ನಾವು ಸೋಂಕಿತರಲ್ಲ ಶಂಕಿತರು ಮಾತ್ರ. ಸ್ವಚ್ಚತೆಯೇ ಇಲ್ಲದ ಹಾಸ್ಟೆಲ್ ನಲ್ಲೇ ಇದ್ದರೆ ಸೋಂಕು ಗ್ಯಾರಂಟಿ ! ಪ್ರಥಮ ಸಂಪರ್ಕಿತರ ಅಳಲು
ಚನ್ನಪಟ್ಟಣ:ಜೂ/೩೦/೨೦/ಮಂಗಳವಾರ. ತಾಲ್ಲೂಕಿನ ಚಕ್ಕೆರೆ ಗ್ರಾಮದ ಹೊರವಲಯದಲ್ಲಿರುವ ನವೋದಯ ವಸತಿಯುತ ಶಾಲೆಯಲ್ಲಿ ಹತ್ತು ಮಂದಿ ಶಂಕಿತರನ್ನು ಇರಿಸಲಾಗಿದೆ. ಆದರೆ ಹಾಸ್ಟೆಲ್ ನ ಸ್ಥಿತಿಯನ್ನು ನೋಡಿದರೆ ನಮಗೆ ಸೋಂಕಿತರಿಂದ ಬರದ ಕೊರೊನಾ ಹಾಸ್ಟೆಲ್ ನ ಅಶುಚಿತ್ವದಿಂದ ಬರುತ್ತೇನೋ ಎಂಬ ಭಯ ಕಾಡುತ್ತಿದೆ ಎಂದು ಅಲ್ಲಿನ ಶಂಕಿತರು ದೂರವಾಣಿ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿರುವುದು ತಾಲ್ಲೂಕು ಆಡಳಿತದ ಬಗ್ಗೆ ಬೇಸರ ಉಂಟಾಗುವಂತೆ ಮಾಡಿದೆ.
ತಾಲ್ಲೂಕಿನಲ್ಲಿ ಕೊರೊನಾ (ಕೋವಿಡ್-೧೯) ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಒಬ್ಬ ವ್ಯಕ್ತಿಯ ಪ್ರಥಮ ಸೋಂಕಿತರ ಸಂಖ್ಯೆ ಕನಿಷ್ಠ ಒಂದರಿಂದ ಹತ್ತು ಸಂಖ್ಯೆಗಳನ್ನು ಮೀರುತ್ತಿದೆ. ಈ ರಂಪಾಟದಿಂದಲೇ ಹೊನ್ನನಾಯಕನಹಳ್ಳಿ ವಸತಿ ಶಾಲೆಯಲ್ಲಿ ಜಾಗ ಸಾಲದೇ ಚಕ್ಕೆರೆ ಗ್ರಾಮದ ಹೊರವಲಯದಲ್ಲಿರುವ ನವೋದಯ ವಸತಿ ಶಾಲೆಗೆ ಇದೇ ತಿಂಗಳ ೨೫ ನೇ ತಾರೀಖಿನಿಂದ ಶಂಕಿತರನ್ನು ಇರಿಸಲಾಗಿದ್ದು ಇಂದಿಗೆ ಹತ್ತು ಮಂದಿ ಶಂಕಿತರು ಇಲ್ಲಿದ್ದಾರೆ.
ಸ್ವಚ್ಚತೆ ಇಲ್ಲದ ಕೊಠಡಿಗಳು, ಹುಳುಗಳಿರುವ ಶುದ್ಧ ಕುಡಿಯುವ ನೀರು (Water Filter) ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ, ತಳವಿಲ್ಲದ ಹಾಗೂ ಗಬ್ಬು ಹಿಡಿದಿರುವ ಕಸದ ಡ್ರಮ್ (Dust Bin) ಟಾಯ್ಲೆಟ್ ಗೆ ಹೋಗಲು ಹಿಂಜರಿಯುವಂತೆ ಮಾಡುವ ಟಾಯ್ಲೆಟ್ ರೂಂಗಳು ಹೀಗೆ ಎಲ್ಲಿಯೂ ಸ್ವಚ್ಚತೆ ಇಲ್ಲ. ನಾವು ಶಂಕಿತರೇ ವಿನಹ ಸೋಂಕಿತರಲ್ಲ. ನಮಗೆ ಕೊರೊನಾ ಅಥವಾ ಬೇರೆ ಯಾವುದೇ ಖಾಯಿಲೆ ಬಂದರೂ ಇಲ್ಲಿಂದಲೇ ಎಂದು ಶಂಕಿತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ತಾಲ್ಲೂಕು ಆಡಳಿತ ಅನಾಹುತವಾಗುವ ಮೊದಲೇ ಎಚ್ಚೆತ್ತುಕೊಂಡು, ಯಾವ ಇಲಾಖೆಯ, ಯಾವ ಅಧಿಕಾರಗಳಿಗೆ ಏನೇನು ಕೆಲಸ ವಹಿಸಿದ್ದಾರೋ, ಆ ಕೆಲಸವನ್ನು ಮಾಡುವಂತೆ ತಾಕೀತು ಮಾಡಲಿ. ರೋಗಿಯ ವಿರುದ್ದ ಕೆಲಸ ಮಾಡುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗಿದೆ. ಅದರಲ್ಲೂ ಹಾಸ್ಟೆಲ್ ನ ಸ್ವಚ್ಚತೆಯ ಕೆಲಸ ಆಯಾಯ ಪಂಚಾಯತಿಯ ಪಿಡಿಓ ಗೆ ಸಂಬಂಧಿಸಿದ್ದು, ಐದು ದಿನಗಳಾದರೂ ಸ್ವಚ್ಚತೆ ಮಾಡಿಸದ ಅವರ ವಿರುದ್ದ ತಾಲ್ಲೂಕು ಆಡಳಿತವು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಉಳಿದವರಿಗೆ ಎಚ್ಚರಿಕೆ ನೀಡಬೇಕಾಗಿದೆ.
ನಾವು ರೋಗದ ವಿರುದ್ದ ಹೋರಾಡಬೇಕೆ ವಿನಹ ರೋಗಿಯ ವಿರುದ್ದ ಅಲ್ಲಾ ಎನ್ನುವ ಸರ್ಕಾರದ ಧ್ಯೇಯ ವಾಕ್ಯವನ್ನು ಪರಿಪಾಲಿಸುವ ಮೂಲಕ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲಿ ಎಂದು ಶಂಕಿತರು ತಾಲ್ಲೂಕು ಆಡಳಿತಕ್ಕೆ ನಮ್ಮ ಪತ್ರಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು