Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕು: ಡಾ ರಾಕೇಶ್ ಕುಮಾರ್

Posted date: 18 Apr, 2021

Powered by:     Yellow and Red

ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕು: ಡಾ ರಾಕೇಶ್ ಕುಮಾರ್

ಕೋವಿಡ್‌ ನಿಯಂತ್ರಿಸುವ ಕೆಲಸಗಳಿಗೆ  ತಾಲ್ಲೂಕು ಆಡಳಿತ ಮೊದಲ ಆದ್ಯತೆ ನೀಡಬೇಕು. ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕೆಲಸವನ್ನು ಕ್ಷಿಪ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್. ಕೆ ಅವರು ತಿಳಿಸಿದರು.

ಅವರು ಶನಿವಾರ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಮಾತನಾಡಿದರು.


*ಸೋಂಕು ಪರೀಕ್ಷೆ ಹೆಚ್ಚಿಗೆ ನಡೆಸಿ:*

ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನು ಹೆಚ್ಚಳಗೊಳಿಸಬೇಕು. ಸ್ವ್ಯಾಬ್ ಕಲೆಕ್ಟ್ ಮಾಡಲು ಸಿಬ್ಬಂದಿ ಕೊರತೆ ಇದ್ದಲ್ಲಿ ನಿಯಮಾವಳಿಗಳಂತೆ ನಿಯೋಜಿಸಿಕೊಳ್ಳಿ, ವಾಹನದ ವ್ಯವಸ್ಥೆ ಮಾಡಿಕೊಳ್ಳಿ. ಅನುದಾನದ ಕೊರತೆ ಇಲ್ಲ ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.


ಜನಸಂದಣಿ ಇರುವ ಪ್ರದೇಶಗಳಲ್ಲಿ

ಮೊಬೈಲ್ ಪರೀಕ್ಷಾ ಕೇಂದ್ರ ಆರಂಭಿಸಿ ಸ್ವ್ಯಾಬ್ ಸಂಗ್ರಹಿಸಿ. ಶೀಘ್ರ ಪತ್ತೆಯಿಂದ ರೋಗ ಹರಡುವುದನ್ನು ನಿಯಂತ್ರಿಸಬಹುದು ಎಂದರು.


ಖಾಸಗಿ ಆಸ್ಪತ್ರೆ/ ಕ್ಲಿನಿಕ್ ಅವರಿಗೆ ಸೂಚನೆ ನೀಡಿ ಐ.ಎಲ್. ಐ ಹಾಗೂ ಎಸ್.ಎ.ಆರ್.ಐ ಪ್ರಕರಣಗಳ ಪಟ್ಟಿ ಪಡೆದು ಪರೀಕ್ಷೆಗೆ ಒಳಪಡಿಸಿ. ಖಾಸಗಿ ಆಸ್ಪತ್ರೆ/ ಕ್ಲಿನಿಕ್ ಅವರು ಸಹಕರಿಸದಿದ್ದರೆ ನೋಟೀಸ್ ಜಾರಿ ಮಾಡಿ ಎಂದರು.


ಕೋವಿಡ್ ಸೋಂಕು ಪರೀಕ್ಷೆಯ ನಂತರ ವರದಿಯನ್ನು ಶೀಘ್ರವಾಗಿ ನೀಡಲು ವ್ಯವಸ್ಥೆ ಮಾಡಿಕೊಳ್ಳಿ.ಎರಡು ಪಾಳಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಿ, ಪರೀಕ್ಷಾ ವರದಿಯನ್ನು ಶೀಘ್ರವಾಗಿ ನೀಡಬಹುದು ಎಂದರು.


ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಟ್ರೇಸಿಂಗ್ ತಂಡಗಳನ್ನು ವಾಡ್೯ / ಗ್ರಾಮವಾರು   ನಿಯೋಜಿಸಿಕೊಂಡು ಕೋವಿಡ್  ಸೋಂಕಿತರ ಸಂಪರ್ಕಿತರ ಪತ್ತೆ ಕೆಲಸ ಚುರುಕುಗೊಳಿಸಿ. ಕೋವಿಡ್ ವಾರ್ ರೂಂ ನಲ್ಲಿ ಕ್ರಮಬದ್ಧವಾಗಿ ಉತ್ತಮ ರೀತಿಯಲ್ಲಿ ಕೆಲಸವಾಗಬೇಕು. ಪರಿಶೀಲನೆಯ ವೇಳೆ ಯಾವುದೇ ಲೋಪ ಇರಬಾರದು ಎಂದು ಎಚ್ಚರಿಕೆ  ನೀಡಿದರು. 


ಆರೋಗ್ಯ ಸಿಬ್ಬಂದಿಗಳು ಹಾಗೂ ಫ್ರಂಟ್ ಲೈನ್ ವರ್ಕಸ್೯ಗಳು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ವಾರ್ ರೂಂ ಮೂಲಕ ಕರೆ ಮಾಡಿ ಲಸಿಕೆ  ಪಡೆದುಕೊಳ್ಳುವಂತೆ ತಿಳಿಸಿ ಅವರ ಆರೋಗ್ಯ ಅತ್ಯಂತ ಮುಖ್ಯ ಎಂದರು.


ಪಿ.ಹೆಚ್.ಸಿ ವಾರು ಕೋವಿಡ್ ಲಸಿಕೆ ಸಾಧನೆಯ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಕಡಿಮೆ ಸಾಧನೆಯಾಗಿರುವ ಪಿ.ಹೆಚ್.ಸಿಗಳಿಗೆ ಗ್ರಾಮದಲ್ಲಿ ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಜಾಗೃತಿ ಕಾರ್ಯಕ್ರಮಗಳ ನಂತರವು ಲಸಿಕೆ ಪಡೆಯುತ್ತಿಲ್ಲ ಎಂದು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. . ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು  45 ವರ್ಷ ಮೇಲ್ಪಟ್ಟ ವರು ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಎಂದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಾ, ಡಿ.ಎಸ್ ಒ ಡಾ ಕಿರಣ್ ಶಂಕರ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ , ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑