Tel: 7676775624 | Mail: info@yellowandred.in

Language: EN KAN

    Follow us :


ಜಮೀರ್ ಅಹ್ಮದ್ ವಿರುದ್ದ ಮಾತನಾಡಿರುವ ಜೆಡಿಎಸ್ ಅಲ್ಪಸಂಖ್ಯಾತ ಅಧ್ಯಕ್ಷ ಕ್ಷಮೆ ಯಾಚಿಸಬೇಕು, ಫೈಲ್ವಾನ್ ಅಕ್ರಂ

Posted date: 05 Oct, 2023

Powered by:     Yellow and Red

ಜಮೀರ್ ಅಹ್ಮದ್ ವಿರುದ್ದ ಮಾತನಾಡಿರುವ ಜೆಡಿಎಸ್ ಅಲ್ಪಸಂಖ್ಯಾತ ಅಧ್ಯಕ್ಷ ಕ್ಷಮೆ ಯಾಚಿಸಬೇಕು, ಫೈಲ್ವಾನ್ ಅಕ್ರಂ

ರಾಮನಗರ:ಚನ್ನಪಟಣ; ಜಮೀರ್ ಅಹ್ಮದ್ ಕೊಡುಗೈ ದಾನಿ, ಮುಸ್ಲಿಂ ಸಮುದಾಯ ಅಷ್ಟೇ ಅಲ್ಲದೆ ಎಲ್ಲಾ ಸಮುದಾಯದ, ಸಮಾಜದಲ್ಲಿರುವ ಪ್ರತಿಯೊಬ್ಬರ ಕಷ್ಟಸುಖಗಳಿಗೆ ಸ್ಪಂದನೆ ಮಾಡುವುದರ ಮುಖಾಂತರ ಸರ್ವಜನಾಂಗದ ಸಮಾಜ ಸೇವಕ ಎಂದು ಗುರುತಿಸಿಕೊಂಡಿರುವ ಸಚಿವ ಬಿ ಜಡ್ ಜಮೀರ್ ಅಹದ್‌ ರವರ ಬಗ್ಗೆ ಹಗುರವಾಗಿ ಮಾತನಾಡಿರುವವರು ತಮ್ಮ ಕೀಳುಮಟ್ಟವನ್ನು ಪ್ರದರ್ಶವ ಮಾಡಿದ್ದಾರೆಂದು, ಸಮಾಜಸೇವಕ ಬಿ ಜಡ್ ಜಮೀರ್‌ ಅಹದ್ ಅಭಿಮಾನಿ ಬಳಗದ ಅಧ್ಯಕ್ಷ ಅಲ್ಪಸಂಖ್ಯಾತ ಹಿರಿಯ ಮುಖಂಡ ಪೈಲ್ವಾನ್ ಅಕ್ರಂ ಉಸ್ಮಾನಿ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.


ಅವರು ನಗರದ ಪ್ರವಾಸಿಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಫಾಜೀಲ್, ಸಚಿವ ಬಿ ಜಡ್ ಜಮೀರ್ ಅಹದ್‌ ಖಾನ್ ರವರನ್ನು ಒಬ್ಬ ಡ್ರೈವರ್ ಹಾಗೂ ಬಿಜೆಪಿಯವರ ಜೊತೆ ಚಡ್ಡಿ ಹಾಕಿ ಕೊಂಡಿದ್ದಾರೆಂದು ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಫಾಜೀಲ್‌ಗೆ ಬುದ್ದಿ ಭ್ರಮಣೆಯಾಗಿದೆ ಎಂದು ಕಿಡಿಕಾರಿದರು.

    ಕೆಲ ತಿಂಗಳ  ಹಿಂದೆ ರಾಜಕೀಯಕ್ಕೆ ಬಂದಿರುವ ಫಾಜೀಲ್ ಯಾರು? ನಮ್ಮ ನಾಯಕ ಬಿ ಜಡ್ ಜಮೀರ್ ಅಹದ್‌ ರವರ ಬಗ್ಗೆ ಏನು ತಿಳಿದುಕೊಂಡಿದ್ದಾರೆ, ಅವರ ರಾಜಕೀಯ ಜೀವನ, ಅವರಲ್ಲಿರುವ ಅಂತಕುರಣೆ, ಸೇವಾಮನೋಭಾವ, ನೊಂದವರ ಕಷ್ಟಕ್ಕೆ ಒಂದಾಗುವ ಮೃದು ಮನಸ್ಸಿನ ಹೃದಯವಂತನ ಬಗ್ಗೆ ಏಕವಚನದಲ್ಲಿ ಅವನೊಬ್ಬ ಡ್ರೈವರ್, ಚಡ್ಡಿ ಹಾಕೊಂಡಿದ್ದಾನೆ ಎಂದು ತಮ್ಮ ನಾಲಿಗೆಯನ್ನು ಹರಿ ಬಿಟ್ಟಿರುವ ಫಾಜೀಲ್ ಮೊದಲು ನಿನ್ನ ಬಗ್ಗೆ ತಿಳಿದುಕೋ ಅನಂತರ ಬೇರೆಯವರ ಬಗ್ಗೆ ಮಾತನಾಡುವೆ ಎಂದು ಚಾಟಿ ಬೀಸಿದರು.


  ದೇವರು ಕೊಟ್ಟಿರುವ ನಾಲಿಗೆಯನ್ನು ಸಮರ್ಪಕವಾಗಿ  ಬಳಸಬೇಕು, ಅನವಶ್ಯಕವಾಗಿ ನಾಲಿಗೆಯನ್ನು ಹರಿ ಬಿಟ್ಟರೆ ಕಾಲವೇ ಉತ್ತರ ನೀಡುತ್ತದೆ, ಅಲ್ಪಸಂಖ್ಯಾತ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಕಚೇರಿ ತರೆದು ನಂತರ ಮುಚ್ಚಿರುವ ತಾವು ಒಂದು ಪಕ್ಷದ ಸಿದ್ದಾಂತದ ಬಗ್ಗೆ ಮಾತನಾಡುತ್ತೀರಿ ಎಂದು ಪಾಜೀಲ್ ಹೇಳಿಕೆಗೆ ತಿರುಗೇಟು ನೀಡಿದರು.

  ಮಾನ್ಯ ಫಾಜೀಲ್‌ರವರೇ ನಿಮ್ಮ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ, ರಾಜ್ಯಮಟ್ಟದ ನಾಯಕ, ಸಮಾಜ ಸೇವಕ, ಬಿ ಜಡ್ ಜಮೀರ್ ಅಹಮ್ಮದ್ ರವರ ಬಗ್ಗೆ ಈ ರೀತಿ ಹಗುರವಾಗಿ ಹೇಳಿಕೆ ನೀಡಿರುವುದಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಬೇರೆ ರೀತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


    ಇದೇ ಸಂದರ್ಭದಲ್ಲಿ ಬಿ ಜಡ್ ಜಮೀರ್ ಅಭಿಮಾನಿಗಳ  ಬಳಗದ ಪ್ರಧಾನ ಕಾರ್ಯಧರ್ಶಿ ಕಿಝರ್ ಅಹಮ್ಮದ್ ಮಾತನಾಡಿ, ಸಚಿವರಾದ ಬಿ ಜಡ್ ಜಮೀರ್ ಅಹದ್‌ ರವರು ಒಂದು ಸಮುದಾಯಕ್ಕೆ ಸೀಮಿತವಲ್ಲ,ಅವರು ಸರ್ವಸಮುದಾಯಕ್ಕೆ ಬೇಕಾಗಿರುವ ಹೃದಯವಂತ ನಾಯಕ, ಅಂತಹ ನಾಯಕರ ಬಗ್ಗೆ ಕನಿಷ್ಟ ತಿಳಿದುಕೊಳ್ಳದ ಫಾಜೀಲ್‌ರವರು ಯಾರೋ ಹೇಳಿಕೊಟ್ಟ ಮಾತನ್ನು ಪತ್ರಿಕಾ ಹೇಳಿಕೆ ನೀಡಿರುವುದು ನಿಮಗೆ ತರವೇ ಎಂದು ಅವರ ಹೇಳಿಕೆಯನ್ನು ಖಂಡಿಸಿದರು.

      ಒಂದೇ ಮನೆಯಲ್ಲಿ ಎರಡೆರಡು ಪಕ್ಷಗಳ ಮುಖಂಡರಾಗಿರುವ ನೀವು ಯಾವ ನೈತಿಕತೆಯ ಆಧಾರದ ಮೇಲೆ ನಾಯಕ ಬಿ ಜಡ್ ಜಮೀರ್ ಅಹದ್‌ ರವರ ಬಗ್ಗೆ ಕೆಳಮಟ್ಟದ ಪದ ಬಳಕೆ ಮಾಡಿದ್ದೀರಿ, ತಾವು ಮಾದ್ಯಮದವರ ಜೊತೆ ಮಾತನಾಡುವಾಗ ನಿಮ್ಮ ಅನಿಸಿಕೆಗಳನ್ನು ತಿಳಿಸಿ ಅದನ್ನು ಬಿಟ್ಟು ಬೇರೆಯವರಿಂದ ಗಿಣಿ ಪಾಠಕೇಳಿ ಈ ರೀತಿಯ ಹೇಳಿಕೆಗಳನ್ನು ನೀಡಿ ನಗೆಪಾಟೀಲಿಗೆ ಗುರಿಯಾಗುವುದರ ಜೊತೆಗೆ ಬಿ ಜಡ್ ಜಮೀರ್ ಅಹದ್‌ ರವರ ಲಕ್ಷಾಂತರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರ ನೀಡಿದರು.


    ಪತ್ರಿಕಾ ಗೋಷ್ಟಿಯಲ್ಲಿ ಸಚಿವ ಬಿ ಜಡ್ ಜಮೀರ್ ಅಹಮ್ಮದ್ ಅಭಿಮಾನಿಬಳಗದ ಪದಾಧಿಕಾರಿಗಳಾದ ವಾಸಿಂ, ನವಾಜ್ ಅಹ್ಮದ್, ಫರೀದ್, ಬಸೀರ್, ಜೇಸ್ನಾ, ಫರೀದ್ ಅಹಮ್ಮದ್, ಸಲ್ಮಾನ್ ಮತ್ತಿತರರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑