ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.

ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ ದೇವಾಲಯಗಳಿಗೆ ಬಳಸಬಾರದು ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು, ವಿಶ್ರಾಂತ ಪ್ರಾಧ್ಯಾಪಕರು, ಜಾನಪದ ವಿದ್ವಾಂಸರು ಆದ ಡಾ ಕಾಳೇಗೌಡ ನಾಗವಾರ ರವರು ತಿಳಿಸಿದರು. ಅವರು ಸೋಮವಾರ ವಂದಾರಗುಪ್ಪೆ ಗ್ರಾಮದ ಬಳಿ ಇರುವ ಹೊಂಬೇಗೌಡ ಶಿಕ್ಷಣ ಸಂಸ್ಥೆಯ ಕುವೆಂಪು ಪ್ರಥಮ ದರ್ಜೆ ಕಾಲೇಜು ಮತ್ತು ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.
ಡಾ ಬಿ ಆರ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ನಾವೆಲ್ಲಾ ಜೀವಿಸುತ್ತಿದ್ದೇವೆ ಸಾರ್ವಜನಿಕರ ತೆರಿಗೆ ಹಣದಿಂದ ದೇವಾಲಯ ಕಟ್ಟಬಾರದು, ಜ್ಞಾನಾರ್ಜನೆಗಾಗಿ ಶಾಲೆಗಳನ್ನು ಕಟ್ಟಬೇಕು, ಆಸ್ಪತ್ರೆಗಳನ್ನು ನಿರ್ಮಿಸಬೇಕು, ಜನರ ಮತ್ತು ರಾಜ್ಯ ರಾಷ್ಟ್ರದ ಅಭಿವೃದ್ಧಿಗಾಗಿ ಬಳಸಬೇಕು. ರಾಷ್ಟ್ರಪತಿ, ಕುಲಪತಿ ಎನ್ನುವುದು ಅವಿವೇಕತನ, ಈ ಪದಗಳು ಗಂಡಸರಿಗೆ ಮಾತ್ರ ಅನ್ವಯವಾಗುತ್ತವೆ, ರಾಷ್ಟ್ರಾಧ್ಯಕ್ಷ ಎನ್ನುವುದು ಸೂಕ್ತ ಪದ, ನಾವು ದೇವಾಲಯದ ಮುಂದೆ ಕ್ಯೂ ನಿಲ್ಲುವುದಲ್ಲಾ, ಗ್ರಂಥಾಲಯದ ಮುಂದೆ ನಿಲ್ಲಬೇಕು ಎಂದರು.
ವಿದ್ಯಾರ್ಥಿಗಳು ಎಲ್ಲಾ ಪ್ರಾಕಾರಗಳನ್ನು ಓದಿಕೊಳ್ಳಬೇಕು ಅಸ್ಪೃಶ್ಯತೆ ಆಚರಣೆ ಮಾಡಬಾರದು. ಅಂಬೇಡ್ಕರ್, ಲೋಹಿಯಾ, ಕರಿಯಪ್ಪ, ಬಸವಲಿಂಗಪ್ಪ ರವಂತವರು ಹುಟ್ಟಬೇಕು. ಕುವೆಂಪು ಮತ್ತು ತೇಜಸ್ವಿ ಯವರ ಕೃತಿಗಳನ್ನು ಓದಬೇಕು.
ಏಕಲವ್ಯ ನ ಬೆರಳು ಕತ್ತರಿಸಿದ ಗುರು, ಸೀತೆ, ದ್ರೌಪದಿ ನಡೆಸಿಕೊಂಡು ಬಂದಂತಹ ಧರ್ಮ ಗ್ರಂಥಗಳು ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದರು. ಹೆಸರು ಮುಖ್ಯವಲ್ಲ, ಕೆಲಸ ಮುಖ್ಯವಾಗಬೇಕು. ಸಾಹಿತ್ಯ ಎನ್ನುವುದು ಸಮಗ್ರವಾಗಿರಬೇಕು. ಸಾಹಿತ್ಯ ಮತ್ತು ಸಂಸ್ಕೃತಿಗಳ ನಡುವಿನ ಅರ್ಥವನ್ನು ತಿಳಿದುಕೊಳ್ಳಬೇಕು, ವಿದ್ಯಾರ್ಥಿಗಳು ಸಮಾಜವನ್ನು ಅರಿಯಬೇಕು ಎಂದು ಅರುಹಿದರು.
ನಾವೆಲ್ಲರೂ ಶ್ರಮಜೀವಿಗಳ ಋಣಿಯ ಮಕ್ಕಳು ಎಂದರು. ನೇಗಿಲಯೋಗಿ, ಶೂದ್ರ ತಪಸ್ವಿ ಎಂಬುದರ ವಿಶಾಲ ಅರ್ಥವನ್ನು ತಿಳಿಯಬೇಕು.
ಅಕ್ಕಾ ಮಹಾದೇವಿ ವಚನ ಇಡೀ ವಿಶ್ವದಲ್ಲೇ ಇಲ್ಲ. ಬಸವಣ್ಣ ದಲಿತ ಕೇರಿಗೆ ಹೋಗಿ ಬಂದಾಗ ಬ್ರಾಹ್ಮಣರು ಕುಲಗೆಟ್ಟು ಬಂದಿದ್ದಾನೆಂದು ಬೊಬ್ಬಿಟ್ಟಾಗ ನಾನು ಪುಣ್ಯಾತ್ಮರ ಕೇರಿಗೆ ಹೋಗಿ ಪವಿತ್ರನಾಗಿ ಬಂದಿದ್ದೇನೆ ಎಂದು ಹೇಳಿದರ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಸೆಕೆಂಡುಗಳೂ ಸಹ ಒಳ್ಳೆಯದೇ ಆಗಿವೆ, ಕೆಟ್ಟ ಕಾಲ ಎಂಬುದಿಲ್ಲ, ರಾಹುಕಾಲ ಎಂಬುವುದನ್ನು ನಂಬದೆ ತೋಳ್ಬಲ ಮತ್ತು ತಮ್ಮ ಮನೋಬಲ ನಂಬಿ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಂತರರಾಷ್ಟ್ರೀಯ ಜಾನಪದ ಗಾಯಕರಾದ ಅಪ್ಪಗೆರೆ ತಿಮ್ಮರಾಜು ರವರು ಮೂಲ ಜಾನಪದ ಗೀತೆಗಳನ್ನು ವಿಭಿನ್ನವಾಗಿ ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಪ್ಪ, ಸಂಗ್ರಾಮ ಟಿವಿ ಯ ಪ್ರಧಾನ ಸಂಪಾದಕ ಗೋ ರಾ ಶ್ರೀನಿವಾಸ, ಪ್ರಾಂಶುಪಾಲ ಡಾ ದೊಡ್ಡಸಿದ್ದಯ್ಯ, ಐಟಿಐ ಪ್ರಾಂಶುಪಾಲ ಶಂಕರಲಿಂಗೇಗೌಡ, ಅಧೀಕ್ಷಕ ಜಯರಾಮು, ಉಪನ್ಯಾಸಕರಾದ ಡಾ ರವೀಂದ್ರ, ಡಾ ತೇಜಾವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »

ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್
ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ

ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ

ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು
ಚನ್ನಪಟ್ಟಣ: ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ನಡೆದ ಮಾತಿನ ಚಕಮಕಿಯ ನಂತರ ಹೊರ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದಸ್ಯರುಗಳ ಜೊತೆಗೆ

ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್
ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದ

ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು
ಚನ್ನಪಟ್ಟಣ: ಹಿಂದಿನ ಉಪಾಧ್ಯಕ್ಷೆ ಹಸೀನಾ ಫರ್ಹೀನ್ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು. ಚುನಾ

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ
ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾ

ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಚನ್ನಪಟ್ಟಣ, ನ.೦೬: ಜನಸಂಪರ್ಕ ಸಭೆ ಹೆಸರಲ್ಲಿ ಅಧಿಕಾರಿಗಳನ್ನು ಬೆದರಿಸುವ ಸಂಸದರಿಗೆ ಸಾತನೂರು ಸರ್ಕಲ್ ರಸ್ತೆಯ ಗುಂಡಿಗಳು ಕಾಣಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್.

೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ
ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸ

ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ
ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಮನೆ ಇಲ್ಲದ ನಾಲ್ಕು ಮಂದಿ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದು,

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್
ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್ಅವರು ಅವಿರೋಧವಾಗಿ ಆಯ್ಕೆಯಾದರು.
ಪ್ರತಿಕ್ರಿಯೆಗಳು