Tel: 7676775624 | Mail: info@yellowandred.in

Language: EN KAN

    Follow us :


೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

Posted date: 04 Nov, 2023

Powered by:     Yellow and Red

೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದೇ ಅಧಿಕಾರಿಗಳ ಸಮ್ಮುಖದಲ್ಲಿ, ಜಿಲ್ಲಾಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಜಿಲ್ಲಾಡಳಿತವೂ ತಮ್ಮ ತಾಲ್ಲೂಕಿಗೆ ಬರುವುದರಿಂದ ತಮ್ಮ ತಾಲ್ಲೂಕಿನಲ್ಲಿಯೇ ತಂತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂಬ ಹಿನ್ನೆಲೆಯಲ್ಲಿ ಸರ್ಕಾರವೂ ಜನತಾ ದರ್ಶನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಅವರು ಶನಿವಾರ ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


*ಬಂಡಿದಾರಿ ಸಮಸ್ಯೆಗಳೇ ಹೆಚ್ಚು*

ಬಹುತೇಕ ಸಮಸ್ಯೆಗಳನ್ನು ಹೊತ್ತು ತಂದವರು ರೈತರು, ಸಾರ್ವಜನಿಕ ರಸ್ತೆಗಳು, ಜಮೀನಿಗೆ ಓಡಾಡಲು ರಸ್ತೆ, ಜಮೀನು ಒತ್ತುವರಿ, ಸರ್ಕಾರಿ ಭೂಮಿಯಾದ ಗೋಮಾಳದಲ್ಲಿನ ಸಾಗುವಳಿ ಚೀಟಿ, ಕಾಡುಪ್ರಾಣಿಗಳ ಹಾವಳಿ, ವಿದ್ಯುತ್ ಸಮಸ್ಯೆ, ಸರ್ವೇಯಂತಹ ಹಲವಾರು ಸಮಸ್ಯೆಗಳನ್ನೇ ಹೊತ್ತು ತಂದಿದ್ದರು. ಈ ಎಲ್ಲಾ ಸಮಸ್ಯೆಗಳು ಬಹುತೇಕ ವೈಯುಕ್ತಿಕವಾಗಿದ್ದವೆ ವಿನಹ ಸಾರ್ವಜನಿಕ ಅಹವಾಲುಗಳು ಬಹುತೇಕ ಕಡಿಮೆ ಇದ್ದವು. ಅರ್ಜಿಯನ್ನು ನೀಡಿದವರಿಗೆ ಅವಕಾಶ ಇದ್ದುದರಿಂದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಯಾರೂ ಸಹ ಮಾತನಾಡಲಿಲ್ಲ.


*ಸಿಎಂಸಿ ಲೇಔಟ್ ಗೆ ಕೋಟ್೯ಗೆ ಹೋಗಿ*

ನಗರದಲ್ಲಿನ ಸಿಎಂಸಿ ಲೇಔಟ್ ನಲ್ಲಿ ೪೭೪ ನಿವೇಶನಗಳಿದ್ದು, ಕೆಲವೊಂದು ನಿವೇಶನಗಳು ಮೂರ್ನಾಲ್ಕು ಮಂದಿಗೆ ಖಾತೆಗಳಾಗಿವೆ. ಸಿ ಎ ನಿವೇಶನಗಳು ಸಮಸ್ಯೆಗಳಾಗಿವೆ. ಕೆಲವರು ಈಗಾಗಲೇ ಮನೆಯನ್ನು ನಿರ್ಮಿಸಿ ಕೊಂಡಿದ್ದಾರೆ, ಕಷ್ಟ ಇರುವವರು ಮಾರಾಟ ಮಾಡಲು ಆಗುತ್ತಿಲ್ಲ. ನಗರಸಭೆ ಹಂಚಿರುವ ೪೭೪ ನಿವೇಶನಗಳಿಗೂ ಅಲ್ಲಿರುವ ನಿವೇಶನಗಳಿಗೂ ಸಂಬಂಧವಿಲ್ಲಾ ಎಂದು ನಿವೇಶನದಾರರೂ ಮನವಿ ನೀಡಿದಾಗ ಜಿಲ್ಲಾಧಿಕಾರಿಗಳು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಿ ಎಂದರು.


*ಅಜ್ಜಿಯ ಅಹವಾಲು ಸ್ವೀಕರಿಸಲು ವೇದಿಕೆ ಇಳಿದು ಬಂದ ಡಿಸಿ, ಎಸಿ*

ಕೃಷ್ಣಾಪುರ ಗ್ರಾಮದಲ್ಲಿ ನಿಂಗಮ್ಮ ಗುಂಡೇಗೌಡ ಎಂಬುವವರ ಜಮೀನು ಇದ್ದು, ಇದೇ ಜಮೀನನ್ನು ಅದೇ ಹೆಸರನ್ನು ಹೊಂದಿದ ಮತ್ತೋರ್ವರು ಸುಳ್ಳು ದಾಖಲೆ ಸೃಷ್ಟಿಸಿ ಖಾತೆ ಮಾಡಿಸಿಕೊಂಡಿದ್ದಾರೆಂದು ಅಜ್ಜಿಯೊಬ್ಬರು ಬಂದಿದ್ದರು. ಅವರು ವೇದಿಕೆ ಮೇಲೆರಲು ಕಷ್ಟ ಎಂದರಿತ ಜಿಲ್ಲಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್, ಉಪವಿಭಾಗಾಧಿಕಾರಿ ಬಿನೋಯ್,  ತಹಶಿಲ್ದಾರ್ ಮಹೇಂದ್ರ, ಸೇರಿದಂತೆ ಒಟ್ಟಿಗೆ ಬಂದು ಅಜ್ಜಿಯ ಅಹವಾಲು ಸ್ವೀಕಾರ ಮಾಡಿದ್ದಲ್ಲದೆ, ಅಜ್ಜಿಯ ಪುತ್ರನಿಗೆ ಉಪವಿಭಾಗಾಧಿಕಾರಿಗಳ ಕಛೇರಿಗೆ ಬರುವಂತೆ ಸೂಚಿಸಿ ಮಾನವೀಯತೆ ಮೆರೆದರು.


*ಭೈರಾಪಟ್ಟಣ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಪರವಿರೋಧ*

ಭೈರಾಪಟ್ಟಣ ಗ್ರಾಮದಲ್ಲಿ ಸರ್ಕಾರಿ ಗೋಮಾಳವಿದ್ದು, ಈಗಾಗಲೇ ಕೆಲವರು ಸ್ವಾಧಿನಲ್ಲಿದ್ದೇವೆ, ಕೆಲವು ಮಂದಿ ಅರ್ಜಿಯನ್ನು ಹಾಕಿಕೊಂಡಿದ್ದೇವೆ. ಈ ಜಾಗಕ್ಕೆ ಇತ್ತಿಚೆಗೆ ಕೆಲವರು ಬಂದು ಶೆಡ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ದೂರಿದರೆ, ಶೆಡ್ ನಿರ್ಮಾಣ ಮಾಡಿದವರು ರೈತ ಸಂಘಟನೆಯ ಮೂಲಕ ಬಂದು ನಮಗೆ ವಾಸಿಸಲು ಮನೆಯಿಲ್ಲ, ಕಟ್ಟಿಕೊಳ್ಳಲು ನಿವೇಶನವಿಲ್ಲಾ, ಸರ್ಕಾರಿ ಗೋಮಾಳದಲ್ಲಿ ನಮಗೆ ನಿವೇಶನ ನೀಡಬೇಕೆಂದು ಮನವಿ ನೀಡಿದರು. ಎರಡನ್ನೂ ಪರಿಶೀಲಿಸಿದ ಅಧಿಕಾರಿಗಳು ೨೦೧೫ಕ್ಕಿಂತ ಮೊದಲು ಮನೆ ನಿರ್ಮಿಸಿದರೆ ಹಾಗೂ ಸಾಗುವಳಿಗಾಗಿ ಅರ್ಜಿ ಹಾಕಿರುವ ದಾಖಲೆ ಇರುವವರನ್ನು ಬಿಟ್ಟು ಮಿಕ್ಕವರನ್ನು ಖಾಲಿ ಮಾಡಬೇಕಾಗುತ್ತದೆ, ನಿವೇಶನ ಇಲ್ಲದವರು ಗ್ರಾಪಂ ಗೆ ಅರ್ಜಿ ಸಲ್ಲಿಸಿ ಎಂದರು.


*ಶಿವಪ್ಪನಮಠ ಗ್ರಾಮದ ರಸ್ತೆಗೆ ಕಾಂಪೌಂಡ್*

ನಗರದ ಹೊರವಲಯಲ್ಲಿರುವ ಶಿವಪ್ಪನಮಠ ಎಂಬ ಗ್ರಾಮಕ್ಕೆ ಅನಾದಿಕಾಲದಿಂದಲೂ ರಸ್ತೆ ಇದ್ದು, ಖಾಸಗಿ ವ್ಯಕ್ತಿಯೊಬ್ಬರು ಈ ರಸ್ತೆ ಜಾಗ ನಮ್ಮ ಜಮೀನಿನಲ್ಲಿದೆ ಎಂದು ರಸ್ತೆಗೆ ಹದಿನೈದು ಅಡಿಯಷ್ಟು ಎತ್ತರದ ಕಾಂಪೌಂಡ್ ನಿರ್ಮಿಸಿದ್ದಾರೆ, ಕಣ್ವ ನದಿಗೆ ಸಂಬಂಧಿಸಿದ ಕಾಲುವೆಯನ್ನು ಸಹ ಅದೇ ಜಮೀನ್ದಾರರು ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸುವಂತೆ ನೀಲಕಂಠನಹಳ್ಳಿ ಗ್ರಾಮದ ಸೋಮಶೇಖರ್ ಮತ್ತು ಭರತ್ ಮನವಿ ನೀಡಿದರು. ಉಪವಿಭಾಗ ಅಧಿಕಾರಿ ಬಿನೋಯ್ ರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ದಾಖಲೆ ಪರಿಶೀಲಿಸಿ ಶೀಘ್ರವಾಗಿ ಕ್ರಮಕೈಗೊಳ್ಳುವಂತೆ ಆದೇಶಿಸಿದರು.


*ನಗರದಲ್ಲಿ ಕಸದ ಸಮಸ್ಯೆ*

ಕಾಂಗ್ರೆಸ್ ಮುಖಂಡ ರಾಂಪುರ ಲೋಕೇಶ್ ರವರು ನಗರದಲ್ಲಿನ ಕಸದ ಸಮಸ್ಯೆ ಬಗೆಹರಿಸುವಂತೆ ಸಲ್ಲಿಸಿದ ಮನವಿಗೆ, ತಾಲ್ಲೂಕಿನ ಕೆಲವೆಡೆ ಭೂಮಿ ಗುರುತಿಸಿದ್ದು, ಸರ್ವೇ ಕಾರ್ಯ ನಡೆಯುತ್ತಿದೆ. ಭೂಮಿಯನ್ನು ವಶಕ್ಕೆ ಪಡೆದು ಶೀಘ್ರವಾಗಿ ಕಸವಿಲೇವಾರಿ ಘಟಕ ಆರಂಭಿಸಲಾಗುವುದು ಎಂದರು, ಭೂಮಿಯನ್ನು ಶೀಘ್ರವಾಗಿ ವಶಕ್ಕೆ ತೆಗೆದುಕೊಳ್ಳುವಂತೆ ಯೋಜನಾ ಅಧಿಕಾರಿ ರಮೇಶ್ ಮತ್ತು ನಗರದ ಪೌರಾಯುಕ್ತ ಸಿ ಪುಟ್ಟಸ್ವಾಮಿ ಯವರಿಗೆ ಸೂಚಿಸಿದರು.


*ರೈತಸಂಘದಿಂದ ಜಮೀನುಗಳಿಗೆ ರಸ್ತೆ ಬಿಡಿಸುವಂತೆ ಮನವಿ*

ರಾಜ್ಯ ರೈತಸಂಘದ ಪದಾಧಿಕಾರಿಗಳು ಮನವಿ ನೀಡಿ, ತಂತಮ್ಮ ಜಮೀನುಗಳಿಗೆ ಹೋಗಲು ಇರುವ ರಸ್ತೆಯನ್ನು ಮುಂದಿನ ಜಮೀನಿನವರು ಮುಚ್ಚಿದ್ದು, ಇದನ್ನು ಶೀಘ್ರವಾಗಿ ಬಿಡಿಸಬೇಕು, ಅಕ್ರಮ ಖಾತೆಗಳನ್ನು ಅಧಿಕಾರಿಗಳು ಮಾಡುತ್ತಿದ್ದು ತಡೆಗಟ್ಟಬೇಕು. ರೈತರಿಗೆ ವಿದ್ಯುತ್ ಸಂಪರ್ಕ ಸರಿಯಾದ ಸಮಯದಲ್ಲಿ ನೀಡುವ ಕುರಿತು ತಾಲ್ಲೂಕಿನಾದ್ಯಂತ ಇರುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸ್ಥಳೀಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸುವಂತೆ ಮನವಿ ಮಾಡಿದರು.


*ಮನೆಕೊಡಿಸಿ, ಮದುವೆ ಮಾಡಿಸಿ, ಆಗಲ್ಲ ಹೋಗಿ ಡಿಸಿ*

ಹೆಚ್ ಬ್ಯಾಡರಹಳ್ಳಿ ಗ್ರಾಮದ ಅರವತ್ತು ವರ್ಷದ ವ್ಯಕ್ತಿಯೋರ್ವ ಮನವಿ ನೀಡಿ, ನನ್ನ ಹೆಂಡತಿ ಮಕ್ಕಳು ನನ್ನನ್ನು ಹೊರಹಾಕಿದ್ದಾರೆ. ನಾನು ಒಬ್ಬಂಟಿಯಾಗಿದ್ದೇನೆ. ನನಗೆ ಮತ್ತೊಂದು ಮನೆ ಕೊಡಿಸಿ ಹಾಗೂ ಮತ್ತೊಂದು ಮದುವೆ ಮಾಡಿಸಿ ಎಂಬ ವಿಶೇಷ ಬೇಡಿಕೆ ಇಟ್ಟ ಪ್ರಸಂಗ ನಡೆಯಿತು. ಈ ಹಿಂದೆಯೂ ಸಹ ಜಿಲ್ಲಾದ್ಯಂತ ನಡೆದ ಎಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿಯೂ ಈತ ದಯಾಮರಣ ಸೇರಿದಂತೆ ವಿವಿಧ ಮನವಿ ಮಾಡಿದ್ದನ್ನೂ ಗಮನಿಸಿದ ಜಿಲ್ಲಾಧಿಕಾರಿಗಳು ಈ ಕೆಲಸ ನಮ್ಮ ಕೆಲಸವಲ್ಲಾ ಎಂದು ಸಾಗಹಾಕಿದರು.


ಜನತಾ ದರ್ಶನ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಬಂದಿದ್ದು ಒಟ್ಟು ೭೪ ಅರ್ಜಿಗಳು, ಆರ್ ಡಿ ಪಿ ಆರ್ ಗೆ ೦೭, ಸರ್ವೆಗೆ ೦೩ ಅರ್ಜಿ ಸೇರಿದಂತೆ ಒಟ್ಟು ೧೨೨ ಅರ್ಜಿಗಳು  ಬಂದಿದ್ದವು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ ಬೋಡ್ಕೆ, ಅರಣ್ಯ ಇಲಾಖೆಯ ಡಿಎಫ್ಓ ರಾಮಕೃಷ್ಣ, ಎಎಸ್ಪಿ ಸುರೇಶ್, ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑