Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ತಾಲ್ಲೂಕಿನಲ್ಲಿ ಇಂದು ಐದು ಮಂದಿಗೆ ಸೋಂಕು ದೃಢ. ೪೮ ಕ್ಕೆ ಏರಿಕೆಯಾದ ಒಟ್ಟು ಪ್ರಕರಣಗಳು

Posted date: 08 Jul, 2020

Powered by:     Yellow and Red

ಚನ್ನಪಟ್ಟಣ ತಾಲ್ಲೂಕಿನಲ್ಲಿ ಇಂದು ಐದು ಮಂದಿಗೆ ಸೋಂಕು ದೃಢ.  ೪೮ ಕ್ಕೆ ಏರಿಕೆಯಾದ ಒಟ್ಟು ಪ್ರಕರಣಗಳು

ಚನ್ನಪಟ್ಟಣ:ಜು/೦೭/೨೦/ಮಂಗಳವಾರ.ನಗರವೂ ಸೇರಿದಂತೆ ತಾಲ್ಲೂಕಿನಲ್ಲಿ ಇಂದು ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರನ್ನು ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ರವರು ತಿಳಿಸಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ ೪೮ ಕ್ಕೆ ಏರಿಕೆ ಕಂಡಿದೆ.


ನಗರದ ಕೋಟೆ ಪ್ರದೇಶದ ಸಾಯಿಬಾಬಾ ದೇವಾಲಯದ ಹಿಂಭಾಗದ ರಸ್ತೆಯ ಪ್ರಥಮ ಸಂಪರ್ಕಿತೆ ೧೦ ವರ್ಷದ ಬಾಲೆ ಯೋರ್ವರಿಗೆ ಹಾಗೂ ರಾಂಪುರ ಗ್ರಾಮದ ಪ್ರಥಮ ಸಂಪರ್ಕಿತ ೪೮ ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.


ಕೋಟೆ ಪ್ರದೇಶದ ಲಾಯದ ಬೀದಿಯ ೩೮ ವರ್ಷದ ವ್ಯಕ್ತಿ, ಕಸಬಾ ಹೋಬಳಿ ಯ ಸಂತೆಮೊಗಳ್ಳಿದೊಡ್ಡಿ ಯ ೩೮ ವರ್ಷದ ಮಹಿಳೆ (ಹೊಂಗನೂರು ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ) ಮತ್ತು ಕನಕನಗರ ದ ೩೪ ವರ್ಷದ ವ್ಯಕ್ತಿಯೊಬ್ಬರಿಗೆ (ಟೊಯೋಟಾ ಕಂಪನಿಯ ಉದ್ಯೋಗಿ) ಪ್ರಥಮ ಬಾರಿಗೆ ಸೋಂಕು ಹರಡಿದ್ದು ಇವರಿಗೆ ಜ್ವರ ಮತ್ತು ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಂಡಿದ್ದರು.


ಈ ಮೇಲಿನ ಎಲ್ಲರ ವಿಚಾರಣೆ ನಡೆಯುತ್ತಿದ್ದು ಅವರ ಮಾಹಿತಿ ಮೇರೆಗೆ ನಾಳೆ ಕನಿಷ್ಠ ೪೦ ಕ್ಕೂ ಹೆಚ್ಚು ಮಂದಿ ಪ್ರಥಮ ಸಂಪರ್ಕಿತರು ಸಿಗಲಿದ್ದು, ಎಳೆಯ ಮಕ್ಕಳು ಹಾಗೂ ೬೦ ವರ್ಷ ದಾಟಿದ ವಯೋವೃದ್ದರನ್ನು ಎಲ್ಲಾ ವ್ಯವಸ್ಥೆ ಇದ್ದರೆ ಅವರ ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗುವುದು. ಉಳಿದ ಮಂದಿಯನ್ನು ಹಾಸ್ಟೆಲ್ ಕ್ವಾರಂಟೈನ್ ಮಾಡಲಾಗುವುದು ಎಂದು ಡಾ ರಾಜು ರವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑