Tel: 7676775624 | Mail: info@yellowandred.in

Language: EN KAN

    Follow us :


ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ

Posted date: 06 May, 2021

Powered by:     Yellow and Red

ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ

ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಕೋವಿಡ್ ಸೆಂಟರ್ ನಿರ್ಮಾಣಕ್ಕೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.


ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ನೂರು ಹಾಸಿಗೆಗಳಲ್ಲಿ 50 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಡೆಸಲಾಗುತ್ತಿದೆ. ಆಸ್ಪತ್ರೆಗೆ ಹೊರ ಹಾಗೂ ಒಳರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆಯಲ್ಲಿ ಇಲ್ಲಿಯೇ ಕೋವಿಡ್ ಕೇರ್ ಸೆಂಟರ್ ನಡೆಸುವುದು ಸರಿಯಲ್ಲ.


ಇದಲ್ಲದೇ ಇರುವ ಒಂದೇ ದ್ವಾರದಲ್ಲಿ ಸಾಮಾನ್ಯ ರೋಗಿಗಳು ಹಾಗೂ ಸೋಂಕಿತರು ತಿರುಗಾಡಬೇಕಾದ ಅನಿವಾರ್ಯತೆ ಇರುವ ಕಾರಣದಿಂದ, ನೂತನವಾಗಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನವನ್ನು ತಾತ್ಕಾಲಿಕ ಕೇರ್ ಸೆಂಟರ್‌ಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದರು.


ಭವನದಲ್ಲಿ 150 ಹಾಸಿಗೆಯುಳ್ಳ ಸುಸಜ್ಜಿತ ಕೇರ್ ಸೆಂಟರ್‌ಗೆ ಕೂಡಲೇ ವ್ಯವಸ್ಥೆ ಮಾಡುವಂತೆ ತಹಸೀಲ್ದಾರ್ ಮತ್ತು ಆರೋಗ್ಯಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಇರುವ ವ್ಯವಸ್ಥೆಯಲ್ಲಿಯೆ ಉತ್ತಮವಾಗಿ ನಮ್ಮ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.  ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆಇರುವುದು ಕಂಡುಬಂದಿದೆ. ಕೂಡಲೇ ಅವಶ್ಯಕವಾಗಿರುವ ಆಕ್ಸಿಜನ್ ಪೂರೈಕೆಗೆ ಕ್ರಮಕೊಳ್ಳಲಾಗುವುದು ಎಂದು ತಿಳಿಸಿದರು.


ಭಯ ಬೇಡ ಧೈರ್ಯವಾಗಿರಿ

ಕರೊನಾ ಬಗ್ಗೆ ತಾಲೂಕಿನ ಜನತೆ ಆತಂಕಪಡುವ ಅವಶ್ಯಕತೆಇಲ್ಲ. ಆದರೆ, ಎಚ್ಚರಿಕೆಯಿಂದ ಇರುವ ಅಗತ್ಯವಿದೆ. ಮುಂದಿನ ಮೂರು ಅಥವಾ ನಾಲ್ಕು ತಿಂಗಳುಗಳ ಕಾಲ ಈ ಸೋಂಕು ವ್ಯಾಪಿಸುವ ಮಾಹಿತಿಯಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಾಗ ಯಾವುದೇ ಉಡಾಫೆ ತೋರದೆ ತಕ್ಷಣ ಕೋವಿಡ್‌ ಟೆಸ್ಟ್ಗೆ ಒಳಪಡಬೇಕು. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ  ವಹಿಸಬಾರದು. ಆದಷ್ಟೂಅನಗತ್ಯ ಓಡಾಟ ಕಡಿಮೆ ಮಾಡಿಕೊಂಡು, ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಜಾಗ್ರತರಾಗಿರಬೇಕು.

ತಾಲೂಕಿನ ಜನತೆಯ ಜೊತೆ ಸದಾ ನಾನಿರುತ್ತೇನೆ ಎಂದು ಅಭಯ ನೀಡಿದರು.


ಹೆಚ್‌ಡಿಕೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡುವ ವಿಚಾರ ತಿಳಿದ ಹಲವು ಮುಖಂಡರು ಹಾಗೂ ನಗರಸಭೆ ನೂತನ ಸದಸ್ಯರು ಲಾಕ್‌ಡೌನ್ ನಡುವೆಯೂ ಆಸ್ಪತ್ರೆಯ ಮುಂದೆ ಜಮಾಯಿಸಿದ್ದು ಕಂಡುಬಂತು. ಈ ಮಧ್ಯೆ ಮಹಿಳೆಯೊಬ್ಬರು ಎಚ್‌ಡಿಕೆ ಭೇಟಿಗಾಗಿ ಹಲವು ಗಂಟೆಗಳಿಂದ ಕಾಯ್ದು, ಹೆಚ್‌ಡಿಕೆ ಭೇಟಿಯಾದ ಮೇಲೆ ನನಗೆ ಯಾವುದೇ ಸಮಸ್ಯೆಇಲ್ಲ ನಿಮ್ಮನ್ನು ಹತ್ತಿರದಿಂದ ನೋಡುವ ಸಲುವಾಗಿ ಬಂದೆ ಎನ್ನುವ ಮೂಲಕ ಕೋವಿಡ್ ಆತಂಕದ ನಡುವೆಯೂ ಅಭಿಮಾನ ಮೆರೆದಿದ್ದು ವಿಶೇಷವಾಗಿತ್ತು.


ಕೊರೊನಾ ಆತಂಕದ ನಡುವೆಯೂ ಕಾರ್ಯಕರ್ತರು ಮತ್ತು ಕೆಲ ನೂತನ ನಗರಸಭೆಯ ಸದಸ್ಯರು ಕೋವಿಡ್ ನಿಯಮ ಉಲ್ಲಂಘಿಸಿ ನೆರೆದಿದ್ದರು. ಕುಮಾರಸ್ವಾಮಿ ಯವರಾಗಲಿ, ಅಧಿಕಾರಿಗಳಾಗಲಿ ನಮಗೂ ಇದಕ್ಕೂ ಸಂಬಂಧವಿಲ್ಲವೇನೋ ಎಂಬಂತಿದ್ದು, ಕೊರೊನಾ ಸೋಂಕು ಹೆಚ್ಚಾಗಲೂ ಇವರೂ ಕಾರಣ ಎಂಬುದರಲ್ಲಿ ಸತ್ಯಾಂಶವಿದೆ.


ಸಂದರ್ಭದಲ್ಲಿ ರಾಮನಗರ ಉಪವಿಭಾಗಧಿಕಾರಿ ಮಂಜುನಾಥ್, ಡಿಎಚ್‌ಒ ಡಾ.ನಿರಂಜನ್, ತಹಸೀಲ್ದಾರ್ ಎಲ್. ನಾಗೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ.ರಾಜು, ತಾಪಂ ಇಒ ಚಂದ್ರು, ನಗರಸಭೆ ಪೌರಾಯುಕ್ತ ಶಿವನಂಕರಿಗೌಡ, ಆಸ್ಪತ್ರೆಯ ಅಧೀಕ್ಷಕ ಡಾ.ವಿಜಯನರಸಿಂಹ, ನಗರಠಾಣೆ ಪಿಎಸ್‌ಐ ರವೀಂದ್ರ, ಸಂಚಾರಿ ಪಿಎಸ್‌ಐ ಬಿ.ಕೆ.ಪ್ರಕಾಶ್ ಮತ್ತು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಜಯಮುತ್ತು ಸೇರಿದಂತೆ ಹಲವರು ಈ ವೇಳೆ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑