ಟಿಎಪಿಸಿಎಂಎಸ್ ಅಕ್ಕಿ ಹಗರಣದ ತನಖೆ ಮುಗಿಯುವ ತನಕ ಚುನಾವಣೆ ಬೇಡ ಎಸ್ ಗಂಗಾಧರ
ಚನ್ನಪಟ್ಟಣ: ಟಿಎಪಿಸಿಎಂಎಸ್ನಲ್ಲಿ ೫೦ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ಕಿ ಕಳುವಾಗಿದೆ, ಅದು ಜೆಡಿಎಸ್ ಪಕ್ಷದ ಬೆಂಬಲಿತರೇ ಅಧಿಕಾರ ನಡೆಸುತ್ತಿದ್ದಾಗಲೇ ಹಗರಣ ನಡೆದಿದ್ದು, ಮತ್ತೆ ಅವರೇ ಅಧಿಕಾರಕ್ಕೆ ಬಂದಲ್ಲಿ ಈ ಹಗರಣವನ್ನು ಮುಚ್ಚಿಹಾಕಬಹುದು, ಇಲ್ಲದಿದ್ದಲ್ಲಿ ನಾವು ಬೀದಿಗೆ ಬರಬೇಕಾಗುತ್ತದೆ ಎಂಬ ಆತಂಕದಲ್ಲಿ ಜೆಡಿಎಸ್ನವರು ಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ. ಟಿಎಪಿಸಿಎಂಎಸ್ ಗೋದಾಮಿನಿಂದ ಅಕ್ಕಿ ನಾಪತ್ತೆಯಾಗಿರುವ ಹಗರಣದ ತನಿಖೆ ಪೂರ್ಣಗೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾದ ನಂತರವೇ ಸಂಸ್ಥೆಗೆ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಅಗ್ರಹಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಅನ್ನಭಾಗ್ಯ ಕಲ್ಪಿಸಲು ಸರ್ಕಾರ ನೀಡಿದ್ದ ಅಕ್ಕಿಗೆ ಗೋದಾಮಿನಲ್ಲೇ ಕನ್ನ ಹಾಕಲಾಗಿದೆ. ತಾಲೂಕಿನಲ್ಲಿ ಜೆಡಿಎಸ್ನ ಶಾಸಕರಿದ್ದು, ಒಂದು ಭ್ರಷ್ಟಾಚಾರದ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶವಿಟ್ಟುಕೊಂಡು ಆಡಳಿತ ಪಕ್ಷವೇ ಪ್ರತಿಭಟನೆ ನಡೆಸಿರುವುದು ಸೋಜಿಗ ಎಂದರು.
ಅಕ್ಕಿ ಹಗರಣದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಈ ವಿಚಾರದಲ್ಲಿ ಹೆಚ್ಡಿಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಪಕ್ಷದ ಮುಖಂಡರಿಗೆ ಬುದ್ಧಿ ಹೇಳಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ದಂಡ ಪಾವತಿಸಿದ್ದರು. ಅದೇ ಮಾದರಿಯನ್ನು ಅಕ್ಕಿ ಹಗರಣದ ಹೊಣೆಯನ್ನು ಟಿಎಪಿಸಿಎಂಎಸ್ ಆಡಳಿತ ಮಂಡಳಿ ಹೊರಬೇಕು. ಜನ ನಿಮ್ಮನ್ನು ನಂಬಬೇಕು ಎಂದರೆ ಈ ಹಗರಣದ ತನಿಖೆ ಎದುರಿಸಿ ಎಂದರು.
ಅಕ್ಕಿ ಹಗರಣವೇನಾದರೂ ಮುಂದೆ ಅಧಿಕಾರಕ್ಕೆ ಬರುವವರಿಗೆ ಯಾವುದೇ ಹಗರಣ ಮಾಡಿ ದಕ್ಕಿಸಿಕೊಳ್ಳಬಹುದು ಎಂದು ಧೈರ್ಯ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೋರಾಟ ನಡೆಸಿದ್ದು, ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸಲಿದೆ. ಶೇರುದಾರರರಲ್ಲದವರನ್ನು, ತಮಗಿಷ್ಟ ಬಂದವರನ್ನು ಮತದಾರ ಪಟ್ಟಿಗೆ ಸೇರಿಸಿ ಜೆಡಿಎಸ್ ಚುನಾವಣೆ ನಡೆಸಲು ಹವಣಿಸಿದೆ. ಡಿ.3ರ ಚುನಾವಣೆ ಮುಂದೂಡಿಕೆಯಾಗಿದ್ದು, ಸಾಕಷ್ಟು ಜನರಿಗೆ ಮೆಚ್ಚುಗೆಯಾಗಿತ್ತು. ಬಿಜೆಪಿ, ಜೆಡಿಎಸ್ನ ಸಾಕಷ್ಟು ಕಾರ್ಯಕರ್ತರಿಗೆ ಚುನಾವಣೆ ಮುಂದೂಡಿಕೆಯಾಗಿದ್ದು, ಸಂತಸ ಮೂಡಿಸಿತ್ತು ಎಂದು ತಿಳಿಸಿದರು.
ಸುಮಾರು ೨ದಶಕಗಳ ಕಾಲ ತಾಲೂಕಿನ ಶಾಸಕರಾಗಿ ಸಿ.ಪಿ.ಯೋಗೇಶ್ವರ್ ಆಡಳಿತ ನಡೆಸಿದ್ದಾರೆ. ಆದರೆ, ಟಿಎಪಿಸಿಎಂಎಸ್ನಲ್ಲಿ ನಡೆದಿರುವ ಅಕ್ಕಿ ಹಗರಣ ಸಂಬಂಧ ಅವರು ಸಹ ಮಾತನಾಡಲು ಮುಂದಾಗಿಲ್ಲ. ನಿಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೇ ಚುನಾವಣೆಗೆ ವಿರೋಧವಿದ್ದಾರೆ. ಆದರೆ, ಸಿಪಿವೈ ಯಾಕೆ ಮಾತನಾಡುತ್ತಿಲ್ಲವೋ ಗೊತ್ತಿಲ್ಲ ಎಂದರು.
ಇತ್ತೀಚಿಗೆ ಕಾಂಗ್ರೆಸ್ ನಗರಸಭೆ ಸದಸ್ಯ ವಾಸೀಲ್ ಅಲಿಖಾನ್ ಅವರ ಮೇಲೆ ಸಭೆಯ ನಂತರ ಜೆಡಿಎಸ್ ಕಾರ್ಯಕರ್ತ ಹಲ್ಲೆ ನಡೆಸಿ, ಅವರ ಮೇಲೆ ಚಪ್ಪಲಿ ಎಸೆದಿದ್ದಾನೆ. ಇದು ಜೆಡಿಎಸ್ ನೀತಿಯಾಗಿದೆ ಎಂದು ಕಿಡಿಕಾರಿದರು.
ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ್ದಕ್ಕೆ ನನ್ನನ್ನು ಟಾರ್ಗೇಟ್ ಮಾಡಲಾಗಿದೆ. ನಿಮ್ಮನ್ನು ಗುರಿಯಾಗಿಸಿದ್ದು, ನೀವು ಎಚ್ಚರಿಕೆಯಿಂದ ಇರುವಂತೆ ಕೆಲವು ಹಿತೈಷಿಗಳು ನನಗೆ ಸಲಹೆ ನೀಡಿದ್ದಾರೆ. ನಾವು ಇದಕ್ಕೆಲ್ಲ ಹೆದರುವುದಿಲ್ಲ. ಟಿಎಪಿಸಿಎಂಎಸ್ ಚುನಾವಣೆಗೆ ಸಂಬಂಧಿಸಿದಂತೆ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕುಕ್ಕುಟ ಮಹಾಮಂಡಳದ ಅಧ್ಯಕ್ಷ ಕಾಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್, ಮುಖಂಡರಾದ ಚಂದ್ರಣ್ಣ, ಪಿ.ಡಿ.ರಾಜು, ಪಾಪಣ್ಣ, ಕೋಕಿಲಾರಾಣಿ, ರೇಣುಕಮ್ಮ ಸೇರಿದಂತೆ ಮುಂತಾದವರು ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು