ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಹತ್ತೇ ದಿನದಲ್ಲಿ ಆಕ್ಸಿಜನ್ ಟ್ಯಾಂಕ್ ಅಳವಡಿಕೆ
ಬೆಂಗಳೂರು: ಯಾರಾದರೂ ಕೋವಿಡ್ ಪರಿಸ್ಥಿತಿಯ ದುರ್ಲಾಭವನ್ನು ಪಡೆದುಕೊಂಡು ಹಣ ಸುಲಿಗೆ ಮಾಡಲೆತ್ನಿಸಿದರೆ ಮುಲಾಜಿಲ್ಲದೆ ಕ್ರಮ ಕೈಕೊಳ್ಳಲಾಗುವುದು ಹಾಗೂ ಬಂಧಿಸಿ ಜೈಲಿಗಟ್ಟಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಚ್ಚರಿಕೆ ನೀಡಿದರು.
ಬುಧವಾರ ಬೆಳಗ್ಗೆಯೇ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; "ಈ ಬಗ್ಗೆ ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಯಾರಾದರೂ ಆಮ್ಲಜನಕ, ಹಾಸಿಗೆಗಳು, ರೆಮಿಡಿಸ್ವಿರ್, ಆಂಬ್ಯುಲೆನ್ಸ್, ಚಿತಾಗಾರ ಮತ್ತಿತರೆ ಯಾವುದೇ ಇರಲಿ, ಪರಿಸ್ಥಿತಿಯ ದುರ್ಲಾಭ ಮಾಡಿಕೊಳ್ಳಲು ಯತ್ನಿಸಿದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಅತ್ಯಂತ ಕಠಿಣ ಕ್ರಮ ಜರುಗಿಸುತ್ತೇವೆ" ಎಂದರು.
ಯಾರಿಗೆ ಸಮಸ್ಯೆಯಾದರೂ ಹೆಲ್ಪ್ಲೈನ್ ಸಂಖ್ಯೆ 112 ಕ್ಕೆ ಕರೆ ಮಾಡಿದರೆ ಸಾಕು. ತತ್ಕ್ಷಣವೇ ಸ್ಪಂದನೆ ಸಿಗುತ್ತದೆ. ಯಾರಾದರೂ ಹಣಕ್ಕೆ ಡಿಮಾಂಡ್ ಮಾಡಿದರೆ ದೂರು ನೀಡಬಹುದು. ಅಲ್ಲಿ ದೂರು ನೀಡಿದರೆ ಖಂಡಿತವಾಗಿಯೂ ಕ್ರಮ ಜರುಗಿಸಲಾಗುವುದು ಎಂದು ನಾನು ಖಾತರಿ ಕೊಡುತ್ತೇನೆ ಎಂದರು ಡಿಸಿಎಂ.
*ಪ್ರಾಥಮಿಕ ಹಂತದಲ್ಲಿ ರೆಮಿಡಿಸ್ವಿರ್ ಬೇಡ:*
ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಪಾಸಿಟೀವ್ ಬಂದರೆ ಅವರಿಗೆ ಕೂಡಲೇ ರೆಮಿಡಿಸ್ವಿರ್ ಕೊಡುವ ಅಗತ್ಯವಿಲ್ಲ ಎಂದ ಡಿಸಿಎಂ, ಅನಗತ್ಯ ಗಾಬರಿ ಬೇಡ. ಆರಂಭದಿಂದಲೇ ಚಿಕಿತ್ಸೆ ಪಡೆದರೆ ಯಾವ ಸಮಸ್ಯೆಯೂ ಆಗುವುದಿಲ್ಲ ಎಂದು ಜನರಿಗೆ ಧೈರ್ಯ ತುಂಬಿದರು.
ಸದ್ಯದ ಸ್ಥಿತಿಯಲ್ಲಿ ಪ್ರತಿದಿನ 24,000 ವೈಲ್ ರೆಮಿಡಿಸ್ವಿರ್ ಕೊಡಲು ಸಾಧ್ಯವಾಗುತ್ತದೆ. ಅದು ಸದ್ಬಳಕೆ ಆಗುವ ಹಾಗೂ ಅಗತ್ಯವಿರುವವರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಔಷಧಿ ಕೊರತೆ ಆಗದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
*ರಾಮನಗರ ಜಿಲ್ಲಾಸ್ಪತ್ರೆಗೆ 10 ದಿನದಲ್ಲಿ ಆಕ್ಸಿಜನ್ ಸಂಗ್ರಹ ಘಟಕ:*
ರಾಮನಗರ ಜಿಲ್ಲೆಯಲ್ಲಿ ಪರಿಸ್ಥಿತಿ ದಿನೇದಿನೆ ಹದಗೆಡುತ್ತಿದ್ದು ಆಮ್ಲಜನಕದ ಕೊರತೆ ಆಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಡಿಸಿಎಂ ಹೇಳಿದಿಷ್ಟು;
ನಿನ್ನೆ ಒಂದೇ ದಿನ 550 ಸೋಂಕಿತರು ಪತ್ತೆಯಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ 3,000 ಸೋಂಕಿತರು ಇದ್ದಾರೆ. ಈ ಪ್ರಮಾಣದಲ್ಲಿ ಕೇವಲ ಶೇ.10 ರಷ್ಟು ಸೋಂಕಿತರಿಗೆ ಆಕ್ಸಿಜನ್ ಬೆಡ್ಗಳ ಅಗತ್ಯವಿದೆ. ಆದರೆ, ಸರಕಾರ ಶೇ.20-30 ರಷ್ಟು ಸೋಂಕಿತರಿಗೂ ಆಕ್ಸಿಜನ್ ಬೆಡ್ಗಳನ್ನು ವ್ಯವಸ್ಥೆ ಮಾಡಲಾಗಿದೆ.
ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಕೋವಿಡ್ ಕಾಲ್ ಸೆಂಟರ್ ಮಾಡುತ್ತಿದ್ದೇವೆ. ಇನ್ನು ಹತ್ತೇ ದಿನದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಂಗ್ರಹಕ್ಕೆ ಟ್ಯಾಂಕ್ನ್ನು ಅಳವಡಿಸಲಾಗುತ್ತಿದೆ ಹಾಗೂ ಪ್ರತಿ ನಿಮಿಷಕ್ಕೆ 1000 ಕೆಎಲ್ ಆಮ್ಲಜನಕ ಪೂರೈಕೆ ಮಾಡುವ ಆಕ್ಸಿಜನ್ ಜನರೇಟರ್ ಹಾಕಲಿಕ್ಕೂ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಕೆಲ ದಿನಗಳಲ್ಲೇ ಇವೆಲ್ಲ ಸೌಲಭ್ಯಗಳು ಕಾರ್ಯಾಚರಣೆಗೆ ಬರಲಿವೆ ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು