ಕುಮಾರಸ್ವಾಮಿ ಯವರಿಗೆ ಅಧಿಕಾರ ಬೇಕೆ ವಿನಹ ನಿಷ್ಠಾವಂತ ಮತದಾರರಲ್ಲ್ಲಾ, ಜೆಡಿಎಸ್ ಮುಸ್ಲಿಂ ಮುಖಂಡರ ಅಸಮಧಾನ
ಚನ್ನಪಟ್ಟಣ: ಇತ್ತೀಚಿಗೆ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ಮಾಧ್ಯಮದವರ ಜೊತೆ ಮಾತನಾಡುವ ವೇಳೆ ನಮ್ಮ ಜೆಡಿಎಸ್ ಪಕ್ಷಕ್ಕೆ ಅಲ್ಪಸಂಖ್ಯಾತ ಮತದಾರರ ಅವಶ್ಯಕತೆ ಇಲ್ಲ ಅಲ್ಪಸಂಖ್ಯಾತರಿಗೆ ನನ್ನ ಹಾಗೂ ನಮ್ಮ ಪಕ್ಷದ ಅವಶ್ಯಕತೆ ಇದೆ. ನಾನು ಮುಖ್ಯ ಮಂತ್ರಿ ಆಗಿದ್ದ ವೇಳೆ ನನ್ನ ಸರ್ಕಾರ ತೆಗೆದವರ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನಾವು ಬೆಂಬಲ ನೀಡುತ್ತಿದ್ದೇನೆ ಎಂದಿದ್ದರು.
ಅಲ್ಪಸಂಖ್ಯಾತ ಮತದಾರರು ಅವರ ಇಷ್ಟದಂತೆ ಮಾಡಿಕೊಳ್ಳಲಿ ಎಂದು ಮಾತನಾಡಿದ್ದ ಕಾರಣ ಇಂದು ಚನ್ನಪಟ್ಟಣ ನಗರದಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದರು, ಅಲ್ಪಸಂಖ್ಯಾತ ಮುಖಂಡರು ಇಲ್ಲಿಯ ತನಕ ಜೆಡಿಎಸ್ ಪಕ್ಷದಲ್ಲಿ ಇದ್ದಿದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರವರ ಸಲುವಾಗಿ ವಿನಹ ಕುಮಾರಸ್ವಾಮಿ ಸಲುವಾಗಿ ಅಲ್ಲ.
ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಶತ್ರು ಇದ್ದ ಹಾಗೆ ಅವರಿಗೆ ಅಧಿಕಾರ ಬೇಕು ಅಷ್ಟೇ ಪಕ್ಷ ಸಂಘಟನೆ ಮಾಡುವ ನಿಷ್ಠಾವಂತ ಕಾರ್ಯಕರ್ತರಾಗಲಿ ಮತದಾರರಾಗಲಿ ಅಲ್ಲಾ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು ಅಲ್ಪಸಂಖ್ಯಾತರಿಗೆ ಧರ್ಮ ಅಥವಾ ಜಾತಿ ಮುಖ್ಯವಾಗಿದ್ದರೆ ಸಾದತ್ ಅಲಿಖಾನ್ ರವರನ್ನು ಸೋಲಿಸಿ, ವರದೇಗೌಡ ರನ್ನು ಗೆಲ್ಲಿಸುತ್ತಿರಲಿಲ್ಲ. ಅಂದು ಮೂವತ್ತು ಸಾವಿರ ಮತದಾರರಿದ್ದು ಅಲ್ಪಸಂಖ್ಯಾತ ಮತದಾರರು, ಸಾದತ್ ರವರಿಗೆ ಕೇವಲ ಎಂಟು ಸಾವಿರ ಮತಗಳನ್ನಷ್ಟೇ ನೀಡಿದ್ದ ಕಾರಣ ಅಂದು ಎಂ. ವರದೇಗೌಡ ರವರು ಗೆದ್ದದ್ದು ಎಂದರು.
ನಾವು ರಾಜಕೀಯಕ್ಕೆ ಬಂದ ಮೇಲೆ ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು, ಅವರಿಂದ ಕಲಿಯಬೇಕಾದ್ದು ಏನಿಲ್ಲಾ ಎಂದರು.
ಕುಮಾರಸ್ವಾಮಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ದೊಡ್ಡ ತಪ್ಪು ಮಾಡಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತರ ಮತ ಪಡೆದು ಗೆದ್ದು ಶಾಸಕರಾಗಿ ಈಗ ನಮ್ಮ ಅವಶ್ಯಕತೆ ಇಲ್ಲ ಎಂದು ಹೇಳುವ ಅವರಿಗೆ ನೈತಿಕತೆ ಇದ್ದರೆ ಕೂಡಲೆ ರಾಜೀನಾಮೆ ನೀಡಿ ಮತ್ತೊಮ್ಮೆ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತ ಮತದಾರರ ಶಕ್ತಿ ಎಷ್ಟಿದೆ ಎಂದು ತೋರಿಸುವ ಕೆಲಸ ನಾವು ಮಾಡುತ್ತೆವೆ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ಗೋಷ್ಠಿಯಲ್ಲಿ ಮಾಜಿ ನಗರಸಭಾ ಸದಸ್ಯ ಜಭಿ ಉಲ್ಲಾ ಖಾನ್ ಘೋರಿ, ಅಮಾನುಲ್ಲಾ ಷರೀಫ್ ಸೇರಿದಂತೆ ಹಲವಾರು ಮುಸ್ಲಿಂ ಸಮುದಾಯದ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು