Tel: 7676775624 | Mail: info@yellowandred.in

Language: EN KAN

    Follow us :


ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

Posted date: 15 Sep, 2023

Powered by:     Yellow and Red

ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

ಚನ್ನಪಟ್ಟಣ: ನಗರ ಪ್ರದೇಶವಿರಲಿ, ಗ್ರಾಮೀಣ ಭಾಗದಲ್ಲೂ ಸ್ಮಶಾನಕ್ಕಾಗಿ ಹಣ ನೀಡಿದರೂ ಜಾಗ ಸಿಕ್ಕುತ್ತಿಲ್ಲ, ಅದಕ್ಕಾಗಿಯೇ ನನ್ನ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಲ್ಲೂ ವಿದ್ಯುತ್ ಚಿತಾಗಾರ ಆರಂಭಿಸಲಾಗುತ್ತಿದೆ, ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಡಿ ಕೆ ಸುರೇಶ್ ಕರೆ ನೀಡಿದರು. ಅವರು ನಗರದ ರಾಮಮ್ಮನಕೆರೆ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಸದರ ಅನುದಾನದಲ್ಲಿ ನಿರ್ಮಾಣಗೊಂಡಿರುವ ಆಧುನಿಕ ವಿದ್ಯುತ್ ಚಿತಾಗಾರವನ್ನು ಸಂಸದ ಡಿ.ಕೆ.ಸುರೇಶ್ ಶುಕ್ರವಾರ ಲೋಕಾರ್ಪಣೆಗೊಳಿಸಿದರು.


ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಂಟು ಕ್ಷೇತ್ರಗಳಲ್ಲೂ ಆಧುನಿಕ ವಿದ್ಯುತ್ ಚಿತಾಗಾರ ನಿರ್ಮಿಬೇಕೆಂಬ ಉದ್ದೇಶದಿಂದ ಚನ್ನಪಟ್ಟಣ ತಾಲೂಕಿನಲ್ಲಿಯೂ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಮುಂದಾಗಿದ್ದು, ಇಂದು ಲೋಕಾರ್ಪಣೆಗೊಳಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ಸ್ಮಶಾನ ಜಾಗದ ಸಮಸ್ಯೆ ತಲೆದೋರಿದೆ. ಹಣ ನೀಡಿದರೂ ಸ್ಮಶಾನಕ್ಕೆ ಜಾಗ ಸಿಗದಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸುವ ಪ್ರಯತ್ನ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷ ಸಂಸದರ ಅನುದಾನ ಕಡಿತಗೊಂಡಿತ್ತು. ಇದರಿಂದ ಹಣಕಾಸಿನ ತೊಂದರೆಯಾಗಿ ಚಿತಾಗಾರ ನಿರ್ಮಾಣ ಕಾರ್ಯ ವಿಳಂಬವಾಯಿತು ಎಂದು ತಿಳಿಸಿದರು.


*ಸುಮಾರು ೩ ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಆಧುನಿಕ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲಾಗಿದೆ.*

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನ ಇಲ್ಲದವರು ಇಲ್ಲಿ ಬಂದು ಚಿತಾಗಾರದ ಉಪಯೋಗ ಪಡೆದುಕೊಳ್ಳಬೇಕು. ಎಲ್ಲ ಕಡೆ ಇಂಥ ಚಿತಾಗಾರ ನಿರ್ಮಾಣವಾದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭಲ್ಲಿ ನಗರಸಭೆ ಆಯುಕ್ತ ಸಿ.ಪುಟ್ಟಸ್ವಾಮಿ, ಸದಸ್ಯರಾದ ವಾಸಿಲ್ ಅಲಿಖಾನ್, ಮತೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್, ರಾಜ್ಯ ಕುಕ್ಕುಟ ಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು, ಮುಖಂಡರಾದ ಚಂದ್ರಸಾಗರ, ಬೋರ್‌ವೆಲ್ ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.



*ಪಕ್ಷದ ಸಿದ್ಧಾಂತ ನಂಬಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ: ಸುರೇಶ್*


ಪಕ್ಷದ ಸಂಘಟನೆ ಕುರಿತು ಕಾಂಗ್ರೆಸ್ ಸದಾ ಗಮನ ಹರಿಸುತ್ತದೆ. ನಮ್ಮ ಪಕ್ಷದ ತತ್ವ ಸಿದ್ಧಾಂತವನ್ನು ನಂಬಿ ಯಾರೇ ಬಂದರೂ ಸ್ವಾಗತಿಸುತ್ತೇವೆ, ಆದರೆ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಕಾರ್ಯ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಚುನಾವಣೆ ಬರುತ್ತದೆ ಹೋಗುತ್ತದೆ. ಆದರೆ ಪಕ್ಷ ಸಂಘಟನೆ ಕಾರ್ಯ ಎಂಬುದು ನಿರಂತರವಾಗಿ ನಡೆಯುತ್ತದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ಸಂಘಟನೆಗೆ ಒತ್ತು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದೇವೆ. ಮುಂದೆ ಯಾರು ಬರುತ್ತಾರೋ ಕಾದು ನೋಡೋಣ. ಬರುವವರೆಗೆ ಸ್ವಾಗತ ಎಂದು ಮಾರ್ಮಿಕವಾಗಿ ನುಡಿದರು.


ಡಿಸಿಎಂ ಸ್ಥಾನ ಹೆಚ್ಚಳಕ್ಕೆ ಸಚಿವ ರಾಜಣ್ಣ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜಣ್ಣ ಅವರನ್ನೇ ಕೇಳಿ, ನನಗೇನು ಗೊತ್ತಿಲ್ಲ. ನಾನು ಒಬ್ಬ ಲೋಕಸಭಾ ಸದಸ್ಯ ಅಷ್ಟೇ ಎಂದರು.

ಸರ್ಕಾರ ನಡೆಸುತ್ತಿರುವವರು ರಾಜ್ಯ ನಾಯಕರು. ನೀವು ಅವರನ್ನೇ ಕೇಳಬೇಕು ಎನ್ನುವ ಮೂಲಕ ಈ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.


ಹೆಜ್ಜಾಲ-ಚಾಮರಾಜನಗರ ರೈಲ್ವೆ ಮಾರ್ಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೇ ಆರಂಭವಾಗಬೇಕು. ಅದಕ್ಕೆ ಸಂಬಂಧಿಸಿದಂತೆ ರೈಲ್ವೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಯೋಜನೆಯನ್ನು ಮಧ್ಯದಲ್ಲಿ ಕೈಬಿಟ್ಟಿತ್ತು. ಆದರೆ, ಯೋಜನೆಯನ್ನು ಕೈಗೆತ್ತುಕೊಳ್ಳಿ ಎಂದು ಒತ್ತಾಯಿಸಿದ್ದು, ಇದೀಗ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೆತ್ತುಕೊಂಡಿದೆ ಎಂದು ತಿಳಿಸಿದರು.


ಈ ಮಾರ್ಗದ ಭೂಸ್ವಾಧೀನಕ್ಕೆ ಸುಮಾರು ೧,೫೦೦ ಕೋಟಿ ರೂ.ನಿಂದ ೨,೦೦೦ ಸಾವಿರ ಕೋಟಿ ರೂ. ಹಣ ಬೇಕಾಗುತ್ತದೆ. ಯೋಜನೆಗೆ ರಾಜ್ಯ ಸರ್ಕಾರ ಸಹ ಶೇ.೫೦ರಷ್ಟು ಹಣ ಭರಿಸಬೇಕಿದೆ. ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.


*ತಪ್ಪಾಗಿ ನಮೂದಾದ ತಾಲ್ಲೂಕು ಮತ್ತು ಜಿಲ್ಲಾಧಿಕಾರಿ ಹೆಸರು!*

ನಿರ್ಮಾಣವಾಗಿರುವ ಆಧುನಿಕ ವಿದ್ಯುತ್ ಚಿತಾಗಾರದ ಕಟ್ಟಡದಲ್ಲಿ ಚನ್ನಪಟ್ಟಣ ಎಂದು ಬರೆಯುವ ಬದಲು ಕೇವಲ (*ಚನ್ನಪಟ್ಟ*) ಎಂದು ಉದ್ಘಾಟನಾ ನಾಮಫಲಕದಲ್ಲಿ ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರ ಹೆಸರನ್ನು ತಪ್ಪಾಗಿ ನಮೂದಿಸಿರುವುದು ಕಂಡುಬಂದಿತ್ತು.

ನಾಮಫಲಕದಲ್ಲಿ ಜಿಲ್ಲಾಧಿಕಾರಿಗಳ ಹೆಸರನ್ನು ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಎಂಬುದಾಗಿ ನಮೂದಿಸುವ ಬದಲು ‘ ಡಾ. ಅವಿನಾಶ್ ರಾಜೇಂದ್ರ ಮೆನನ್’ ಎಂದು ನಮೂದಿಸಿದ್ದು ಎದ್ದು ಕಾಣುತ್ತಿದ್ದು, ಇದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್
ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್

ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ

ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ
ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ

ಚನ್ನಪಟ್ಟಣ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯ ವಾಸೀಲ್ ಅಲಿಖಾನ್ ಮತ್ತು ಅಬಿದಾಬಾನು ರವರ ನಡುವೆ ವಾಗ್ವಾದ ನಡೆದಿತ್ತು. ಅದೇ ದಿನ ನಗರಸಭೆ ಆವರಣದಲ್ಲಿ

ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು
ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು

ಚನ್ನಪಟ್ಟಣ: ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ನಡೆದ ಮಾತಿನ ಚಕಮಕಿಯ ನಂತರ ಹೊರ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದಸ್ಯರುಗಳ ಜೊತೆಗೆ

ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್
ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್

ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದ

ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು
ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು

ಚನ್ನಪಟ್ಟಣ: ಹಿಂದಿನ ಉಪಾಧ್ಯಕ್ಷೆ ಹಸೀನಾ ಫರ್ಹೀನ್ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು. ಚುನಾ

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ
ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾ

ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ  ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ

 ಚನ್ನಪಟ್ಟಣ, ನ.೦೬: ಜನಸಂಪರ್ಕ ಸಭೆ ಹೆಸರಲ್ಲಿ ಅಧಿಕಾರಿಗಳನ್ನು ಬೆದರಿಸುವ ಸಂಸದರಿಗೆ ಸಾತನೂರು ಸರ್ಕಲ್ ರಸ್ತೆಯ ಗುಂಡಿಗಳು ಕಾಣಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್.

೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ
೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸ

ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ
ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಮನೆ ಇಲ್ಲದ ನಾಲ್ಕು ಮಂದಿ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದು,

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್
ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್

ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್‍ಅವರು ಅವಿರೋಧವಾಗಿ ಆಯ್ಕೆಯಾದರು.

Top Stories »  


Top ↑