ಕನಕದಾಸರು ದಾಸ ಶ್ರೇಷ್ಠರಲ್ಲೇ ಶ್ರೇಷ್ಠರು ತಹಶಿಲ್ದಾರ್ ಸುದರ್ಶನ್

ಚನ್ನಪಟ್ಟಣ: ದಾಸಸಾಹಿತ್ಯದಲ್ಲೇ ಶ್ರೇಷ್ಠ ಸಾಹಿತ್ಯ ಕನಕದಾಸ ಸಾಹಿತ್ಯ. ಈ ಸಾಹಿತ್ಯವನ್ನು ಓದುವ ಮೂಲಕ ನಾವೆಲ್ಲರೂ ನಮ್ಮ ಬದುಕಿನಲ್ಲಿ ಸಾಹಿತ್ಯದ ಅರ್ಥವನ್ನು ಅಳವಡಿಸಿಕೊಂಡರೆ ಜೀವನ ಸಾರ್ಥಕವಾದಂತೆ ಎಂದು ತಹಶಿಲ್ದಾರ್ ಬಿ ಕೆ ಸುದರ್ಶನ್ ತಿಳಿಸಿದರು.
ಶುಕ್ರವಾರ ನಗರದ ತಾಲ್ಲೂಕು ಕಛೇರಿಯ ಒಳಾಂಗಣದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಕನಕದಾಸರ ಕೀರ್ತನೆಗಳೆಂದರೆ ಅದೊಂದು ಜೀವನದ ಸಾರಾಂಶ, ಕುಲಕುಲವೆಂದು ಏಕೆ ಒಡೆದಾಡುವಿರಿ, ನಿಮ್ಮ ಕುಲ ಯಾವುದೆಂದು ಬಲ್ಲಿರಾ ಎಂದು ಹಾಡುವ ಮೂಲಕ ಐದು ನೂರು ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದರು. ಇಂದಿಗೂ ಸಹ ನಾವು ಜಾತಿ ವ್ಯವಸ್ಥೆಯಿಂದ ಹೊರಬರಲು ಸಾಧ್ಯವಾಗಿಲ್ಲಾ. ಇಡೀ ಮನುಕುಲದಲ್ಲಿರುವುದು ಹೆಣ್ಣು ಗಂಡು ಎರಡೇ ಜಾತಿ ಎಂಬುದನ್ನು ಮರೆತು ಸಾವಿರಾರು ಜಾತಿಗಳನ್ನು ಹುಟ್ಟುಹಾಕಿ ಅದರಲ್ಲೇ ಬದುಕುತ್ತಿರುವುದು ನಮ್ಮ ದುರ್ದೈವ ಎಂದರು.
ಈ ಸಂದರ್ಭದಲ್ಲಿ ಸಾರ್ವಜನಿಕರು, ಅಧಿಕಾರಿಗಳು, ಸಮುದಾಯದ ಮುಖಂಡರು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು, ಕಲಾವಿದರು ಸೇರಿದಂತೆ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ, ನಗರಸಭೆ ಪೌರಾಯುಕ್ತ ಸಿ ಪುಟ್ಟಸ್ವಾಮಿ, ಗ್ರೇಡ್ ೨ ತಹಶಿಲ್ದಾರ್ ಲಕ್ಷ್ಮಿದೇವಮ್ಮ, ಉಪ ತಹಶಿಲ್ದಾರ್ ಸೋಮೇಶ್, ಡೆಪ್ಯೂಟಿ ತಹಶಿಲ್ದಾರ್ ಹರೀಶ್, ತಾಪಂ ಕಾರ್ಯನಿರ್ವಾಹಕಾಧಿಕಾರಿ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೋಹನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »

ತಾಲ್ಲೂಕು ಆಡಳಿತದ ಗಣರಾಜ್ಯೋತ್ಸವದಲ್ಲಿ ಸಿಪಿವೈ ಭಾಗಿ ಹೆಚ್ಡಿಕೆ ಗೈರು
ಚನ್ನಪಟ್ಟಣ.ಜ.೨೬: ತಾಲ್ಲೂಕು ರಾಷ್ಟ
ಅಮೃತ ಸರೋವರಗಳ ಬಳಿ ಹಾರಾಡಿದ ತ್ರಿವರ್ಣ ಧ್ವಜ
ಚನ್ನಪಟ್ಟಣ: ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಸಲುವಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಅಮೃತ

ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್
ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಚನ್ನಪಟ್ಟಣ:16/01/2023:ರಂತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಮುದ್ದೆಗೌಡನಕಟ್ಟೆ ಹೂಳೆತ್ತುವ ಕ

ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು
ಚನ್ನಪಟ್ಟಣ: ನೇರ ನಡೆ-ನುಡಿಯ ಆದರ್ಶ ವ್ಯಕ್ತಿತ್ವದೊಂದಿಗೆ ಅಜಾತಶತ್ರುವಾಗಿ ಬದುಕಿ ಬಾಳಿದ ಹೃದಯವಂತ ವ್ಯಕ್ತಿ ಕಾಂತರಾಜ್ ಪಟೇಲ್ ಅವರ ನಿಧ

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ
ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವ

ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಬೂತ್ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಮುಖಾಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತ

ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ
ಚನ್ನಪಟ್ಟಣ: ಮಿಸ್ ನಂದಿನಿ ಚಲನಚಿತ್ರದಲ್ಲಿನ ನವಿರಾದ ಕಥೆಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಚಿತ್ರಕಥೆಯ ಮೂಲಕ ಸರ್ಕಾರಿ ಶ

ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ
ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ರೈತಸಂಘದ ಹುಟ್ಟಿಗೆ ಕಾರಣವಾಗಿತ್ತು. ಅರಳಾಳುಸಂದ್ರ ಗ್ರಾಮ ಮೊದಲ್ಗೊಂಡು ಹಲವಾರು ಗ್ರಾಮಗಳಲ್ಲಿ ರೈತ ಚಳವಳಿ

ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು
ಚನ್ನಪಟ್ಟಣ: ಬೆಂಗಳೂರು–ಮೈಸೂರು ನಡುವಿನ ಮುದಗೆರೆ ಗ್ರಾಮದ ಬಳಿಯ ವೈಶಾಲಿ ಹೋಟೆಲ್ ಹತ್ತಿರ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್ ಒಂದು ಚ
ಪ್ರತಿಕ್ರಿಯೆಗಳು