ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ ಆಕ್ಸಿಜನ್ ಸಿಲಿಂಡರ್ ಹೊತ್ತೊಯ್ದ ಆರೋಪಿಗಳು. ಪ್ರಕರಣ ದಾಖಲು. ಡಾ ವಿಜಯನರಸಿಂಹ ಪಾತ್ರ ಏನು ?
ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ನೆನ್ನೆ ರಾತ್ರಿ ಸೈಯದ್ ನವಾಜ್, ಮುದಾಸಿರ್ ಮತ್ತು 15 ರಿಂದ 20 ಮಂದಿ ಆಸ್ಪತ್ರೆಯ ಒಳಗೆ ನುಗ್ಗಿ, ಸಿಬ್ಬಂದಿಗಳ ಜೊತೆ ಜಗಳ ಮಾಡಿ ಆಕ್ಸಿಜನ್ ಸಿಲಿಂಡರ್ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ರಾಜಾರೋಷವಾಗಿ ತೆಗೆದುಕೊಂಡು ಹೋಗಿರುವುದಾಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿಜಯನರಸಿಂಹ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೆನ್ನೆ ರಾತ್ರಿಯೇ ಎಫ್ಐಆರ್ ದಾಖಲಿಸಿ ಕೊಂಡಿರುವ ನಗರಠಾಣೆಯ ಸಬ್ಇನ್ಸ್ಪೆಕ್ಟರ್ ರವೀಂದ್ರ ಅವರು, ತನಿಖೆ ಕೈಗೊಂಡಿದ್ದಾರೆ.
ಹಿನ್ನೆಲೆ: ಈ ಹಿಂದೆ ಇದೇ ವಿಜಯ ನರಸಿಂಹ ಅವರು ಸರ್ಕಾರ ನೀಡಿರುವ ಆಕ್ಸಿಜನ್ ಸಿಲಿಂಡರ್ಗ ಳನ್ನು ಈ ವ್ಯಕ್ತಿಗಳಿಗೆ ನೀಡಿದ್ದರು ಎಂಬುದಾಗಿ ಬಲ್ಲ ಮೂಲಗಳು ತಿಳಿಸಿವೆ. ಇದನ್ನೇ ಆಧಾರವಾಗಿಟ್ಟು ಕೊಂಡ ಈ ವ್ಯಕ್ತಿಗಳು ನೆನ್ನೆ ರಾತ್ರಿಯೂ ಸಹ ನಮ್ಮ ಮನೆಯಲ್ಲಿ ಕೋವಿಡ್ ಸೋಂಕಿತರು ಇದ್ದು, ನಮಗೆ ಸಿಲಿಂಡರ್ ಕೊಡಿ ಎಂದು ಕೇಳಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಇದಕ್ಕೆ ಒಪ್ಪದ ಕಾರಣ, ಏಕಾ ಏಕಿ ಒಳನುಗ್ಗಿ, ಡಿ ಗ್ರೂಪ್ ಸಿಬ್ಬಂದಿ ಗಳನ್ನು ಥಳಿಸಿ, ಕರ್ತವ್ಯ ನಿರತರಾಗಿದ್ದ ಶುಶ್ರೂಷಕಿ ದಾಕ್ಷಾಯಿಣಿ ಅವರನ್ನು ತಳ್ಳಿ, ರೋಗಿಗಳಿಗೆ ನೀವು ಸರಿಯಾಗಿ ಆಕ್ಸಿಜನ್ ನೀಡುತ್ತಿಲ್ಲ ಎಂದು ದೂರಿದ್ದಾರೆ.
ತದನಂತರ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸಲಿಟ್ಟಿದ್ದ ಒಂದು ಫಲ್ಸ್ ಆಕ್ಸಿಮೀಟರ್ ಅನ್ನು ಒಡೆದು ಹಾಕಿ, ಒಂದು ಆಕ್ಸಿಜನ್ ಕಾನ್ಸಂಟ್ರೇಟರ್, ನಾಲ್ಕು ಆಕ್ಸಿಜನ್ ಸಿಲಿಂಡರ್ಗಳು, 10 ಆಕ್ಸಿಜನ್ ಪ್ಲೋ ಮೀಟರ್, ಒಂದು ಸ್ಪಾನರ್, ಒಂದು ಜಂಕ್ಷನ್ ಬಾಕ್ಸ್ ಅನ್ನು ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಿರುವುದಾಗಿ ಕೋವಿಡ್ ಕರ್ತವ್ಯ ನಿರತ ವೈದ್ಯರಾದ ಗಿರೀಶ್ ಕುಮಾರ್ ಅವರು ಹಾಗೂ ಶುಶ್ರೂಷಕಿ ದಾಕ್ಷಾಯಿಣಿ, ಬೋಸ್ ಮತ್ತು ರಮೇಶ್ ರವರು ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ದೂರು ದಾಖಿಲಿಸಿಕೊಂಡಿರುವ ಪೊಲೀಸರು, ಮೂರು ಜನ ಆರೋಪಿಗಳನ್ನು ಬಂಧಿಸಿದ್ದು, ಇಂದು ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಕೋವಿಡ್ ಪರೀಕ್ಷೆ ನಡೆಸಿ ಕರೆದೊಯ್ದರು.
*ಡಾ ವಿಜಯನರಸಿಂಹ ರ ಪಾತ್ರವೇನು ?*
ಡಾ ವಿಜಯನರಸಿಂಹ ರವರು ಈ ಮೊದಲು ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸರಾಗಿದ್ದವರು. ಕೆಲವು ಲೋಪದೋಷಗಳಿಂದ ಅವರು ಹಿಂಬಡ್ತಿ ಪಡೆದು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಆಡಳಿತಾಧಿಕಾರಿಯಾಗಿ ಬಂದಿದ್ದಾರೆ. ಈ ಸಿಲಿಂಡರ್ ಆರೋಪವು ಸಹ ಅವರ ಕಡೆಗೆ ಬೊಟ್ಟು ಮಾಡುತ್ತಿರುವುದು ವಿಜಯನರಸಿಂಹ ರವರೇ ತಪ್ಪಿತಸ್ಥರೆಂದು ಬಲ್ಲ ಮೂಲಗಳು ತಿಳಿಸುತ್ತಿವೆ.
*ಹಲವು ಮಾಹಿತಿಗಳ ಪ್ರಕಾರ ಈ ಪ್ರಕರಣ ಟ್ವಿಸ್ಟ್ ಪಡೆದುಕೊಳ್ಳುವುದೇ ಡಾ ವಿಜಯನರಸಿಂಹ ರವರಿಂದ. ಕಳೆದ ಮೂರ್ನಾಲ್ಕು ದಿನಗಳಿಂದ ಅವರಿಗೆ ಆಕ್ಸಿಜನ್ ಸಿಲಿಂಡರ್ ನೀಡುತ್ತಿದ್ದು, ನಿನ್ನೆ ರಾತ್ರಿಯೂ ಕೇಳಿದ್ದಾರೆ. ಡಾ ವಿಜಯನರಸಿಂಹ ಇಲ್ಲದ್ದರಿಂದ ಡ್ಯೂಟಿಯಲ್ಲಿದ್ದವರು ನೀಡಿಲ್ಲ. ವಿಜಯನರಸಿಂಹ ರವರಿಗೆ ಕರೆ ಮಾಡಿದ ಆರೋಪಿಗಳಿಗೆ ಬರಹೇಳಿದ ಅವರು ಸಿಲಿಂಡರ್ ರೂಂ ನ ಕೀ ನೀಡಿ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಡ್ಯೂಟಿಯಲದಲಿದ್ದ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಗಳು ತಡೆ ಹಿಡಿದಿದ್ದಾರೆ. ಪೋಲೀಸರಿಗೆ ದೂರು ನೀಡುವುದಾಗಿ ತಿಳಿದ ನಂತರ ವಿಜಯನರಸಿಂಹ ರವರೇ ಆಗಮಿಸಿ ತಿಳಿಮಾಡಲು ಹೊರಟಿದ್ದು, ಆಗದ ಕಾರಣ ನಗರ ಪೋಲೀಸ್ ಠಾಣೆಗೆ ದೂರು ನೀಡಿರುವುದಾಗಿ ಅಧಿಕೃತ ಬಲ್ಲ ಮೂಲಗಳು ತಿಳಿಸಿವೆ.*
*ಆಸ್ಪತ್ರೆಯ ಸಿಸಿ ಟಿವಿ ಫೂಟೇಜ್ ಮತ್ತು ಡಾ ವಿಜಯನರಸಿಂಹ ಹಾಗೂ ಆರೋಪಿಗಳ ಪೋನ್ ಟ್ಯಾಪ್ ಮಾಡಿದರೆ ಸಂಪೂರ್ಣ ಮಾಹಿತಿ ದೊರೆಯುತ್ತದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು