ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.
ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ ದೇವಾಲಯಗಳಿಗೆ ಬಳಸಬಾರದು ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು, ವಿಶ್ರಾಂತ ಪ್ರಾಧ್ಯಾಪಕರು, ಜಾನಪದ ವಿದ್ವಾಂಸರು ಆದ ಡಾ ಕಾಳೇಗೌಡ ನಾಗವಾರ ರವರು ತಿಳಿಸಿದರು. ಅವರು ಸೋಮವಾರ ವಂದಾರಗುಪ್ಪೆ ಗ್ರಾಮದ ಬಳಿ ಇರುವ ಹೊಂಬೇಗೌಡ ಶಿಕ್ಷಣ ಸಂಸ್ಥೆಯ ಕುವೆಂಪು ಪ್ರಥಮ ದರ್ಜೆ ಕಾಲೇಜು ಮತ್ತು ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.
ಡಾ ಬಿ ಆರ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ನಾವೆಲ್ಲಾ ಜೀವಿಸುತ್ತಿದ್ದೇವೆ ಸಾರ್ವಜನಿಕರ ತೆರಿಗೆ ಹಣದಿಂದ ದೇವಾಲಯ ಕಟ್ಟಬಾರದು, ಜ್ಞಾನಾರ್ಜನೆಗಾಗಿ ಶಾಲೆಗಳನ್ನು ಕಟ್ಟಬೇಕು, ಆಸ್ಪತ್ರೆಗಳನ್ನು ನಿರ್ಮಿಸಬೇಕು, ಜನರ ಮತ್ತು ರಾಜ್ಯ ರಾಷ್ಟ್ರದ ಅಭಿವೃದ್ಧಿಗಾಗಿ ಬಳಸಬೇಕು. ರಾಷ್ಟ್ರಪತಿ, ಕುಲಪತಿ ಎನ್ನುವುದು ಅವಿವೇಕತನ, ಈ ಪದಗಳು ಗಂಡಸರಿಗೆ ಮಾತ್ರ ಅನ್ವಯವಾಗುತ್ತವೆ, ರಾಷ್ಟ್ರಾಧ್ಯಕ್ಷ ಎನ್ನುವುದು ಸೂಕ್ತ ಪದ, ನಾವು ದೇವಾಲಯದ ಮುಂದೆ ಕ್ಯೂ ನಿಲ್ಲುವುದಲ್ಲಾ, ಗ್ರಂಥಾಲಯದ ಮುಂದೆ ನಿಲ್ಲಬೇಕು ಎಂದರು.
ವಿದ್ಯಾರ್ಥಿಗಳು ಎಲ್ಲಾ ಪ್ರಾಕಾರಗಳನ್ನು ಓದಿಕೊಳ್ಳಬೇಕು ಅಸ್ಪೃಶ್ಯತೆ ಆಚರಣೆ ಮಾಡಬಾರದು. ಅಂಬೇಡ್ಕರ್, ಲೋಹಿಯಾ, ಕರಿಯಪ್ಪ, ಬಸವಲಿಂಗಪ್ಪ ರವಂತವರು ಹುಟ್ಟಬೇಕು. ಕುವೆಂಪು ಮತ್ತು ತೇಜಸ್ವಿ ಯವರ ಕೃತಿಗಳನ್ನು ಓದಬೇಕು.
ಏಕಲವ್ಯ ನ ಬೆರಳು ಕತ್ತರಿಸಿದ ಗುರು, ಸೀತೆ, ದ್ರೌಪದಿ ನಡೆಸಿಕೊಂಡು ಬಂದಂತಹ ಧರ್ಮ ಗ್ರಂಥಗಳು ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದರು. ಹೆಸರು ಮುಖ್ಯವಲ್ಲ, ಕೆಲಸ ಮುಖ್ಯವಾಗಬೇಕು. ಸಾಹಿತ್ಯ ಎನ್ನುವುದು ಸಮಗ್ರವಾಗಿರಬೇಕು. ಸಾಹಿತ್ಯ ಮತ್ತು ಸಂಸ್ಕೃತಿಗಳ ನಡುವಿನ ಅರ್ಥವನ್ನು ತಿಳಿದುಕೊಳ್ಳಬೇಕು, ವಿದ್ಯಾರ್ಥಿಗಳು ಸಮಾಜವನ್ನು ಅರಿಯಬೇಕು ಎಂದು ಅರುಹಿದರು.
ನಾವೆಲ್ಲರೂ ಶ್ರಮಜೀವಿಗಳ ಋಣಿಯ ಮಕ್ಕಳು ಎಂದರು. ನೇಗಿಲಯೋಗಿ, ಶೂದ್ರ ತಪಸ್ವಿ ಎಂಬುದರ ವಿಶಾಲ ಅರ್ಥವನ್ನು ತಿಳಿಯಬೇಕು.
ಅಕ್ಕಾ ಮಹಾದೇವಿ ವಚನ ಇಡೀ ವಿಶ್ವದಲ್ಲೇ ಇಲ್ಲ. ಬಸವಣ್ಣ ದಲಿತ ಕೇರಿಗೆ ಹೋಗಿ ಬಂದಾಗ ಬ್ರಾಹ್ಮಣರು ಕುಲಗೆಟ್ಟು ಬಂದಿದ್ದಾನೆಂದು ಬೊಬ್ಬಿಟ್ಟಾಗ ನಾನು ಪುಣ್ಯಾತ್ಮರ ಕೇರಿಗೆ ಹೋಗಿ ಪವಿತ್ರನಾಗಿ ಬಂದಿದ್ದೇನೆ ಎಂದು ಹೇಳಿದರ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಸೆಕೆಂಡುಗಳೂ ಸಹ ಒಳ್ಳೆಯದೇ ಆಗಿವೆ, ಕೆಟ್ಟ ಕಾಲ ಎಂಬುದಿಲ್ಲ, ರಾಹುಕಾಲ ಎಂಬುವುದನ್ನು ನಂಬದೆ ತೋಳ್ಬಲ ಮತ್ತು ತಮ್ಮ ಮನೋಬಲ ನಂಬಿ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಂತರರಾಷ್ಟ್ರೀಯ ಜಾನಪದ ಗಾಯಕರಾದ ಅಪ್ಪಗೆರೆ ತಿಮ್ಮರಾಜು ರವರು ಮೂಲ ಜಾನಪದ ಗೀತೆಗಳನ್ನು ವಿಭಿನ್ನವಾಗಿ ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಪ್ಪ, ಸಂಗ್ರಾಮ ಟಿವಿ ಯ ಪ್ರಧಾನ ಸಂಪಾದಕ ಗೋ ರಾ ಶ್ರೀನಿವಾಸ, ಪ್ರಾಂಶುಪಾಲ ಡಾ ದೊಡ್ಡಸಿದ್ದಯ್ಯ, ಐಟಿಐ ಪ್ರಾಂಶುಪಾಲ ಶಂಕರಲಿಂಗೇಗೌಡ, ಅಧೀಕ್ಷಕ ಜಯರಾಮು, ಉಪನ್ಯಾಸಕರಾದ ಡಾ ರವೀಂದ್ರ, ಡಾ ತೇಜಾವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು