Tel: 7676775624 | Mail: info@yellowandred.in

Language: EN KAN

    Follow us :


ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ

Posted date: 01 Sep, 2023

Powered by:     Yellow and Red

ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ

ರಾಮನಗರ:ಚನ್ನಪಟ್ಟಣ; ತಾಲ್ಲೂಕಿನ ಅಬ್ಬೂರು ಗ್ರಾಮ ವ್ಯಾಪ್ತಿಯ ಅರಣ್ಯ ಇಲಾಖೆಯ ಸರ್ವೇ ನಂಬರ್ ೩೫೩ ರಲ್ಲಿ ಸರಿಸುಮಾರು ಆರು ಎಕರೆಯಷ್ಟು ಅರಣ್ಯ ಭೂಮಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ದುರುದ್ದೇಶದಿಂದ ಸಹಸ್ರಾರು ಗಿಡಮರಗಳನ್ನು ಕಡಿದು ಉರುಳಿಸಿ, ಅವುಗಳನ್ನೆ ಬದುಗಳ ರೀತಿಯಲ್ಲಿ ಜೋಡಿಸಿರುವ ಘಟನೆ ಜರುಗಿದ್ದು ವಲಯ ಅರಣ್ಯಾಧಿಕಾರಿ ದೂರು ದಾಖಲಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


ಅಬ್ಬೂರುದೊಡ್ಡಿ ಗ್ರಾಮದ ನಿವಾಸಿ ದಶವಾರ ಗ್ರಾಮ ಪಂಚಾಯತಿ ಹಾಲಿ ಸದಸ್ಯ, ಜೆಡಿಎಸ್ ಮುಖಂಡ ವರದರಾಜು ಮೊದಲ ಆರೋಪಿಯಾಗಿದ್ದು ಈ ಕೃತ್ಯ ಎಸಗಿದ್ದಾನೆ ಎಂದು ಪ್ರಥಮ ವರ್ತಮಾನ ವರದಿಯಲ್ಲಿ ಉಲ್ಲೇಖಿಸಲಾಗಿದೆ, ಅದೇ ಗ್ರಾಮದ ಕೃಷ್ಣ ಎಂಬ ವ್ಯಕ್ತಿ ಎರಡನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ. ಇಬ್ಬರು ಆರೋಪಿಗಳು ನಗರದಲ್ಲಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ.


*ಕರುಣೆ ತೋರಿ ಎಫ್ಐಆರ್!?*

ಅರಣ್ಯ ಇಲಾಖೆಯ ಡಿ ಆರ್ ಎಫ್ ಓ ಶ್ರೀಧರ್ ರವರು ಸಹಸ್ರಾರು ಗಿಡ-ಮರಗಳನ್ನು ಕಡಿದು ಉರುಳಿಸಿರುವ ಮೊದಲ ಆರೋಪಿ ವರದರಾಜು ಮೇಲೆ ಕರುಣೆ ತೋರಿ ಅಥವಾ ಯಾವುದೋ ಆಮಿಷಕ್ಕೆ ಮಣಿದು ಎಫ್ಐಆರ್ ದಾಖಲಿಸಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಹತ್ತಿರತ್ತಿರ ಆರು ಎಕರೆ ಜಾಗದ ಬದಲಿಗೆ ನಾಲ್ಕು ಎಕರೆ ಎಂದು ತೋರಿಸಿದ್ದಲ್ಲದೆ, ಸಹಸ್ರಾರು ಗಿಡಮರಗಳ ಬದಲಿಗೆ ಕೇವಲ ೧೯೮ ಮರಗಳು ಎಂದು ಉಲ್ಲೇಖಿಸಿದ್ದಾರೆ. ಬಹುತೇಕ ಎಲ್ಲಾ ಗಿಡ-ಮರಗಳು ಸ್ಥಳದಲ್ಲಿಯೇ ಇದ್ದರೂ ಸಹ ಒಂದು ಟನ್ ಅಷ್ಟು ಸೌದೆಯನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಉಲ್ಲೇಖಿಸಿರುವುದು ಅಧಿಕಾರಿಗಳ ಮೇಲೆ ಅನುಮಾನ ಮೂಡುವಂತೆ ಮಾಡಿದೆ.


*ನಾನು ಮಾಡಿಲ್ಲಾ, ರಾಜಕೀಯ ದುರುದ್ದೇಶದಿಂದ ದೂರು; ವರದರಾಜ*

ಪತ್ರಿಕೆಯು ಮೊದಲ ಆರೋಪಿ ವರದರಾಜನನ್ನು ಮೊಬೈಲ್ ಮೂಲಕ ಸಂಪರ್ಕಿಸಿದಾಗ, ನಾನು ಮರಗಳನ್ನು ಕಡಿದಿಲ್ಲಾ, ಯಾರೋ ಆಗದವರು ಕಡಿದು ನನ್ನ ಮೇಲೆ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ ಎಂದರು. ಜಾಮೀನು ಏಕೆ ಪಡೆದುಕೊಂಡಿರಿ ಎಂಬ ಮರು ಪ್ರಶ್ನೆಗೆ ತಡಬಡಾಯಿಸದ ಅವರು ನಾನೇ ಎಂದು ದೂರು ದಾಖಲಿಸಿರುವುದರಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದೇನೆ ಎಂದು ಸಮರ್ಥನೆ ನೀಡಿದ್ದಾರೆ.


*ನಮ್ಮ ತಂದೆಯ ಕಾಲದಿಂದಲೂ ವ್ಯವಸಾಯ ಮಾಡುತ್ತಿದ್ದೇವೆ ಕೃಷ್ಣ*

ಎರಡನೇ ಆರೋಪಿ ಕೃಷ್ಣ ರವರು ಪತ್ರಿಕಾ ಕಛೇರಿಗೆ ಬಂದು ಹೇಳಿಕಿ ನೀಡಿ, ನಮ್ಮ ತಂದೆಯವರು ಹಿಂದಿನಿಂದಲೂ ಗೋಮಾಳ ಜಮೀನು ಎಂದು ವ್ಯವಸಾಯ ಮಾಡುತ್ತಿದ್ದರು, ಅವರ ಮರಣಾನಂತರ ನಾನು ಮುಂದುವರೆಸಿಕೊಂಡು ಬರುತ್ತಿದ್ದೆ, ನೆಟ್ಟಿದ್ದ ಮಾವು, ತೆಂಗಿನ ಸಸಿಗಳನ್ನು ಕಡಿದು ಹಾಕಿ ಇದು ಅರಣ್ಯ ಇಲಾಖೆಯ ಜಾಗ ಎಂದು ದೂರು ದಾಖಲಿಸಿದ್ದಾರೆ. ಗೋಮಾಳ ಅಲ್ಲಾ ಇದು ಅರಣ್ಯ ಇಲಾಖೆಯ ಜಾಗ ಎಂದು ಈಗಲೇ ನನಗೆ ಗೊತ್ತಾಗಿದ್ದು, ಜಾಗ ನೀಡಿದರೆ ವ್ಯವಸಾಯ ಮುಂದುವರೆಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.


*ಕಡಿಮೆ ಜಾಗ ಮತ್ತು ಮರಗಳನ್ನು ತೋರಿಸಿದ್ಯಾಕೆ !?*

ಇಂದು ಓಝೋನ್ ಪದರ ಸೇರಿದಂತೆ, ವಾತಾವರಣವೇ ಹಾಳಾಗುತ್ತಿದೆ. ಅರಣ್ಯ ಒತ್ತುವರಿ ಎಗ್ಗಿಲ್ಲದೆ ಸಾಗುತ್ತಿದೆ, ಅವೆಷ್ಟೋ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೇ ಒತ್ತುವರಿ ಮಾಡಿಕೊಂಡ ಪ್ರಕರಣಗಳು ಇವೆ. ಇವರಿಬ್ಬರೂ ಒಬ್ಬರಿಗೊಬ್ಬರು ಸಾಥ್ ನೀಡಿ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಜಗತ್ತಿಗೆ ಪರಿಸರ ಎಂಬುದು ಎಷ್ಟು ಮುಖ್ಯ ಎಂದು ಎಲ್ಲರಿಗೂ ತಿಳಿದಿದ್ದರೂ ಸಹ ಕಂಡುಕಾಣದಂತೆ ಕುಳಿತಿರುವುದು ಇವರ ಅಂಧಾಭಿಮಾನವನ್ನು ತೋರಿಸುತ್ತದೆ. ಈ ಕಾಡಿನಲ್ಲಿ ವಿವಿಧ ರೀತಿಯ ಸಸ್ಯ ಸಂಕುಲ, ಔಷಧೀಯ ಗಿಡಗಳು, ವಿವಿಧ ರೀತಿಯ ಕಾಡು ಪ್ರಾಣಿಗಳು, ಪಕ್ಷಿಗಳು ವಾಸಿಸುತ್ತಿವೆ. ಇಂತಹ ಜಾಗದಲ್ಲಿ ಸಹಸ್ರಾರು ಗಿಡ-ಮರಗಳ ಮಾರಣ ಹೋಮ ಮಾಡಿದರೂ ಸಹ ಎಫ್ಐಆರ್ ನಲ್ಲಿ ಕಡಿಮೆ ತೋರಿಸಿರುವುದು ಯಾಕೆ ಎಂಬ ಗುಮಾನಿ ಕಾಡುತ್ತಿದ್ದು, ಅಧಿಕಾರಿಗಳು ಉತ್ತರಿಸಬೇಕಾಗಿದೆ.


*ಚಾರ್ಜ್ ಶೀಟಿನಲ್ಲಿ ತೋರಿಸುತ್ತೇವೆ, ಅರಣ್ಯಾಧಿಕಾರಿ ಕಿರಣ್*

ಇದು ಪ್ರಥಮ ವರದಿ ಮಾತ್ರ, ನಾನೇ ತನಿಖಾಧಿಕಾರಿಯಾಗಿರುವುದರಿಂದ ಚಾರ್ಜ್ ಶೀಟಿನಲ್ಲಿ ಎಲ್ಲವನ್ನೂ ಉಲ್ಲೇಖಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳಿಗೆ ನೋಟೀಸ್ ನೀಡಿದ್ದು, ಬಂಧನಕ್ಕಾಗಿ ಪ್ರಯತ್ನಿಸಿದರೂ ಅವರು ತಲೆ ಮರೆಸಿಕೊಂಡು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಜಾಮೀನಿನ ಪ್ರತಿಗಳನ್ನು ಸಹ ಇಲಾಖೆಗೆ ನೀಡಿಲ್ಲಾ, ಜಾಮೀನು ರದ್ದುಪಡಿಸುವಂತೆ ನ್ಯಾಯಾಲಯದ ಮೊರೆ ಹೋಗಿ, ಅವರನ್ನು ಬಂಧಿಸಿ, ವಿಚಾರಣೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.


*ಸದಸ್ಯತ್ವ ರದ್ದು ಪಡಿಸಿ ಹತ್ತರಷ್ಟು ದಂಡ ವಿಧಿಸಿ; ಪರಿಸರವಾದಿಗಳ ಆಗ್ರಹ*

ಈತ ಬಲಾಢ್ಯನಾಗಿದ್ದು, ಜನಪ್ರತಿನಿಧಿಯಾಗಿದ್ದಾನೆ, ಆತನ ಗ್ರಾಪಂ ಸದಸ್ಯತ್ವವನ್ನು ರದ್ದುಪಡಿಸಬೇಕು, ಜಾಮೀನು ರದ್ದು ಪಡಿಸಿ ವಿಚಾರಣೆಗೊಳಪಡಿಸಿ ಕಠಿಣ ಶಿಕ್ಷೆ ಜೊತೆಗೆ ಈಗ ನಾಶ ಪಡಿಸಿರುವ ಗಿಡ-ಮರಗಳ ಹತ್ತರಷ್ಟು ದಂಡ ವಿಧಿಸಿ, ಆತನ ಜಮೀನಿನಲ್ಲಿ ಗಿಡಗಳನ್ನು ನೆಡಿಸಿ, ಆತನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ, ಮೈಸೂರಿನ ಪರಿಸರ ಬಳಗದ ಮುಖ್ಯಸ್ಥ ಪರಶುರಾಮೇಗೌಡ ಮತ್ತು ತಂಡ, ಪರಿಸರವಾಗಿ ಮುಕುಂದರಾಜ್, ರಾಮನಗರ ಜಿಲ್ಲೆಯ ರೈತ ಸಂಘದ ಪದಾಧಿಕಾರಿಗಳು, ಪರಿಸರವಾದಿಗಳು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑