Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದಲ್ಲಿ ಜೆಡಿಎಸ್ ಗೂಡಿಗೆ ಕೈ ಹಾಕಿದ ಸಂಸದ ಡಿ ಕೆ ಸುರೇಶ್, ಮಾಜಿ ಶಾಸಕ ಅಶ್ವಥ್ ಬೆಂಬಲಿಗರಿಗೆ ಅಧಿಕೃತ ಆಹ್ವಾನ

Posted date: 30 Sep, 2023

Powered by:     Yellow and Red

ಚನ್ನಪಟ್ಟಣದಲ್ಲಿ ಜೆಡಿಎಸ್ ಗೂಡಿಗೆ ಕೈ ಹಾಕಿದ ಸಂಸದ ಡಿ ಕೆ ಸುರೇಶ್, ಮಾಜಿ ಶಾಸಕ ಅಶ್ವಥ್ ಬೆಂಬಲಿಗರಿಗೆ ಅಧಿಕೃತ ಆಹ್ವಾನ

ಎಲ್ಲಾ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು, ನೊಂದವರಿಗೆ ಮಾತ್ರ ನೋವು ಗೊತ್ತು, ನೋವುಂಡವರು ಅಲ್ಲೇ ಇರಲಾಗದು. ಹಾಗಾಗಿ ನಮ್ಮ ಪಕ್ಷಕ್ಕೆ ಆಹ್ವಾನಿಸಲು ಅಶ್ವಥ್ ರವರ ಮನೆಗೆ ಭೇಟಿ ನೀಡಿದ್ದೇನೆ. ಅಶ್ವಥ್ ರವರು ಮೂವತ್ತು ವರ್ಷಗಳ ಕಾಲ ರಾಜಕೀಯ ಮಾಡಿಕೊಂಡು ಬಂದವರು, ಅವರು ತಮ್ಮ ಬೆಂಬಲಿಗರೊಂದಿಗೆ ನಮ್ಮ ಪಕ್ಷಕ್ಕೆ ಬರಲು ಒಪ್ಪಿದ್ದಾರೆ. ಗಾಂಧಿ ಜಯಂತಿ ಯಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಅಶ್ವಥ್ ನಾಯಕತ್ವದಲ್ಲಿ ಸಹಸ್ರಾರು ಮಂದಿ ಪಕ್ಷದ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ಮಾಧ್ಯಮ ದವರಿಗೆ ಮಾಹಿತಿ ನೀಡಿದರು.

.

ಕಳೆದ ಚುನಾವಣೆಯಲ್ಲೇ ನಾನು ಆಹ್ವಾನ ನೀಡಿದ್ದೆ, ಇಲ್ಲ ನಾನು ಪಕ್ಷ ನಿಷ್ಠನಾಗಿ ಇರುತ್ತೇನೆಂದು, ಸೋಲು ಗೆಲುವು ಇರುತ್ತದೆ, ಸೋತ ತಕ್ಷಣ ಪಕ್ಷ ತೊರೆದರೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಆಹ್ವಾನವನ್ನು ನಿರಾಕರಿಸಿದ್ದರು. ಈಗ ಕಾಲ ಬದಲಾದ ಸಮಯದಲ್ಲಿ ಅವರೇ ಒಪ್ಪಿ ಬರಲಿರುವ ಕಾರಣ ನಾನು ಖುದ್ದು ಆಹ್ವಾನ ನೀಡುತ್ತಿದ್ದೇನೆ.

ಇವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರುವುದರಿಂದ ಲಾಭ ನಷ್ಟ ಪ್ರಶ್ನೆ ಉದ್ಭವಿಸುದಿಲ್ಲ. ಜಾತ್ಯಾತೀತ ಜನತಾ ದಳ ಎಂಬುವವರಿಂದ ಜಾತ್ಯಾತೀತತೆ ಕಳೆದುಕೊಂಡಿರುವುದರಿಂದ ಬರಲಿದ್ದಾರೆ ಎಂದರು.


ಮುಸ್ಲಿಂ ಮತದಾರರು ಬೇಕಾಗಿಲ್ಲಾ ಎಂದು ಕುಮಾರಸ್ವಾಮಿ ಯವರೇ ಹೇಳಿರುವುದರಿಂದ ಎಲ್ಲಾ ಮುಸ್ಲಿಂ ಮುಖಂಡರು, ಕಾರ್ಯಕರ್ತರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಮುಸ್ಲಿಂ ಮುಖಂಡರು, ಮತದಾರರು ಅವರಿಗೆ ಬೇಡಾ ಎಂದ ಮೇಲೆ ಅವರಿಗೆ ಅವಮಾನ ಮಾಡಿದಂತೆ. ಅವರಿಗೆ ಇವರು ಬೇಡವೆಂದಾದರೆ ಅಲ್ಲಿದ್ದು ಏನು ಮಾಡುತ್ತಾರೆ. ಹಾಗಾಗಿ ನೋವಿನ ಜೊತೆಗೆ ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿ ಬರುತ್ತಿದ್ದಾರೆ.


ಭೈರಾಪಟ್ಟಣ ಗ್ರಾಮದಲ್ಲಿ ಗುದ್ದಲಿ ಪೂಜೆ ನೆರವೇರಿಸಲು ಬಿಜೆಪಿ ಪಕ್ಷದವರು ತೆರಳಿದಾಗ ಕಲ್ಲು, ಮೊಟ್ಟೆಯಲ್ಲಿ ಹೊಡೆಸಿದವರೇ ಅವರ ಜೊತೆಯಲ್ಲಿ ಹೋಗುತ್ತಿರುವುದು ಎಷ್ಟು ಸರಿ ಎಂಬುದನ್ನು ಅವರೇ ಯೋಚಿಸಬೇಕು ಎಂದು ಸಿ ಪಿ ಯೋಗೇಶ್ವರ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಹೆಸರೇಳದೆ ಮಾರ್ಮಿಕವಾಗಿ ನುಡಿದರು.


ಮೇಕೆದಾಟು ಶಾಶ್ವತ ಹೋರಾಟಕ್ಕೆ ನಾವು ಮುಂದಡಿ ಇಟ್ಟಿದ್ದೇವೆ. ನಮ್ಮ ಸರ್ಕಾರ ಈಗಲೂ ಬದ್ದವಾಗಿದೆ. ಆದರೆ ಸುಪ್ರೀಂ ಕೋರ್ಟ್ ಹಾಗೂ ಭಾಜಪ ಸರ್ಕಾರ ಕಾವೇರಿ ಪ್ರಾಧಿಕಾರ ರಚನೆ ಮಾಡಿವೆ. ಅದರಲ್ಲಿ ತೀರ್ಮಾನ ವಾದರೆ ನಾವು ಮೇಕೆದಾಟು ನಿರ್ಮಾಣಕ್ಕೆ ಬದ್ದವಾಗಿವೆ.

ಈಗಾಗಲೇ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ, ನಮ್ಮ ಪರ ತೀರ್ಪು ಬರವುದೆಂಬ ನಿರೀಕ್ಷೆ ಇದೆ. ಹಸಿರು ಪ್ರಾಧಿಕಾರ, ಕಾವೇರಿ ನೀರು ಪ್ರಾಧಿಕಾರ, ಸುಪ್ರೀಂ ಕೋರ್ಟ್, ತಮಿಳುನಾಡು ಎಲ್ಲರ ತೀರ್ಮಾನ ದ ಮೇಲೆ ಮೇಕೆದಾಟು ಯೋಜನೆ ನಿಂತಿದೆ. ಇದರಲ್ಲಿ ರಾಜಕೀಯ ಬೆರೆಸದೆ, ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಒಗ್ಗೂಡಿ ಹೋರಾಟ ಮಾಡಬೇಕು ಎಂದು ಮಾಧ್ಯಮದವರಿಗೆ ತಿಳಿಸಿದರು.


ಮಾಜಿ ಶಾಸಕ ಎಂ.ಸಿ.ಅಶ್ವತ್ಥ ಮಾತನಾಡಿ, ಜೆಡಿಎಸ್‌ನಲ್ಲಿನ ಕುಟುಂಬ ರಾಜಕಾರಣ ಬೇಸರ ತರಿಸಿತ್ತು. ನಾವು ೨೫-೩೦ ವರ್ಷಗಳಿಂದ ಹೋರಾಟ ಮಾಡಿಕೊಂಡು ರಾಜಕಾರಣ ಮಾಡಿಕೊಂಡು ಬರುತ್ತಿದ್ದೇವೆ. ನಮಗೆ ಶಕ್ತಿ ಬೇಕು, ಜನರ ಕೆಲಸ ಮಾಡಿಕೊಡಬೇಕು.  ಆದರೆ, ಅಲ್ಲಿ ನಮಗೆ ಸರಿಯಾದ ಸಹಕಾರ ಸಿಗಲಿಲ್ಲ. ಡಿ.ಕೆ.ಸಹೋದರರು ಎಲ್ಲೇ ಇದ್ದರು ನಮ್ಮ ಕರೆ ಸ್ವೀಕರಿಸುತ್ತಾರೆ. ನಮಗೆ ಸಹಕಾರ ಕೊಡುತ್ತಾರೆ. ಸಂಸದ ಸುರೇಶ್ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಅವರ ವೈಯಕ್ತಿಕ ವಿಚಾರ. ಇಲ್ಲಿಯವರೆಗೆ ಜಾತ್ಯತೀತ ಅಂತ ಹೋರಾಟ ಮಾಡಿಕೊಂಡು ಬಂದಿದ್ದರು. ಜಾತ್ಯತೀತಾ ಬಿಟ್ಟು ಹೋಗುವುದಿಲ್ಲ ಎಂದು ತಿಳಿದಿದ್ದೆವು.  ದೇವೇಗೌಡರು ಇರೋವರೆಗೂ ಈ ಪಕ್ಷಕ್ಕೆ ಗೌರವ ಇರುತ್ತೆ ಅಂತ ತಿಳಿದುಕೊಂಡಿದ್ದೆವು. ಅದರೆ, ದೇವೇಗೌಡರಿಗೆ ಅದೇನ್ ಮಾಡಿದ್ರೋ ಗೊತ್ತಿಲ್ಲ. ಚನ್ನಪಟ್ಟಣ, ಹಾಸನದಲ್ಲಿ ಅಲ್ಪಸಂಖ್ಯಾತರು ಮತ ಜೆಡಿಎಸ್‌ಗೆ ಕೊಟ್ಟಷ್ಟು ಮತ ಎಲ್ಲೂ ನೀಡಲಿಲ್ಲ. ಆದರೂ ಇಂಥ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಹೈಕೋರ್ಟ್ ವಕೀಲ ಹಾಗೂ ಮುಸ್ಲಿಂ ಮುಖಂಡರಾದ ಮುಕ್ರಂ ಮಾತನಾಡಿ, ಕುಮಾರಸ್ವಾಮಿ ಯವರು ಮುಸ್ಲಿಮರಿಗಾಗಿ ನಾನು ಎಲ್ಲವನ್ನೂ ತ್ಯಾಗ ಮಾಡಿದ್ದೇನೆ, ಅವರಿಗೆ ನನ್ನ ಮತ್ತು ನಮ್ಮ ಪಕ್ಷದ ಅವಶ್ಯಕತೆ ಇಲ್ಲ ಎಂದಿದ್ದಾರೆ. ಕುಮಾರಸ್ವಾಮಿ ಯವರೇ ನಮ್ಮ ಸಮುದಾಯದ ಮಾತು ಬಿಡಿ, ನಿಮ್ಮ ಒಕ್ಕಲಿಗ ಸಮುದಾಯಕ್ಕೆ ಏನು ಮಾಡಿದ್ದೀರಿ ಎಂದರು. ನಿಮಗೆ ನಿಯತ್ತಿಲ್ಲಾ, ನಿಮ್ಮ ನಿಯತ್ತಿಗೆ ಈಗಾಗಲೇ ದೇವರು ನಿಮ್ಮ ಆರೋಗ್ಯ ಕಿತ್ತುಕೊಂಡಿದ್ದಾನೆ. ಇನ್ನೊಮ್ಮೆ ಆರೋಗ್ಯ ಹದಗೆಟ್ಟರೆ ಢಮಾರ್ ಆಗುತ್ತೀರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಚಪ್ಪಾಳೆ ಗಿಟ್ಟಿಸಿದರು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ರವಿ, ರಾಮನಗರದ ಮಾಜಿ ಶಾಸಕ ಕೆ.ರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್ ಕುಮಾರ್, ಮುಖಂಡರಾದ ದುಂತೂರು ವಿಶ್ವನಾಥ್, ಬೋರ್‌ವೆಲ್ ರಂಗನಾಥ್, ಶಿವಮಾದು, ಎಂ.ಸಿ.ಕರಿಯಪ್ಪ, ಜಬಿವುಲ್ಲಾ ಖಾನ್ ಘೋರಿ, ಇತರರು ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑