Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಲಸಿಕೆ ವಿಚಾರದಲ್ಲಿ ವಿರೋಧ ಪಕ್ಷಗಳಿಗೆ ಛೀಮಾರಿ ಹಾಕುತ್ತೇನೆ ಎಂದ ಸಚಿವ ಸಿ ಪಿ ಯೋಗೇಶ್ವರ್

Posted date: 11 May, 2021

Powered by:     Yellow and Red

ಕೊರೊನಾ ಲಸಿಕೆ ವಿಚಾರದಲ್ಲಿ ವಿರೋಧ ಪಕ್ಷಗಳಿಗೆ ಛೀಮಾರಿ ಹಾಕುತ್ತೇನೆ ಎಂದ ಸಚಿವ ಸಿ ಪಿ ಯೋಗೇಶ್ವರ್

ವ್ಯಾಕ್ಸಿನೇಷನ್‌ ಬಗ್ಗೆ ಅಪಪ್ರಚಾರ ಮಾಡಿದ ವಿರೋಧ ಪಕ್ಷಗಳಿಗೆ ನಾನು ಛೀಮಾರಿ ಹಾಕುತ್ತೇನೆ. ಅವರೇ ಜನರನ್ನು ದಿಕ್ಕು ತಪ್ಪಿಸಿದ್ದು ಎಂದು ಸಿ ಪಿ ಯೋಗೇಶ್ವರ್ ವಿರೋಧ ಪಕ್ಷದವರ ವಿರುದ್ಧ ಹರಿಹಾಯ್ದರು. ಅವರು ಇಂದು ಚನ್ನಪಟ್ಟಣ ನಗರದ ಎಲ್ ಎನ್ ಕಲ್ಯಾಣ ಮಂಟಪದಲ್ಲಿ *ಸಂಕಷ್ಟ ಸಮಯ, ಬಿಜೆಪಿ ಸಹಾಯ* ಎಂಬ ಧ್ಯೇಯೋದ್ದೇಶದೊಂದಿಗೆ ನಗರದ ನಿರಾಶ್ರಿತರಿಗೆ, ಭಿಕ್ಷುಕರಿಗೆ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ವ್ಯಾಕ್ಸಿನೇಷನ್‌ ಬಗ್ಗೆ ವಿರೋಧ ಪಕ್ಷದವರು ತಪ್ಪು ಮಾಹಿತಿ ನೀಡಿದ್ದರಿಂದ‌ ಮೊದಲಿಗೆ ಸಾರ್ವಜನಿಕರು ವ್ಯಾಕ್ಸಿನೇಷನ್‌ ಹಾಕಿಸಿಕೊಳ್ಳಲು ಮುಂದಾಗಲಿಲ್ಲ. ಆದರೆ ಈಗ ಜನತೆಗೆ ಅರಿವಾಗಿದೆ. ಈಗ ಮುಗಿಬಿದ್ದು ವ್ಯಾಕ್ಸಿನೇಷನ್‌ ಪಡೆದುಕೊಳ್ಳುತ್ತಿದ್ದಾರೆ. ವ್ಯಾಕ್ಸಿನೇಷನ್‌ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಜರಿದರು. ಪ್ರಧಾನ ಮಂತ್ರಿಯವರನ್ನು ಹೀಯಾಳಿಸಿದರು. ಈಗ ಅದೇ ಮಂದಿ ಲಸಿಕೆಗಾಗಿ ಹಾತೊರೆಯುತ್ತಿದ್ದಾರೆ ಎಂದು ಟೀಕಿಸಿದರು.


ವಿಶ್ವದಾದ್ಯಂತ ಕೊರೊನಾ ಹರಡಿದೆ. ನಮ್ಮ ದೇಶದಲ್ಲಿಯೂ ಕೊರೊನಾ ಹೆಚ್ಚಾಗಿದೆ. ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಶತಾಯಗತಾಯ ಹೋರಾಡುತ್ತಿವೆ.


ಮೊದಲ ಅಲೆಯಲ್ಲಿ ಕೊರೊನಾ ರೋಗವನ್ನು ಸಾರ್ವಜನಿಕರು ಕಡೆಗಣಿಸಿದರು. ಎರಡನೇ ಅಲೆ ರೂಪಾಂತರ ಗೊಂಡು ಆಕ್ಸಿಜನ್ ಕೊರತೆ ಎದುರಿಸುವುದಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸಾವನ್ನು ತಡೆಗಟ್ಟಲು ಸರ್ಕಾರ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ. ಚನ್ನಪಟ್ಟಣ ತಾಲ್ಲೂಕಿನಲ್ಲೂ ಸಹ ಕೊರೊನಾ ತಾಂಡವಾಡುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದರು.


ಚನ್ನಪಟ್ಟಣದಲ್ಲಿ ವಿಶೇಷವಾಗಿ ನಿರಾಶ್ರಿತರು ಮತ್ತು ವಲಸಿಗರು ಇದ್ದಾರೆ. ಅನ್ನ ನೀರು ಇಲ್ಲದೆ ಯಾರೂ ಸಾವನ್ನಪ್ಪಬಾರದು. ಅವರಿಗೆಲ್ಲಾ ಮೊದಲಿಗೆ ಅನ್ನಾಹಾರ ನೀಡಬೇಕು ಎಂಬ ಅಭಿಲಾಷೆಯಿಂದ ನಮ್ಮ ಬಿಜೆಪಿ ಪಕ್ಷದ ವತಿಯಿಂದ ಇಂದು ಆಹಾರವನ್ನು ವಿತರಿಸಲು ಚಾಲನೆ ನೀಡಿದ್ದೇವೆ. ಇದು ಲಾಕ್ಡೌನ್ ಮುಗಿಯುವವರೆಗೂ ಮುಂದುವರೆಯುತ್ತದೆ.


ಅನ್ನಾಹಾರದ ಜೊತೆಗೆ ತಾಲ್ಲೂಕಿನಾದ್ಯಂತ ಮಾಸ್ಕ್, ಸ್ಯಾನಿಟೈಸರ್ ಹಾಗೂ ರೋಗ ನಿವಾರಕ ಔಷಧಗಳನ್ನು ನೀಡುತ್ತೇವೆ. ಲಾಕ್ಡೌನ್ ಮುಂದುವರೆದರೆ ತಾಲ್ಲೂಕಿನ ಜನತೆಗೆ ಆಹಾರ ಕಿಟ್ ನೀಡಲು ಉದ್ದೇಶಿಸಿದ್ದೇವೆ ಎಂದರು. ತಾಲ್ಲೂಕಿನ ಎಲ್ಲರಿಗೂ ಭೇದಭಾವ ಮಾಡದೆ ವಿವರಿಸುವಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದೇನೆ  ತಿಳಿಸಿದರು.


ಮೊದಲು ಕಾಲರಾ, ಪ್ಲೇಗ್, ಸಿಡುಬಿನಂತಹ ಕಾಯಿಲೆಗಳು ಬರುತ್ತಿದ್ದವು. ಆಗೆಲ್ಲಾ ಜನರೇ ಹೊಲಗದ್ದೆಗಳ ಬಳಿ ಬಿಡಾರ ಹೂಡಿ ಬೇರೆಯವರಿಗೆ ರೋಗ ಹರಡದಂತೆ ಎಚ್ಚರವಹಿಸುತ್ತಿದ್ದರು. ಪೋಲೀಸರು ಅವರ ಕೆಲಸ ಮಾಡುತ್ತಾರೆ. ಗೃಹ ಮಂತ್ರಿಗಳು ಸಹ ಲಾಠಿ ಬೀಸದಂತೆ ಸೂಚಿಸಿದ್ದಾರೆ. ಜನರೇ ಸ್ವಯಂ ಲಾಕ್ಡೌನ್ ಗೆ ಒಳಗಾಗುವುದು ಉತ್ತಮ ಎಂದು ಸಲಹೆ ನೀಡಿದರು.


ಪತ್ರಕರ್ತರು ಬೆಡ್ ದಂಧೆ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಅವರು ಯಾವುದೇ ಕಾಂಟ್ರವರ್ಷಿ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ. ಕೋವಿಡ್ ಒಂದು ಹಂತಕ್ಕೆ ಬಂದ ನಂತರ ಅದಕ್ಕೆ ಸಂಬಂಧಿಸಿದಂತೆ ಉತ್ತರಿಸುತ್ತೇನೆ ಎಂದರು. ಕುಮಾರಸ್ವಾಮಿ ಯವರು ಅಂಬೇಡ್ಕರ್ ಭವನದಲ್ಲಿ ಬೆಡ್ ಹಾಕಿಸಲು ಹೇಳಿದ್ದಾರೆ ಎಂಬ ಪ್ರಶ್ನೆಗೆ ಯಾರೋ ಹೇಳಿದರು ಎಂದಾಕ್ಷಣ ಆ ಕೆಲಸ ಮಾಡಲಾಗುವುದಿಲ್ಲ. ಹಾಸಿಗೆ ಆಕ್ಸಿಜನ್ ಕೊಟ್ಟರಷ್ಟೇ ಕೊರೊನಾ ಹೋಗುವುದಿಲ್ಲ. ತಕ್ಕಂತೆ ಸಿಬ್ಬಂದಿಗಳು ಬೇಕು. ಅದನ್ನು ಸರ್ಕಾರ ತೀರ್ಮಾನಿಸುತ್ತದೆ. ನಾ ಹೇಳಿದ ರೀತಿ ಲಾಕ್ಡೌನ್ ಮಾಡಿಲ್ಲಾ ಅಂತ ಹೇಳ್ತಾರೆ ಯಾರೋ ಹೇಳಿದರು ಎಂದು ಸರ್ಕಾರ ನಡೆಸಲು ಆಗದು ಉತ್ತರಿಸುವ ಮೂಲಕ ಕುಮಾರಸ್ವಾಮಿಗೆ ಟಾಂಗ್ ನೀಡಿದರು.


ತಾಲ್ಲೂಕಿನಲ್ಲಿ 800 ಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿತರಿದ್ದಾರೆ ಎಂಬ ಪ್ರಶ್ನೆಗೆ ಎಲ್ಲರನ್ನೂ ಆಸ್ಪತ್ರೆಯಲ್ಲೇ ಇರಿಸಿಕೊಳ್ಳುತ್ತಿಲ್ಲ. ರೋಗನಿರೋಧಕ ಶಕ್ತಿ ಇರುವವರಿಗೆ ಹಾಗೂ ಐಸೋಲೇಷನ್ ವ್ಯವಸ್ಥೆ ಇರುವವರಿಗೆ ಮನೆಯಲ್ಲೇ ಇರಲು ಸೂಚಿಸಲಾಗಿದೆ ಎಂದರು. ಸಾರ್ವಜನಿಕರು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಹೊರಗಡೆ ಬರಬಾರದು. ಪೋಲೀಸರು ಸಹ ಮಾನವೀಯತೆ ಉಳ್ಳವರೇ ಆಗಿದ್ದಾರೆ. ರೋಗ ತಡೆಗಟ್ಟಲು ನಿಮ್ಮೆಲ್ಲರ ಸಹಾಯ ಅತ್ಯಗತ್ಯವಾಗಿದೆ ಎಂದು ತಾಲ್ಲೂಕಿನ ಜನರಿಗೆ ಕಿವಿಮಾತು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಉಪಾಧ್ಯಕ್ಷ ರವೀಶ್ ಎಲೆಕೇರಿ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಎನ್ ಮಲವೇಗೌಡ, ತಾಲ್ಲೂಕು ಅಧ್ಯಕ್ಷ ಕೆ ಟಿ ಜಯರಾಮು, ನಗರ ಘಟಕದ ಅಧ್ಯಕ್ಷ ಶಿವಕುಮಾರ್ ಮತ್ತು ಅನ್ನದಾಸೋಹದ ಕಾರ್ಯಕರ್ತರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑