ಒಳ್ಳೆಯವರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ, ರೌಡಿ ಶೀಟರ್ ಗಳಿಗೆ ಪಾಠ ಮಾಡಿದ ಡಿವೈಎಸ್ಪಿ ಕೆ ಸಿ ಗಿರಿ
ಚನ್ನಪಟ್ಟಣ: ರೌಡಿಶೀಟರ್ ಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು. ಸಮಾಜದಲ್ಲಿ ತಮ್ಮ ನಡತೆಯನ್ನು ಸುಧಾರಿಸಿಕೊಳ್ಳಬೇಕು. ತಮ್ಮ ಸನ್ನಡತೆಯ ಆಧಾರದ ಮೇಲೆ ರೌಡಿ ಶೀಟರ್ ನಿಂದ ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ, ಇಲ್ಲದಿದ್ದಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಡಿವೈಎಸ್ಪಿ ಕೆ.ಸಿ.ಗಿರಿ ತಿಳಿಸಿದರು.
ನಗರದ ಪುರಪೊಲೀಸ್ ಠಾಣೆ ಆವರಣದಲ್ಲಿ ತಾಲ್ಲೂಕಿನ ಎಲ್ಲಾ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಡೆಸಿ ಮಾತನಾಡಿದ ಅವರು, ರೌಡಿಶೀಟರ್ ಗಳು ಇನ್ನಾದರೂ ಎಚ್ಚೆತ್ತುಕೊಂಡು ತಮ್ಮ ನಡತೆಯನ್ನು ಬದಲಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಶಾಶ್ವತವಾಗಿರೌಡಿಶೀಟರ್ ಗಳಾಗಿಯೇ ಉಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಪರಾಧ ಕೃತ್ಯಗಳಲ್ಲಿ ತೊಡಗುವುದರಿಂದ ನಿಮ್ಮ ಜತೆಗೆ ನಿಮ್ಮ ಕುಟುಂಬದ ಹೆಸರು ಸಹ ಹಾಳಾಗುತ್ತದೆ. ಇದರಿಂದ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಇಷ್ಟು ದಿನ ಹೇಗೆ ನಡೆದಿಕೊಂಡಿರೋ ಗೊತ್ತಿಲ್ಲ, ಆದರೆ, ಇನ್ನು ಮುಂದೆ ಯಾವುದಾದರೂ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದಾದರೂ ತಮ್ಮ ನಡೆತೆಯನ್ನು ರೌಡಿಶೀಟರ್ ಗಳು ಬದಲಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ಸಾಮಾನ್ಯರಂತೆ ತೊಡಗಿಸಿಕೊಳ್ಳಬೇಕು. ಅಪರಾಧ ಕೃತ್ಯಗಳಲ್ಲಿ ತೊಡಗದೇ ಉತ್ತಮ ನಡತೆಯಿಂದ ನಡೆದುಕೊಂಡಲ್ಲಿ ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ತೆಗೆಯುವ ಕುರಿತು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಅಪರಾಧ ಕೃತ್ಯಗಳನ್ನು ನಡೆಸಿಯೂ ಹಣಬಲದಿಂದ ಅಥವಾ ಯಾರದೋ ಪ್ರಭಾವದಿಂದ ಪಾರಾಗುತ್ತೇವೆ ಎಂಬ ಭ್ರಮೆಯಿಂದ ರೌಡಿಗಳು ಹೊರಬರಬೇಕು. ಸಮಾಜಘಾತಕ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಯಾರೂ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಹೆಡೆಮುರಿ ಕಟ್ಟಲಾಗುವುದು. ಆದ್ದರಿಂದ ಇನ್ನಾದರೂ ನಿಮ್ಮ ನಡೆತೆಯನ್ನು ಸುಧಾರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪುರಪೊಲೀಸ್ ಠಾಣೆ, ಪೂರ್ವ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ, ಅಕ್ಕೂರು ಪೊಲೀಸ್ ಠಾಣೆ ಹಾಗೂ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಡೆಸಲಾಯಿತು.
ಈ ಸಂದರ್ಭದಲ್ಲಿ ನಗರ ವೃತ್ತ ನಿರೀಕ್ಷಕರಾದ ಶೋಭಾ, ಟಿ.ಟಿ.ಕೃಷ್ಣ, ಪಿಎಸ್ಐಗಳಾದ ಹರೀಶ್, ಲಿಯಾಕತ್, ಬಸವರಾಜು, ಸೌಜನ್ಯ , ಮಾದೇಶ್, ಮಹೇಶ್ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ
ಪ್ರತಿಕ್ರಿಯೆಗಳು