Tel: 7676775624 | Mail: info@yellowandred.in

Language: EN KAN

    Follow us :


ಸೋಂಕು ಪರೀಕ್ಷಾ ವರದಿ ತಡ: ಚನ್ನಪಟ್ಟಣದಲ್ಲಿ ಲೆಕ್ಕಕ್ಕೆ 9 ಸೋಂಕು, ಕೋವಿಡ್ ಗೆ ದಾಖಲಾಗಿದ್ದು ಮಾತ್ರ 3.

Posted date: 26 Jul, 2020

Powered by:     Yellow and Red

ಸೋಂಕು ಪರೀಕ್ಷಾ ವರದಿ ತಡ: ಚನ್ನಪಟ್ಟಣದಲ್ಲಿ ಲೆಕ್ಕಕ್ಕೆ 9 ಸೋಂಕು, ಕೋವಿಡ್ ಗೆ ದಾಖಲಾಗಿದ್ದು ಮಾತ್ರ 3.

ಚನ್ನಪಟ್ಟಣ:ಜು/೨೬/೨೦/ಭಾನುವಾರ. ಚನ್ನಪಟ್ಟಣ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ 9 ಮಂದಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ವಾರವೇ ಪರೀಕ್ಷೆಗೆ ಒಳಪಟ್ಟಿದ್ದರು. ವರದಿ ತಡವಾಗಿ ಬಂದಿರುವುದರಿಂದ ಇವರನ್ನು ಇಂದು ಮತ್ತೊಮ್ಮೆ ಆ್ಯಂಟಿಝೆನ್ ಪರೀಕ್ಷೆಗೆ ಒಳಪಡಿಸಿದ್ದು, ಇವರಲ್ಲಿ 6 ಮಂದಿಗೆ ನೆಗೆಟಿವ್ ಬಂದಿದೆ. ಅಂದರೆ ಇವರಿಗೆ ಸ್ವಾಬ್ ತೆಗೆದಾಗ ಪಾಸಿಟಿವ್ ಇದ್ದು ಇವರಲ್ಲಿ ರೋಗನಿರೋಧಕ ಶಕ್ತಿ ಹಾಗೂ ಮುನ್ನೆಚ್ಚರಿಕೆಯ ಔಷಧ ಪಡೆದಿರುವುದರಿಂದ ನಂತರದ ಪರೀಕ್ಷೆಯಲ್ಲಿ ನೆಗೆಟಿವ್ ದೃಢಪಟ್ಟಿದೆ. 6 ಮಂದಿಯನ್ನು ಅವರ ಮನೆಯಲ್ಲೇ ಕ್ವಾರಂಟೈನ್ ಮಾಡಿದ್ದು ಉಳಿದ 3 ಮಂದಿಯನ್ನು ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದಕ್ಕೆಲ್ಲಾ ಕಾರಣವೆಂದರೆ ತಡವಾಗಿ ಬರುತ್ತಿರುವ ಪರೀಕ್ಷಾ ವರದಿ, ಪ್ರಥಮ ಸಂಪರ್ಕಿತ ಶಂಕಿತರಿರಬಹುದು ಅಥವಾ ಜ್ವರ, ಕೆಮ್ಮು, ನೆಗಡಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬಂದು  ಪರೀಕ್ಷೆ ಮಾಡಿಸಿಕೊಂಡವರಿರಬಹುದು. ಎಲ್ಲರಿಗೂ ವರದಿ ಬರುತ್ತಿರುವುದು ಮಾತ್ರ ಕನಿಷ್ಠ 7 ದಿನದಿಂದ 15 ದಿನಗಳವರೆಗೂ ವರದಿ ಬರುತ್ತಿರುವುದೇ ಕಾರಣವಾಗಿದೆ. ವರದಿ ಬಂದ ನಂತರ ಸೋಂಕಿತರನ್ನೆಲ್ಲಾ ಕರೆತಂದು ಆ್ಯಂಟಿಝೆನ್ ಪರೀಕ್ಷೆಗೆ ಒಳಪಡಿಸಿದಾಗ ರೋಗ ನಿರೋಧಕ ಶಕ್ತಿ ಹೆಚ್ಚಿರುವ ಸೋಂಕಿತರಿಗೆ ನೆಗೆಟಿವ್ ಬರುತ್ತಿದ್ದು, ಅವರನ್ನು ಕನಿಷ್ಠ 7 ದಿನದಿಂದ 14 ದಿನಗಳವರೆಗೆ ಹೋಂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗುತ್ತಿದೆ.


*ವರದಿ ತಡವಾಗಿ ಬರುತ್ತಿರುವುದರಿಂದ ಆತಂಕ:*

ಸ್ವಾಬ್ ತೆಗೆದ 15 ದಿನಗಳ ವರೆಗೂ ವರದಿ ಬರುತ್ತಿರುವುದರಿಂದ ಸೋಂಕಿತರು, ಶಂಕಿತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಗುತ್ತಿದೆ. ಪರೀಕ್ಷೆಗೆ ಒಳಪಟ್ಟ ಶಂಕಿತ, ವರದಿ ಬರುವ ತನಕ ಹೋಂ ಕ್ವಾರಂಟೈನ್ ನಲ್ಲಿ ಇರಬೇಕು. ಆದರೆ ಇದುವರೆಗೂ ಯಾರೂ ಸಹ ಹೋಂ ಕ್ವಾರಂಟೈನ್ ನಲ್ಲಿ ಇರುತ್ತಿಲ್ಲ.ಆತ ಹಲವಾರು ಕಡೆ ಓಡಾಡಿಕೊಂಡು ಜನ ಸಂಪರ್ಕ ಮಾಡಿರುತ್ತಾನೆ. ಆತನಿಂದ ಅನೇಕರಿಗೆ ಸೋಂಕು ಹರಡಿರುತ್ತದೆ. ಇದಕ್ಕೆ ಹೊಣೆ ಯಾರು ? ತಡವಾಗಿ ಬರುತ್ತಿರುವ ವರದಿಯೋ ? ಅಥವಾ ಸ್ವಾಬ್ ಕೊಟ್ಟ ನಂತರ ಮನೆಯಲ್ಲಿರದೇ ಬೀದಿ ಸುತ್ತಿದ್ದ ಶಂಕಿತನದೋ‌ ? ಇಲ್ಲಾ ಇದನ್ನು ಸರಿಯಾಗಿ ನಿಭಾಯಿಸದ ಆಡಳಿತವೋ ? ಎಂಬುದನ್ನು ಸರ್ಕಾರವೇ ಸಾರ್ವಜನಿಕರಿಗೆ ತಿಳಿಸಿಕೊಡಬೇಕಾಗಿದೆ.


*ಬರೇ ಸುಳ್ಳು ಭರವಸೆ*

ಇದೇ ತಿಂಗಳ ಮೊದಲ ವಾರ ರಾಮನಗರದಲ್ಲಿ ಲ್ಯಾಬ್ ಉದ್ಘಾಟನೆ ಮಾಡಿದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ರವರು 24 ಗಂಟೆಯಲ್ಲೇ ವರದಿ ಲಭಿಸುತ್ತದೆ ಎಂದು ಹೇಳಿದರಾದರು, ಲ್ಯಾಬ್ ಕೆಲಸ ಪ್ರಾರಂಭ ಮಾಡಲೇ ಇಲ್ಲ.

ಮೊನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಸಹ 24 ಗಂಟೆಯೊಳಗೆ ವರದಿ ಕೈ ಸೇರಲಿದೆ ಎಂದು ಹೇಳಿದರೂ ಸಹ ಅದು ಕಾರ್ಯರೂಪಕ್ಕೆ ಇಳಿಯಲಿಲ್ಲ. ಇದರಿಂದ ತೊಂದರೆ ಮತ್ತು ಭಯ ಆಗುತ್ತಿರುವುದು ಮಾತ್ರ ಸಾರ್ವಜನಿಕರಿಗೆ.


*ಟ್ರೂನಾಟ್, ಆ್ಯಂಟಿಝೆನ್ ಮತ್ತು ಸ್ವಾಬ್ ನ ಗೊಂದಲ*

ಜಿಲ್ಲಾ ಆಸ್ಪತ್ರೆಯಲ್ಲಿ ಟ್ರೂನಾಟ್, ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಇತ್ತೀಚೆಗೆ ಆ್ಯಂಟಿಝೆನ್ ಮೂಲಕ ಪರೀಕ್ಷೆ ಮಾಡಲಾಗುತ್ತಿದೆಯಾದರೂ, ಆಡಳಿತ ವೈದ್ಯಾಧಿಕಾರಿಗಳು ಹಲವಾರು ಕಾರಣಗಳನ್ನೊಡ್ಡಿ ಅಧಿಕೃತವಾಗಿ ಒಪ್ಪುತ್ತಿಲ್ಲ ಎನ್ನುವುದು ಈಗಾಗಲೇ ಸಾಬೀತಾಗಿದೆ. ಟ್ರೂನಾಟ್ ಮತ್ತು ಆ್ಯಂಟಿಝೆನ್ ಪರೀಕ್ಷೆಗಳಲ್ಲಿ ತಕ್ಷಣವೇ ಸೋಂಕು ಇರುವುದು ದೃಢವಾದರೂ ಸಹ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ, ಸ್ವಾಬ್ ತೆಗೆದ ನಂತರವೇ ದೃಢಪಡಿಸಲಾಗುವುದು ಎಂದು ಕೆಲ ಅಧಿಕಾರಿಗಳು ಹೇಳುತ್ತಾರೆ. ಆದರೆ ಸ್ವಾಬ್ ಪರೀಕ್ಷಾ ವರದಿ ತುಂಬಾ ತಡವಾಗಿ ಬರುತ್ತಿರುವುದರಿಂದ ಸೋಂಕಿತರ ಮತ್ತು ಆತನ ಸಂಪರ್ಕಿತರ ಗತಿ ಏನು ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದ್ದು ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡಬೇಕಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑