Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

Posted date: 10 Nov, 2023

Powered by:     Yellow and Red

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯೆಲ್ಲೆಡೆ ಬರದ ಪರಿಸ್ಥಿತಿ ಇದ್ದು, ಎಲ್ಲಾ ಇಲಾಖೆಗಳು ರೈತರಿಗೆ ಸ್ಪಂದಿಸಬೇಕು. ವಿಶೇಷವಾಗಿ ಕೃಷಿ ಇಲಾಖೆ, ರೇಷ್ಮೇ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಿಸಿ ರೈತರಿಗೆ ನೆರವಾಗಿ, ಸರ್ಕಾರದ ಹಣ ಎಂದರೆ ಅದು ಸಾರ್ವಜನಿಕರ ತೆರಿಗೆ ಹಣ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ತಾಕೀತು ಮಾಡಿದರು.


ಅವರು ಶುಕ್ರವಾರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ತಾಲ್ಲೂಕು ಆಡಳಿತದ ಬಹುತೇಕ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ಬಗ್ಗೆ ಗಮನ ಸೆಳೆದರು. ಅವರ ಪ್ರಶ್ನೆಗೆ ಉತ್ತರಿಸಿದ ಅವರು ಬಹುತೇಕ  ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಬೇರೆ ಕಡೆಯ ಸಿಬ್ಬಂದಿಗಳನ್ನು ನಿಯೋಜಿಸುವ ಜೊತೆಗೆ ಸರ್ಕಾರದ ಗಮನ ಸೆಳೆದು ಸಿಬ್ಬಂದಿಗಳ ಕೊರೆತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


ಕಂದಾಯ ಇಲಾಖೆಗೂ ರೈತರಿಗೂ ನೇರ ಸಂಬಂಧವಿದೆ. ಅಧಿಕಾರಿಗಳು ರೈತರನ್ನು ಅನಾವಶ್ಯಕವಾಗಿ ಕಚೇರಿಗೆ ಅಲೆದಾಡಿಸಬೇಡಿ. ರೈತರನ್ನು ಲಂಚಕ್ಕಾಗಿ ಪೀಡಿಸದೇ ಅವರ ಕೆಲಸ ಕಾರ್ಯಗಳನ್ನು ತ್ವರಿವಾಗಿ ಮಾಡಿಕೊಡಲು ಮೊದಲ ಆದ್ಯತೆ ನೀಡಬೇಕು. ರೈತರ ಸಂಕಷ್ಟವನ್ನು ಅರಿತು ಅವರಿಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಿ, ಸ್ಥಳೀಯ ಅಧಿಕಾರಿಗಳು ರೈತರ ಬಳಿ ತೆರಳಿ ಕೆಲಸ ಮಾಡುವ ಮೂಲಕ ಮಾದರಿಯಾಗಿ ಎಂದು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಿಬ್ಬಂದಿಗಳಿಗೆ ಕರೆ ನೀಡಿದರು.


ಗ್ರಾಮೀಣ ಭಾಗದಲ್ಲಿನ ನಿವೇಶನದಾರರಿಗೆ ಮತ್ತು ನರೇಗಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಹುತೇಕ ಸಮಸ್ಯೆಗಳಿಗೆ ಪಿಡಿಓ ಗಳೇ ನೇರ ಕಾರಣಕರ್ತರಾಗಿದ್ದಾರೆ. ಸಾರ್ವಜನಿಕರ ಕೆಲಸ ಮಾಡಿಕೊಡದೇ ಜನರನ್ನು ಅಲೆದಾಡಿಸುವ ಕೆಲಸ ಮಾಡುವ ಜೊತೆಗೆ ರಾಜಕೀಯ ಮಾಡಿಕೊಂಡು ತಿರುಗುತ್ತಾರೆ. ತಹಸೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಿಡಿಓ ಗಳ ರಾಜಕೀಯ ಪ್ರೇರಿತ ಕಾರ್ಯವೈಖರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಪಿಡಿಓ ಗಳನ್ನು ಬಿಗಿ ಮಾಡುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಬೇಕು. ಪ್ರತಿ ವಾರವೂ ಅವರುಗಳು ನಿರ್ವಹಿಸಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡು ಯಾಕೆ ತಡವಾಗಿದೆ ಎಂದು ಪ್ರಶ್ನಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.


ನಾನು ಎರಡು ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಆಗಲಿ, ನನ್ನ ಶಾಸಕತ್ವ ಅವಧಿಯಲ್ಲಾಗಲಿ ಎಂದಿಗೂ ಯಾವುದೇ ಸ್ತರದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲಾ, ಮಾಡಿಕೊಳ್ಳುವುದು ಇಲ್ಲ. ಬೇರೆ ರಾಜಕಾರಣಿಗಳಂತೆ ಅಧಿಕಾರಿಗಳ ವಿರುದ್ಧ ಹರಿಹಾಯಲಿಲ್ಲ. ನನ್ನ ಪರವಾಗಿ ಹಣ ಸಂಗ್ರಹಿಸುವಂತೆ ನಾನು ಎಂದಿಗೂ ಯಾವ ಅಧಿಕಾರಿಗಳಿಗೂ ಸೂಚಿಸಿಲ್ಲ. ಈ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡ ಮಟ್ಟದ ಅನುದಾನಗಳು ದೊರೆಯುವ ನಿರೀಕ್ಷೆ ಇಲ್ಲ. ಹಾಗಂತ ಅಧಿಕಾರಿಗಳು ಕೈಕಟ್ಟಿ ಕೂರದೆ ಬರುವ ಅನುದಾನಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸ ಮಾಡಿ. ನಿಮಗೆ ಯಾವುದೇ ರೀತಿಯ ತೊಂದರೆಯಾದರೂ ನನ್ನ ಬಳಿಗೆ ನೇರವಾಗಿ ಬನ್ನಿ, ಆದರೆ, ಸುಖಾಸುಮ್ಮನೆ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ ಎಂದರು.


ಕೆಡಿಪಿ ಸಭೆಯಲ್ಲಿ ನಗರಾಡಳಿತ, ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ರೇಷ್ಮೆ, ತೋಟಗಾರಿಕೆ, ಪಶುಪಾಲನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಸೇರಿದಂತೆ ಬಹುತೇಕ ಇಲಾಖೆ ಅಧಿಕಾರಿಗಳು ತಮ್ಮಲ್ಲಿನ ಸಿಬ್ಬಂದಿ ಕೊರತೆ ಕುರಿತು ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದರು. ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕುಮಾರಸ್ವಾಮಿ, ಬೇರೆ ಕಡೆಯಿಂದ ಸಿಬ್ಬಂದಿಯನ್ನು  ನಿಯೋಜಿಸುವ ಜತೆಗೆ ಸಿಬ್ಬಂದಿ ಕೊರೆತೆ ನೀಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.


ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ಕೆಐಆರ್‍ಡಿಎಲ್ ಹಾಗೂ ನಿರ್ಮಿತಿ ಕೇಂದ್ರ ನಿರ್ಮಿಸಿರುವ ಘಟಕಗಳನ್ನು ಪೂರ್ಣಗೊಳಿಸಿ ಹಸ್ತಾಂತರ ಮಾಡದ ಕಾರಣ ಸಮಸ್ಯೆಯಾಗಿದೆ ಎಂದು ತಾಪಂ ಇಓ ಶಿವಕುಮಾರ್ ಕುಮಾರಸ್ವಾಮಿ ಯವರ ಗಮನಕ್ಕೆ ತಂದರು. ಗ್ರಾಮೀಣ ಭಾಗದಲ್ಲಿ ಎಷ್ಟು ಕಡೆ ನೀರಿನ ಘಟಕಗಳು ಕೆಟ್ಟು ನಿಂತಿವೆ ಎಂಬ ವರದಿ ಸಲ್ಲಿಸುವಂತೆ ಎಚ್‍ಡಿಕೆ ಸೂಚಿಸಿದರು.


ಜಲಜೀವನ್ ಮಿಷನ್‍ನಲ್ಲಿ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಕೆಲವು ಕಡೆ ಗುಂಡಿಗಳನ್ನು ಮುಚ್ಚದ ಕುರಿತು, ನಲ್ಲಿ ಅಳವಡಿಸದ ಕುರಿತು ದೂರುಗಳು ಬರುತ್ತಿವೆ. ಬೇರೆ ಕಡೆ ಏನಾಗಿದೆಯೋ ನನಗೆ ಗೊತ್ತಿಲ್ಲ ಆದರೆ, ನಮ್ಮ ತಾಲೂಕಿನಲ್ಲಿ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಅನುಷ್ಠಾಗೊಳಿಸಿ, ಇಲ್ಲವಾದರೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ಎಂದು ಹಿರಿಯ ಅಧಿಕಾರಿಗಳಿಗೆ ಕುಮಾರಸ್ವಾಮಿ ತಾಕೀತು ಮಾಡಿದರು.


ನಗರದ ಯುಜಿಡಿ ಕಾಮಗಾರಿಗಾಗಿ 93 ಕೋಟಿ ಅನುದಾನ ಮಂಜೂರಾಗಿದೆ. ಆದರೆ ಪರಿಷ್ಕೃತ ಅಂದಾಜು ವೆಚ್ಚ 142 ಕೋಟಿಗೆ ಏರಿಕೆಯಾಗಿರುವುದರಿಂದ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಗಮನಕ್ಕೆ ತಂದರು.

ನಗರದ ಕಸದ ವಿಲೇವಾರಿಗೆ ಸಂಬಂಧಿಸಿದಂತೆ ವಂದಾರಗುಪ್ಪೆ ಬಳಿಗೆ 9.5 ಎಕರೆ ಜಾಗ ಗುರುತಿಸಿದ್ದು, ಹದ್ದುಬಸ್ತು ಮಾಡಿ ಹಸ್ತಾಂತರಿಸಿದರೆ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯವಾಗಲಿದೆ ಎಂದು ಪೌರಾಯುಕ್ತ ಸಿ ಪುಟ್ಟಸ್ವಾಮಿ ತಿಳಿಸಿದರು.


ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ, ಅವುಗಳನ್ನು ನಿಯಂತ್ರಿಸಲು ಸಿಸಿಟಿವಿ ಅವಶ್ಯಕತೆ ಇದ್ದು, ಸಾರಿಗೆ ಅಧಿಕಾರಿಗಳು ಇದೂವರೆಗೂ ಗಮನಹರಿಸಿಲ್ಲ ಎಂದು ನಗರ ಪೋಲಿಸ್ ಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಸಭೆಯ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ಎಚ್‍ಡಿಕೆ, ಪ್ರಸ್ತಾವನೆ ಸಲ್ಲಿಸಿ, ಇನ್ನೊಂದು ವಾರದಲ್ಲಿ ನನ್ನ ಅನುದಾನದಲ್ಲೇ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ವಹಿಸುತ್ತೇನೆ. ಅಂತೆಯೇ ಗ್ರಾಮೀಣ ಭಾಗದಿಂದ ಬರುವ ರೈತರನ್ನು ಹೆಲ್ಮೆಟ್ ಹಾಕಿಲ್ಲ ಎಂತಲೋ ಇಲ್ಲ ನಿಯಮ ಪಾಲನೆ ಮಾಡಿಲ್ಲ ಎಂತಲೋ ಸುಲಿಗೆ ಮಾಡಬೇಡಿ, ಅವರ ಮೇಲೆ ಕೇಸ್ ಹಾಕಬೇಡಿ. ಶಾಲಾ ಕಾಲೇಜುಗಳ ಬಳಿ ಅಲೆಯುವ ಪುಂಡುಪೋಕರಿಗಳಿಗೆ ಕಡಿವಾಣ ಹಾಕಿ, ಹೆಣ್ಣು ಮಕ್ಕಳು ನೆಮ್ಮದಿಯಿಂದ ಓಡಾಡುವ ವಾತಾವರಣ ನಿರ್ಮಿಸಿ, ಅಗತ್ಯ ಬಿದ್ದರೆ ಇಂಥ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಗಮನ ನೀಡಿ ಎಂದು ಸೂಚಿಸಿದರು.


ಇದೇ ವೇಳೆ ತಾಲೂಕುಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಮಂಡಿಸಿದರು.


ಈ ಸಂದರ್ಭದಲ್ಲಿ ತಹಸೀಲ್ದಾರ್ ಮಹೇಂದ್ರ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್, ತಾಪಂ ಆಡಳಿತಾಧಿಕಾರಿ ರಾಧ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಮೆಹರೀಶ್, ಪೌರಾಯುಕ್ತ ಸಿ.ಪುಟ್ಟಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್
ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್

ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ

ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ
ಆರೋಪಿ ಸುಹೇಲ್ ಪರವಾಗಿ ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ ನಡೆಸಿದ ಗೆಳತಿ ಭಾನುಪ್ರಿಯಾ

ಚನ್ನಪಟ್ಟಣ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯ ವಾಸೀಲ್ ಅಲಿಖಾನ್ ಮತ್ತು ಅಬಿದಾಬಾನು ರವರ ನಡುವೆ ವಾಗ್ವಾದ ನಡೆದಿತ್ತು. ಅದೇ ದಿನ ನಗರಸಭೆ ಆವರಣದಲ್ಲಿ

ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು
ಪರಸ್ಪರರ ವಿರುದ್ಧ ನಗರಸಭೆ ಸದಸ್ಯರ ದೂರು

ಚನ್ನಪಟ್ಟಣ: ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ನಡೆದ ಮಾತಿನ ಚಕಮಕಿಯ ನಂತರ ಹೊರ ಆವರಣದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದಸ್ಯರುಗಳ ಜೊತೆಗೆ

ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್
ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್

ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದ

ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು
ನಗರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್‍ನ ನಿಗಾರ್ ಬೇಗಂ ಅವಿರೋಧವಾಗಿ ಆಯ್ಕೆಯಾದರು

ಚನ್ನಪಟ್ಟಣ: ಹಿಂದಿನ ಉಪಾಧ್ಯಕ್ಷೆ ಹಸೀನಾ ಫರ್ಹೀನ್ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು. ಚುನಾ

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ
ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾ

ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ  ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ

 ಚನ್ನಪಟ್ಟಣ, ನ.೦೬: ಜನಸಂಪರ್ಕ ಸಭೆ ಹೆಸರಲ್ಲಿ ಅಧಿಕಾರಿಗಳನ್ನು ಬೆದರಿಸುವ ಸಂಸದರಿಗೆ ಸಾತನೂರು ಸರ್ಕಲ್ ರಸ್ತೆಯ ಗುಂಡಿಗಳು ಕಾಣಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್.

೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ
೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸ

ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ
ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಮನೆ ಇಲ್ಲದ ನಾಲ್ಕು ಮಂದಿ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದು,

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್
ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್

ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್‍ಅವರು ಅವಿರೋಧವಾಗಿ ಆಯ್ಕೆಯಾದರು.

Top Stories »  


Top ↑