Tel: 7676775624 | Mail: info@yellowandred.in

Language: EN KAN

    Follow us :


ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ

Posted date: 13 Oct, 2020

Powered by:     Yellow and Red

ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ

ಚನ್ನಪಟ್ಟಣ:ಅ/13/20/ಮಂಗಳವಾರ. ನಗರದ ಸಿಎಂಸಿ ಲೇಔಟ್ ನಲ್ಲಿನ ನಗರಸಭೆಗೆ ಸೇರಿದ ನಿವೇಶನಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ (ಸ್ಲಂ ಬೋರ್ಡ್) ಯವರು ಬಡವರಿಗೆ ಮನೆ ನಿರ್ಮಿಸಲು ರಾತ್ರೋರಾತ್ರಿ ಫಿಲ್ಲರ್ ನಿಲ್ಲಿಸಿದ್ದು, ನಗರಸಭೆಯ ಅಧಿಕಾರಿಗಳಿಗೆ ಪೀಕಲಾಟಕ್ಕಿಟ್ಟುಗೊಂಡಿದ್ದರೆ, ಇದನ್ನೆ ನೆಪವಾಗಿಟ್ಟುಕೊಂಡಿರುವ ಖಾತೆದಾರರು ನಮಗೂ ಮನೆ ನಿರ್ಮಿಸಲು ಖಾತಾ, ಇ-ಖಾತಾ ಮಾಡಿ ಮನೆ ನಿರ್ಮಿಸಿಕೊಳ್ಳಲು ಪರವಾನಗಿ ನೀಡಬೇಕೆಂದು ಆಗ್ರಹಿಸಿದ್ದಾರೆ.


ಸಿಎಂಸಿ ಲೇಔಟ್ ಗೆ ಸಂಬಂಧಿಸಿದ ದೂರು ಲೋಕಾಯುಕ್ತ ಕೋರ್ಟ್ ನಲ್ಲಿದ್ದು, ಸದ್ಯ ಯಾವುದೇ ವ್ಯಕ್ತಿಗೂ ಮನೆ ನಿರ್ಮಿಸಲು ನಗರಸಭೆಯು ಪರವಾನಗಿ ನೀಡುತ್ತಿಲ್ಲ. ಸ್ಲಂ ಬೋರ್ಡ್ ನವರು ನಿರ್ಮಿಸಲು ಹೇಗೆ ಪರವಾನಗಿ ನೀಡಿದರು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅದರಲ್ಲೂ ನಗರಸಭೆಗೆ ಸೇರಿದ ಜಾಗದಲ್ಲಿ ಸ್ಲಂ ಬೋರ್ಡ್ ನವರು ಮನೆ ನಿರ್ಮಿಸುತ್ತಿದ್ದಾರೋ ಅಥವಾ ಬೇರೆ ಬಲಾಢ್ಯರ ಕಪಿ ಮುಷ್ಟಿಗೆ ಸಿಲುಕಿ ನಿರ್ಮಿಸುತ್ತಿದ್ದಾರೋ ಎಂಬುದನ್ನು ನಗರಸಭೆಯ ಅಧಿಕಾರಿಗಳು ಮತ್ತು ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳು ಸ್ಪಷ್ಟಪಡಿಸಬೇಕಾಗಿದೆ.


ಈ ಮೊದಲು ಸಿಎಂಸಿ ಲೇಔಟ್ ನಲ್ಲಿ ನಗರಸಭೆಗೆ ಸಂಬಂಧಿಸಿದ ಖಾತೆಗಳಲ್ಲಿ ಹಲವಾರು ದೋಷಾರೋಪಗಳಾಗಿವೆ. ಒಂದೇ ನಿವೇಶನ  ನಾಲ್ಕೈದು ಮಂದಿಗೆ ನೋಂದಣಿಯಾಗಿರುವ ಉದಾಹರಣೆಗಳಿವೆ. ಎಷ್ಟೋ ಬಡವರು ನಿವೇಶನ ಇದ್ದೂ ಮನೆ ನಿರ್ಮಿಸಲಾಗದೆ ಬಳಲುತ್ತಿದ್ದಾರೆ. ಕೆಲವು ಮಂದಿ ಈ ನಿವೇಶನ ನಮ್ಮದೋ‌ ಅಥವಾ ಬೇರೆಯವರದೋ ಎಂದು ಖರೆ ಮಾಡಿಕೊಳ್ಳು ಹೆಣಗುತ್ತಿದ್ದಾರೆ. ಇಂತಹ ಸಿಎಂಸಿ ಲೇಔಟ್ ನಲ್ಲಿ ನಗರಸಭೆಯವರಿಗೆ ಗೊತ್ತಿಲ್ಲದೆ, ಬಲಾಢ್ಯರ ಒತ್ತಡದಿಂದ ನಗರಸಭೆಯ ಅಧಿಕಾರಿಗಳಿಗೂ ಗೊತ್ತಾಗದೆ, ಸ್ಲಂ ಬೋರ್ಡ್ ನವರು ಮನೆ ನಿರ್ಮಿಸಲು ಹೊರಟಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ಸ್ಲಂ ಬೋರ್ಡ್ ನವರು ನಮ್ಮ ಬಳಿ‌ ಯಾವುದೇ ಪರವಾನಗಿ ಪಡೆದಿಲ್ಲ. ಇದನ್ನು ಪ್ರಶ್ನಿಸಿ ಈಗಾಗಲೇ ಪತ್ರ ಬರೆದಿದ್ದೇವೆ. ಈಗ ಫಿಲ್ಲರ್ ಹಾಕಿ ಮನೆ ನಿರ್ಮಿಸಲು ಹೊರಟಿರುವುದು ನಗರಸಭೆಯ ಜಾಗವಾಗಿದ್ದು, ಶೀಘ್ರವಾಗಿ ತೆರವುಗೊಳಿಸಿ ಸಮತಟ್ಟು ಮಾಡಬೇಕೆಂದು ಸ್ಲಂ ಬೋರ್ಡ್ ನ‌ ಇಂಜಿನಿಯರ್ ಗಳಿಗೆ ತಿಳಿಸಿದ್ದೇನೆ.

*ಶಿವನಂಕಾರಿಗೌಡ, ಪೌರಾಯುಕ್ತರು, ಚನ್ನಪಟ್ಟಣ ನಗರಸಭೆ*


ಸ್ಲಂ ಬೋರ್ಡ್ ಹಲವಾರು ದಾಖಲೆಗಳನ್ನು ಕಲೆಹಾಕಿ ಮನೆಗಳನ್ನು ನಿರ್ಮಿಸಿ ಮುಂದಿನ ಅಭಿವೃದ್ಧಿಗಾಗಿ ನಗರಸಭೆಗೆ ವಹಿಸಿಕೊಡುತ್ತದೆ. ಈಗ ನಿರ್ಮಿಸುತ್ತಿರುವ ಎಲ್ಲಾ ಮನೆಗಳ ದಾಖಲೆಗಳು ಸರಿಯಾಗಿವೆ. ಶೆಟ್ಟಿಹಳ್ಳಿ ಕೆರೆಯ ಬದಿಯಲ್ಲಿನ 13 ಮನೆಗಳ ಕಾಮಗಾರಿಯನ್ನು ನಿಲ್ಲಿಸಿದ್ದೇವೆ. ನಗರಸಭೆಯ ಜಾಗದಲ್ಲಿ ನಿರ್ಮಿಸಲೊರಟಿರುವ ಮೂರು ಮನೆಗಳನ್ನು ಗುತ್ತಿಗೆದಾರರಿಗೆ ದಿಕ್ಕು ತಪ್ಪಿಸಿ ನಿರ್ಮಾಣ ಮಾಡಲು ಯಾರು ಹೇಳಿದ್ದಾರೋ ಗೊತ್ತಿಲ್ಲ. ಈ ವಿಷಯ ಗೊತ್ತಾದ ತಕ್ಷಣ ಕೆಲಸವನ್ನು ನಿಲ್ಲಿಸಲಾಗಿದೆ. ಶೀಘ್ರವಾಗಿ ತೆರವುಗೊಳಿಸಿ ನಗರಸಭೆಯ ಜಾಗವನ್ನು ಯಥಾಸ್ಥಿತಿಯಲ್ಲಿ ನಗರಸಭೆಗೆ ನೀಡುತ್ತೇವೆ.

*ಶಶಿಕುಮಾರ್ ಎಇ ಸ್ಲಂ ಬೋರ್ಡ್*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑