ನಗರಸಭೆ ಆವರಣದಲ್ಲಿ ಅನುಪಯುಕ್ತ ವಸ್ತುಗಳ ಹರಾಜು
ಚನ್ನಪಟ್ಟಣ: ಇಲ್ಲಿನ ನಗರಸಭೆ ಆವರಣದಲ್ಲಿ ಮಂಗಳವಾರ 2023-24 ನೇ ಸಾಲಿನ ನಿರುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದ್ದು, ಹಳೇ ಕಬ್ಬಿಣ ಹಾಗೂ ಗುಜರಿ ವಸ್ತುಗಳ ಖರೀದಿಗಾಗಿ ಬಿಡ್ಡರ್ ಗಳು ಮುಗಿಬಿದ್ದ ಪ್ರಸಂಗ ನಡೆಯಿತು.
ನಗರಸಭೆ ಆವರಣದಲ್ಲಿ ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್ ಹಾಗೂ ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆಯ ವಿದ್ಯುತ್ ಉಪಕರಣಗಳು, 62 ಕ್ಕೂ ಹೆಚ್ಚು ಕಬ್ಬಿಣದ ವಸ್ತುಗಳ ಹರಾಜಿಗೆ ಟೆಂಡರ್ ಕರೆಯಲಾಗಿದ್ದು, ಗುಜರಿ ವಸ್ತುಗಳ ಖರೀದಿಗಾಗಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಕಷ್ಟು ಪೈಪೋಟಿ ಕಂಡುಬಂದಿತ್ತು.
ಕಚೇರಿ ಆರಂಭವಾಗುತ್ತಿದ್ದಂತೆ ಟೆಂಡರ್ ನಲ್ಲಿ ಭಾಗವಹಿಸಲು ಠೇವಣಿ ಕಟ್ಟಲು ಬಿಡ್ದಾರರು ಮುಗಿಬಿದ್ದರು. ತಾಲೂಕು ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನತೆಯೂ ಸಹ ಹರಾಜಿನಲ್ಲಿ ಭಾಗವಹಿಸಲು ಆಗಮಿಸಿದ್ದರು.
*178 ಮಂದಿ ಬಿಡ್ಡರ್ ಗಳು ಭಾಗಿ:*
ನಗರಸಭೆ ಆವರಣದಲ್ಲಿ ನಡೆದ ಪ್ರತ್ಯೇಕ ಮೂರು ಹಂತದ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಕಷ್ಟು ಆಸಕ್ತಿ ಕಂಡುಬಂದಿತ್ತು. ಹರಾಜು ಪ್ರಕ್ರಿಯೆಯಲ್ಲಿ 178 ಬಿಡ್ಡರ್ ಗಳು ಭಾಗವಹಿಸಿದ್ದರು.
ಅಂತಿಮವಾಗಿ ಹಳೆಯ ಅನುಪಯುಕ್ತ ವಾಹನಗಳು ರೂ.4.77 ಲಕ್ಷ ರೂ., ಅನುಪಯುಕ್ತ ಬಲ್ಬ್ ಚೌಕ್ ಸೇರಿದಂತೆ ಇನ್ನಿತರ ಎಲೆಕ್ಟ್ರಿಕಲ್ ವಸ್ತುಗಳು 1.41 ಲಕ್ಷ ರೂ., ಹಾಗೂ ಅನುಪಯುಕ್ತ ಗುಜರಿ ವಸ್ತುಗಳು 3.16 ಲಕ್ಷಕ್ಕೆ ಬಿಕರಿಯಾದ್ದವು. ಒಟ್ಟಾರೆ ಎಲ್ಲಾ ವಸ್ತುಗಳು 9.34 ಲಕ್ಷ ರೂ.ಗಳಿಗೆ ಹರಾಜಾದವು.
ಮಂಗಳವಾರ ಹರಾಜಾದ ವಸ್ತುಗಳು ಹಲವಾರು ವರ್ಷಗಳಿಂದ ನಗರಸಭೆ ಆವರಣದಲ್ಲಿ ನಿರುಪಯುಕ್ತವಾಗಿ ಬಿದ್ದಿದ್ದು, ಈ ಗುಜರಿ ವಸ್ತುಗಳನ್ನು ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಲಾಯಿತು. ಇದರೊಂದಿಗೆ, ನಗರಸಭೆಗೂ 9.34 ಆದಾಯ ಕ್ರೋಡೀಕರಣವಾಯಿತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು