗಿರುವ ಕಾರಣ ಬಹುತೇಕ ವಾಹನ ಸವಾರರು ಸಂಚಾರಕ್ಕೆ ಈ ರಸ್ತೆಯನ್ನೇ ಹೆಚ್ಚು ಆಶ್ರಯಿಸಿರುವ ಕಾರಣ ಈ ರಸ್ತೆಯಲ್ಲಿ ಸಂಚಾರ ಸಹಜವಾಗೇ ಹೆಚ್ಚಾಗಿರುತ್ತದೆ.
ಪ್ರತಿನಿತ್ಯ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಹ ಇಲ್ಲಿ ವಾಹನಗಳ ನಿಲುಗಡೆಗಾಗಲಿ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಸಂಚಾರಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ.
ವಿವಿಧ ಕಚೇರಿಗಳು, ಅಂಗಡಿ ಮುಂಗಟ್ಟುಗಳ ಮಾಲೀಕರುಗಳು, ಬ್ಯಾಂಕ್ ಸಿಬ್ಬಂದಿಗಳು ವಾಹನಗಳೆ ನೂರಾರು ಸಂಖ್ಯೆಯಲ್ಲಿದ್ದು ಇವರುಗಳ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ ಇಲ್ಲವಾಗಿದ್ದು, ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ಮಾತು ದೂರವೇ ಸರಿ. ಬೆಳಿಗ್ಗೆ 10 ರಿಂದ ಹಿಡಿದು ಸಂಜೆ 5 ರ ವರೆಗೆ ಈ ರಸ್ತೆಯಲ್ಲಿ ಸುಗಮವಾಗಿ ನಡೆದಾಡುವುದು ಕಷ್ಟವೆನಿಸುವಷ್ಟರ ಮಟ್ಟಿಗೆ ಇಲ್ಲಿ ಸದಾ ಜನಜಂಗುಳಿ ಸೇರಿರುತ್ತದೆ.
*ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಸಮಸ್ಯೆ :*
ಈ ರಸ್ತೆಯಲ್ಲಿ ಇಷ್ಟೂಂದು ಸಂಚಾರ ವ್ಯತ್ಯಯ ಉಂಟಾಗಲು ಇಲ್ಲಿರುವ ಸಬ್ ರಿಜಿಸ್ಟಾರ್ ಕಚೆರಿಯೇ ಪ್ರಮುಖ ಕಾರಣವಾಗಿದ್ದು, ದಿನಿನಿತ್ಯ ಈ ಕಚೇರಿಗೆ ನೂರಾರು ಮಂದಿ ಆಗಮಿಸತ್ತಾ ಅವರೊಟ್ಟಿಗೆ ನಾಲ್ಕಾರು ವಾಹನಗಳು, ಹತ್ತಾರು ಸಂಬಂಧಿಕರು ಆಗಮಿಸುವ ಕಾರಣ ಅವರ ವಾಹನಗಳ ನಿಲುಗಡೆಯಿಂದ ಹೆಚ್ಚಿನ ತೊಂದರೆ ಉಂಟಾಗುತ್ತಿದೆ.
*ಶಾಲಾ ಮಕ್ಕಳಿಗೆ ಸಾಕಷ್ಟು ತೊಂದರೆ:*
ಈ ರಸ್ತೆಯ ಕೊನೆಯಲ್ಲಿ ಸೆಂಟ್ ಆನ್ಸ್ ಶಾಲೆಯಿದ್ದು ಸಾವಿರಾರು ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದು, ಶಾಲಾ ವಾಹನಗಳು, ಪೋಷಕರುಗಳು ತಮ್ಮ ಮಕ್ಕಳನ್ನು ಕರೆತರಲು ಹಾಗೂ ಶಾಲೆಗೆ ಬಿಡಲು ಇದೇ ರಸ್ತೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ಇಲ್ಲಿನ ವಿಪರೀತ ವಾಹನದಟ್ಟನೆಯಿಂದ ಮಕ್ಕಳು ಮತ್ತು ಪೋಷಕರುಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
*ಪೊಲೀಸ್ ಇಲಾಖೆ ಗಮನಹರಿಸಿಲಿ:*
ಕಳೆದ ಹಲವಾರು ವರ್ಷಗಳಿಂದಲೂ ಈ ರಸ್ತೆಯಲ್ಲಿ ಸಂಚಾರಿ ಸಮಸ್ಯೆ ಇದ್ದು ಇದನ್ನು ಬಗೆಹರಿಸುವಂತೆ ಸಾಕಷ್ಟು ಬಾರಿ ಪೊಲೀಸ್ ಇಲಾಖೆಗೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಮನವಿ ಮಾಡಿಕೊಂಡಿದ್ದು, ಒಂದರೆಡು ದಿನ ಈ ಬಗ್ಗೆ ಚಿತ್ತ ಹರಿಸುವ ಇಲಾಖೆ ಸಹ ನಂತರ ಅದರತ್ತ ನಿರ್ಲಕ್ಷ್ಯ ವಹಿಸಿ ಸುಮ್ಮನಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಹಾಗೇ ಉಳಿದಿದ್ದು, ಇನ್ನಾದರೂ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಇದಕ್ಕೆ ಹಿತಶ್ರೀ ಹಾಡುವರೆ ಕಾದು ನೋಡಬೇಕಿದೆ.
ಕುವೆಂಪು ನಗರದ ರಸ್ತೆಯ ಸಂಚಾರದಟ್ಟಣೆ ಸಮಸ್ಯೆಯು ಗಮನಕ್ಕೆ ಬಂದಿದ್ದು, ಇಲ್ಲಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಗೆ ಬ್ರೇಕ್ ಹಾಕಲಾಗುವುದು ಹಾಗೂ ಸೂಚನಾಫಲಕಗಳನ್ನು ಅಳವಡಿಸುವ ಮುಖಾಂತರ ಜಾಗೃತಿ ಮೂಡಿಸಿ, ಬಿಲ್ಡಿಂಗ್ ಮಾಲೀಕರುಗಳಿಗೂ ಎಚ್ಚರಿಕೆ ಕೊಡುವ ಕೆಲಸ ಮಾಡಲಾಗುವುದು.
ನಾಳೆಯಿಂದಲೆ ರಸ್ತೆಯ ಒಂದು ಕಡೆ ಮಾತ್ರ ವಾಹನ ನಿಲ್ಲಿಸಲು ಸೂಚನೆ ನೀಡಿ ಸಿಬ್ಬಂದಿಯನ್ನು ನೇಮಿಸಲಾಗುವುದು.
*ಶುಭಾಂಬಿಕಾ ಪಿಎಸ್ಐ ಸಂಚಾರಿ ಪೊಲೀಸ್ ಠಾಣೆ.*
ನಗರದ ಪ್ರಮುಖ ರಸ್ತೆಯಾದ ಇದು ಲಿಂಕ್ ರಸ್ತೆಯಾಗಿದ್ದು, ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕಾರಣ ಬಹುತೇಕರು ಈ ರಸ್ತೆಯನ್ನೇ ಹೆಚ್ಚು ಬಳಕೆ ಮಾಡುತ್ತಾರೆ, ಆದರೆ ಇಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ಪಾದಾಚಾರಿಗಳು ನಡೆದಾಡಲು ಇಲ್ಲಿ ಕಷ್ಟಸಾಧ್ಯವಾಗಿದೆ, ಕೆಲವಾರು ಬಾರಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಗಳು ಸಹ ನಡೆದಿದ್ದು, ಸಂಚಾರಿ ಪೊಲೀಸರು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕಾಗಿದೆ.
*ಶಿವರಾಮ್(ಕೆಂಪ), ಮಾ.ಗ್ರಾ.ಪಂ.ಸದಸ್ಯರು.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು