Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ ಇಂದು ಏಕೈಕ ಪ್ರಕರಣ ದಾಖಲು ಜಿಲ್ಲಾಧಿಕಾರಿ

Posted date: 03 Jul, 2020

Powered by:     Yellow and Red

ರಾಮನಗರ ಜಿಲ್ಲೆಯಲ್ಲಿ ಇಂದು ಏಕೈಕ ಪ್ರಕರಣ ದಾಖಲು ಜಿಲ್ಲಾಧಿಕಾರಿ

ರಾಮನಗರ:ಜು/೦೩/೨೦/ಶುಕ್ರವಾರ. ರಾಮನಗರದ ಟೌನ್ ನಲ್ಲಿ ಇಂದು ಓರ್ವರಿಗೆ ಸೋಂಕು ದೃಢಪಟ್ಟಿದ್ದು, ಉಳಿದ ಮೂರು ತಾಲ್ಲೂಕುಗಳಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.


ರಾಮನಗರದ ಟೌನ್ ನಲ್ಲಿ ನ ವ್ಯಕ್ತಿಯೊಬ್ಬರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದ ವೇಳೆ ಸೋಂಕು ದೃಢಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.


ಇದುವರೆಗೆ ಜಿಲ್ಲೆಯಲ್ಲಿ ೨೨೫ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೬೨, ಮಾಗಡಿ ೮೩, ಚನ್ನಪಟ್ಟಣ ೪೦ ಮತ್ತು ರಾಮನಗರದ ೪೦ ಪ್ರಕರಣಗಳು ಸೇರಿವೆ.


ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೫ ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.


ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶುಕ್ರವಾರ (ಜುಲೈ ೩) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೯,೪೮೪ (ಹೊಸದಾಗಿ ಇಂದಿನ 325 ಸೇರಿ). ಇಂದು ಹೊಸದಾಗಿ ೨೨೦ ಜನ ೧೪ ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ೨೮೭ ಜನರು ಇಂದು ಹೋಂ ಕ್ವಾರಂಟೈ ನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ ೨,೬೧೧ ಕ್ಕೆ ಏರಿಕೆಯಾಗಿದೆ.


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೬೨ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೨,೯೫೯ ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. ಒಟ್ಟು ೭ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ.


 ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೩೪ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೩೫೦ ಕ್ಕೆ ಇಳಿಕೆಯಾಗಿದೆ.


ಇಂದು ಹೊಸದಾಗಿ ೩೨೫ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೯,೮೦೨ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೨೪೭ ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ ೩೨೫ ಬಾಕಿ ವರದಿ ಸೇರಿ ಒಟ್ಟು ೧,೬೭೪ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑