Tel: 7676775624 | Mail: info@yellowandred.in

Language: EN KAN

    Follow us :


ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು

Posted date: 08 Aug, 2023

Powered by:     Yellow and Red

ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು

ಚನ್ನಪಟ್ಟಣ: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಎಂದರೆ ಹಲವಾರು ವಿದ್ಯಾರ್ಥಿಗಳು ಮೂಗು ಮುರಿಯುತ್ತಾರೆ, ಕಸಕಡ್ಡಿ ಶೇಖರಣೆ, ಚರಂಡಿ ಸ್ವಚ್ಚತೆ, ಕೆರೆ-ಕಟ್ಟೆ ಶುಚಿಗೊಳಿಸುವುದು ಎಂದಷ್ಟೇ ಕೆಲವು ವಿದ್ಯಾರ್ಥಿಗಳು ತಿಳಿದುಕೊಂಡಿದ್ದಾರೆ, ಹೆಚ್ಚೆಂದರೆ ಶಿಸ್ತು ಅಷ್ಟೇ ಎಂದು ತಿಳಿದುಕೊಂಡಿರುವುದು ಸರಿಯಲ್ಲಾ. ಇವೆಲ್ಲವೂ ಪ್ರತಿ ವಿದ್ಯಾರ್ಥಿಗಳಿಗೂ ಸುವರ್ಣವಕಾಶ ಎಂದು ಕೊಂಡು ಮುಂದುವರಿಯಬೇಕು. ಸಮಾಜದ ಅರಿವು, ಕಷ್ಟಗಳ ಪರಿಚಯ, ಕಲೆಗಳ ಜೊತೆ ಬೆರೆಯುವುದರಿಂದ ನಮಗೆ ಜೀವನದ ಪಾಠ ಕಲಿಸುತ್ತದೆ, ಹಾಗಾಗಿ ರಕ್ತ ಸಂಬಂಧಕ್ಕಿಂತ ಮಿಗಿಲಾದ ಬಾಂಧವ್ಯದಲ್ಲಿ ಒಂದಾದ 

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯದ ಜೊತೆಗೆ ಅನುಭವವೂ ಆಗಿದೆ.

 

ರಕ್ತ ಸಂಬಂಧಗಳನ್ನೂ ಮೀರಿದ ಬಂಧವಿದು, 

ಯಾವ ಬಿಂದುವಿನಲ್ಲಿ ಬಂಧಿಸಿದರೂ

ಚಾಚಿ ತೋಳುಗಳನ್ನು ಬಿಗಿದಪ್ಪಿ ಕೊಳ್ಳುವುದೇ ಎನ್ಎಸ್ಎಸ್ ಶಿಬಿರಗಳು.

"ನಮ್ಮ ಪ್ರೀತಿ ನೋವುಗಳನ್ನು ತನ್ನದೆಂದು 

ಕೈಯ ಹಿಡಿದು ಹೆಜ್ಜೆ ಬೆಸೆದು 

ಮುಂದೆ ಮುಂದೆ ನಡೆವ ಎಂದು”

  ಇದು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರುಗಳಿಗೆ ಭಾವನಾತ್ಮಕವಾಗಿ ಆತ್ಮೀಯವಾದ  ಸಾಹಿತ್ಯವಾಗಿದೆ. ಎನ್ಎಸ್ಎಸ್ ಕೇವಲ ಒಂದು ಯೋಜನೆಯಾಗಿರದೆ. ಒಂದು ಸುಂದರ ಸಂಬಂಧಗಳನ್ನು ಸೃಷ್ಟಿಸುವ ತಾಣವಾಗಿದೆ. ಎಲ್ಲಾ ಸ್ವಯಂ ಸೇವಕರುಗಳು ಸ್ನೇಹ ಸಂಬಂಧದಲ್ಲಿ ಬಂಧಿಯಾಗಿ ಕೂಡು ಕುಟುಂಬದಂತೆ  ಜೊತೆಯಾಗಿ ಬೆಸೆಯುತ್ತಾರೆ. ಪ್ರತಿಭೆಗಳಿಗೆ ತಕ್ಕ ಅವಕಾಶವನ್ನು ಸೃಷ್ಟಿಸುವ ಮಹಾ ಮನೆಯಾಗಿರುವ ಎನ್ಎಸ್ಎಸ್ ಒಂದು ಅವಿಭಕ್ತ ಕುಟುಂಬದಂತೆ ಬೆಳೆದು ನಿಂತಿದೆ.


“ಆಕಾಶದಲ್ಲಿ ಹೊಳೆಯುವ ನಕ್ಷತ್ರಗಳಿಗಿಂತ ಕೈಯಲ್ಲಿರುವ ಹಣತೆ ಹೆಚ್ಚು ಬೆಳಕು ನೀಡುತ್ತದೆ” . ಹಾಗೆಯೇ ನಾವು ಅತೀ ಎತ್ತರದ ಆದರ್ಶ ವ್ಯಕ್ತಿಗಳನ್ನು ಅನುಸರಿಸುವುದು ಸ್ವಲ್ಪ ಕಷ್ಟ. ಆದರೆ ನಮ್ಮ ಸುತ್ತ ಮುತ್ತಲೇ ಅಗಾಧ ಸ್ಪೂರ್ತಿಯ ಚಿಲುಮೆಯಾಗಿರುವ ವ್ಯಕ್ತಿತ್ವಗಳು ಕಾಣಸಿಗುತ್ತಾರೆ. ಎನ್ಎಸ್ಎಸ್ ಕೂಡ ಅಪಾರ ಸ್ಪೂರ್ತಿಯ ಚಿಲುಮೆಗಳನ್ನು ಹೊಂದಿರುವ ತಾಣವಾಗಿದೆ. ಸ್ವಯಂ ಸೇವಕರುಗಳ ಪ್ರತಿಭೆ, ಸೇವಾ ಮನೋಭಾವ, ಕಲಾ ಕೌಶಲ, ಸಮಯ ಪ್ರಜ್ಞೆ, ಶಿಸ್ತು ಹಾಗೂ ಸಮರ್ಪಣಾ ಭಾವದಂತಹ ನೈತಿಕ ಮೌಲ್ಯಗಳು ಇತರ ವಿದ್ಯಾರ್ಥಿಗಳಿಗೂ ಸಹ ಪ್ರೇರೇಪಣೆ ನೀಡುತ್ತವೆ, ವಿಶೇಷವಾಗಿ ನಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳು, ಎನ್ಎಸ್ಎಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮೊದಲಿಗರಾಗಿರುವುದು ನಮ್ಮ ಕಾಲೇಜಿನ ಹೆಮ್ಮೆಯಾಗಿದೆ.


ಎನ್ಎಸ್ಎಸ್ ಶಿಬಿರಗಳಿಂದ ರಾಷ್ಟ್ರ, ರಾಜ್ಯಮಟ್ಟದಲ್ಲಿ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸುವ ಅವಕಾಶ, ಯೂತ್ ಫೆಸ್ಟ್, ನ್ಯಾಷನಲ್ ಇಂಟಿಗ್ರೇಷನ್ ಶಿಬಿರಗಳು, ವಾರ್ಷಿಕ ವಿಶೇಷ ಶಿಬಿರಗಳು, ವಿಶೇಷ ಉಪನ್ಯಾಸ ಕೇಳುವುದು, ಹೀಗೆ ಅನೇಕ ಅತ್ಯುತ್ತಮ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸದಾವಕಾಶ ದೊರೆಯುತ್ತದೆ. ನಮ್ಮ ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿಗಳಾದ ಮಹೇಶ್ ಹಾಗೂ ಆಲಿಯಾ ತಾಜ್ ಎಂಬ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸುವ ಮೂಲಕ ನಮ್ಮ ಕಾಲೇಜಿನ ಗರಿಮೆಯನ್ನಷ್ಟೇ ಅಲ್ಲದೇ ತಾಲ್ಲೂಕು ಹಾಗೂ ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದಾರೆ.


ಎನ್ಎಸ್ಎಸ್ ಕೇವಲ ಶಿಸ್ತು ಹಾಗೂ ಸೇವೆಗೆ ಮಾತ್ರ ಸೀಮಿತವಾಗಿರದೆ, ಜಾನಪದ ಕಲೆಗಳ ಉಳಿವಿನಲ್ಲೂ ಮಹತ್ವದ ಪಾತ್ರ ವಹಿಸುತ್ತದೆ. ‘ಹಳೆ ಬೇರು ಹೊಸ ಚಿಗುರು’ ಎಂಬ ನಾಣ್ಣುಡಿಯಂತೆ ಭಾರತೀಯ ಸಂಸ್ಕೃತಿಯ ತಳಹದಿಯಾದ ಜಾನಪದ ಕಲೆಗಳನ್ನು ವಿಭಿನ್ನವಾಗಿ ಅಭಿವ್ಯಕ್ತಗೊಳಿಸುವಲ್ಲಿ ಎನ್ಎಸ್ಎಸ್ ವಿಶಿಷ್ಟ ಮಾರ್ಗವಾಗಿ ರೂಪುಗೊಂಡಿದೆ. ಕಾಲಾಂತರದ ತೀವ್ರತೆಗೆ ಹುದುಗಿಹೋಗಿ ಎಲೆ ಮರೆ ಕಾಯಿಯಾಗಿ, ಹಿಂದೆ ಸರಿಯುತ್ತಿದ್ದಾಗ ಅವುಗಳ ಸಾರವನ್ನು ಅರಿತು, ತನ್ನ ಸ್ವಯಂಸೇವಕರ ಸೈನ್ಯದೊಂದಿಗೆ  ದೀಪದಂತೆ ಉಜ್ವಲವಾಗಿ ಪ್ರಜ್ವಲಿಸುವಂತೆ ಮಾಡುತ್ತಿದೆ ಎನ್ಎಸ್ಎಸ್ ಶಿಬಿರಗಳು.


ಕಲೆ ಎಂಬುದು ಪ್ರತಿ ಮನುಷ್ಯನಿಗೂ ಅತ್ಯವಶ್ಯಕ, ಕಲೆಯ ಬೆಲೆ ಅರಿತರೆ ಸಮಾಜದಲ್ಲಿ ಹೇಗೆ ಬದುಕುಬೇಕೆಂಬ ಅರಿವು ಮೂಡುತ್ತದೆ. ಇಂತಹ ಜಾನಪದ ಕಲೆಗಳನ್ನು ಭವಿಷ್ಯದ ಪ್ರಜ್ಞಾವಂತ ಯುವಕರಿಗೆ ಕಲಿಸಲಾಗುತ್ತದೆ. ನಮ್ಮದೇ ನೆಲದ ಮಣ್ಣಿನ ಕಲೆಗಳನ್ನು ಮಣ್ಣಿನ ಮಕ್ಕಳು ಬಹಳ ಶ್ರದ್ಧೆಯಿಂದ ಅಭ್ಯಾಸ ಮಾಡಿ ಕಾರ್ಯಕ್ರಮಗಳಲ್ಲಿ ಅಮೋಘವಾಗಿ  ಪ್ರದರ್ಶನ ನೀಡುತ್ತಾರೆ. ದೀಪ ಬೆಳಗಲು ಎಣ್ಣೆಯ ಅವಶ್ಯಕವಿದ್ದಂತೆ ಜಾನಪದ ಕಲೆಯೆಂಬ ದೀಪ ಬೆಳಗಲು ಅದಕ್ಕೆ ಶಕ್ತಿ ನೀಡುವ ಎಣ್ಣೆಯ ರೀತಿ ಎನ್ಎಸ್ಎಸ್ ತನ್ನದೇ ಆದ ಕೊಡುಗೆ ನೀಡುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ನಮ್ಮ ಕಾಲೇಜು ಮಹತ್ತರ ಹೆಜ್ಜೆಯನ್ನಿಟ್ಟಿತು. ಜೂನ್ 27 ರಂದು  ’ಜಾನಪದ ಕಲೋತ್ಸವ ' ಎಂಬ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿ ರಾಜ್ಯದ ಇಡೀ ವಿಶ್ವವಿದ್ಯಾಲಯ ಗಳನ್ನು ಆಹ್ವಾನಿಸಿ ಹಲವು ಪ್ರತಿಭೆಗಳ ಅನಾವರಣದ ಜೊತೆಗೆ ಜಾನಪದ ಕಲೆಗಳನ್ನು ವಿಜೃಂಭಿಸುವ ಸುಂದರ ಹಬ್ಬದಂತೆ  ಸಂಭ್ರಮಿಸಲಾಯಿತು.


  ಇತರ ರಾಷ್ಟೀಯ ಸೇವಾ ಯೋಜನೆಗಳ ಮಧ್ಯೆ ನಮ್ಮ ಕಾಲೇಜಿನ ಎನ್ಎಸ್ಎಸ್ ಶಿಬಿರಗಳು ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿರುವುದು ಎನ್ಎಸ್ಎಸ್ ನ ಕಾರ್ಯಕ್ರಮಗಳ ಅಧಿಕಾರಿಗಳಾದಂತಹ  ಶ್ರೀಕಾಂತ್ ಎನ್. ಹಾಗೂ ನಂಜುಂಡ .ಆರ್. ಅವರಿಂದ. ಇವರಿಬ್ಬರು ಕಾಲೇಜಿನ ಕೀರ್ತಿ ಕಳಸವಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಿದ್ದು, ವಿದ್ಯಾರ್ಥಿಗಳನ್ನು ನಕ್ಷತ್ರ ಗಳ ರೀತಿ ಮಿನುಗುವಂತೆ ಮಾಡುವಲ್ಲಿ ಈ ಅಧಿಕಾರಿಗಳ ಪಾತ್ರ ಅವಿಸ್ಮರಣೀಯವಾಗಿದೆ.


ನಮ್ಮ ಕಾಲೇಜಿನಲ್ಲಿ ಒಂದು ವಿಶಾಲ ವೃಕ್ಷದಂತೆ ಬೆಳೆದು ನಿಂತಿರುವ ಎನ್ಎಸ್ಎಸ್ ಅದ್ಭುತ ಜಾನಪದ ಪ್ರತಿಭೆಗಳ ಗಣಿಯೂ ಆಗಿದೆ . ಎನ್ಎಸ್ಎಸ್ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಭೆಗಳನ್ನು ಹಾಗೂ ಜಾನಪದ ಕಲೆಗಳನ್ನು ಪೋಷಿಸಿ, ಮುನ್ನಡೆಸಿ ಬೆಳೆಸುವ ಪಾಲಕನಾಗಿದೆ. ಪ್ರತಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರೆ ವಿದ್ಯಾರ್ಥಿಗಳ ಭವಿಷ್ಯದ ಬದುಕು ಬಂಗಾರವಾಗುತ್ತದೆ.

                                                                   -- -ಅನ್ನಪೂರ್ಣ ಎಂ,  ಪತ್ರಿಕೋದ್ಯಮ ವಿದ್ಯಾರ್ಥಿನಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚನ್ನಪಟ್ಟಣ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑