ಜಿಲ್ಲೆಯ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲೊಂದು ಒಳ್ಳೆಯ ಜಾಗ. ಪಾಳುಬಿದ್ದ ಮನೆಗಳಿಗೆ ಹೊಸರೂಪ ನೀಡಿ ಹಂಚಲು ಸಕಾಲ
ಕೊಳಚೆ ನಿರ್ಮೂಲನಾ ಮಂಡಳಿ ಇಲಾಖೆ ವತಿಯಿಂದ ರಾಮನಗರ ತಾಲ್ಲೂಕಿನ ಚನ್ನಪಟ್ಟಣ ಕೆಂಗಲ್ ದೇವಾಲಯದ ಕೂಗಳತೆ ದೂರಿನ ಜಯಪುರ ಗ್ರಾಮದ ಬಳಿ ಸುಸಜ್ಜಿತ ಎರಡು ಅಂತಸ್ತಿನ, ನಾಲ್ಕು ಸಂಸಾರಗಳು ವಾಸಿಸುವ, ಸರಿಸುಮಾರು ನೂರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಹತ್ತಿರಹತ್ತಿರ ದಶಕಗಳೇ ಕಳೆಯುತ್ತಿವೆ. ಈ ಎಲ್ಲಾ ಮನೆಗಳ ಸುತ್ತಾ ಗಿಡಗಂಟಿಗಳು ಬೆಳೆದುನಿಂತಿದ್ದು, ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಜಿಲ್ಲಾದ್ಯಂತ ಕೊರೊನಾ ಸೋಂಕಿತರು ಹೆಚ್ಚಾಗಿದ್ದು, ಅವರಿಗೆ ಚಿಕಿತ್ಸೆ ನೀಡಲು ಈ ಮನೆಗಳನ್ನು ಉಪಯೋಗಿಸಿಕೊಂಡರೆ ಎರಡು ಲಾಭಗಳನ್ನು ಪಡೆಯಬಹುದಾಗಿದೆ.
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕೋವಿಡ್ ರೋಗಿಗಳಿದ್ದು, ಸೂಕ್ತ ಚಿಕಿತ್ಸೆ ಸಿಗದೆ ನೂರಾರು ಸಂಖ್ಯೆಯಲ್ಲಿ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಸದ್ಯ ಇಲ್ಲಿರುವ ಎಲ್ಲಾ ಮನೆಗಳಿಗೂ ವಿದ್ಯುತ್ ಮತ್ತು ನೀರಿನ ಸೌಕರ್ಯಳಿದ್ದು, ಅಲ್ಲಲ್ಲೇ ಟ್ರಾನ್ಸ್ ಫಾರ್ಮರ್ ಗಳು, ಬೋರ್ ವೆಲ್ ಗಳು, ನೀರಿನ ತೊಟ್ಟಿಗಳು ಮತ್ತು ತೊಂಬೆಗಳೂ ಇವೆ. ಕಿಟಕಿ ಮತ್ತು ಬಾಗಿಲುಗಳನ್ನು ಹಾಕಿಸಿ, ಸ್ವಚ್ಚಗೊಳಿಸಿದರೆ ಸಂಪೂರ್ಣವಾಗಿ ವಾಸಕ್ಕೆ ಯೋಗ್ಯವಾಗುತ್ತವೆ. ಮನೆಗಳನ್ನು ಸುಸ್ಥಿತಿಗೆ ತರಲು ಕೊಳಚೆ ನಿರ್ಮೂಲನಾ ಮಂಡಳಿ ಪ್ರಯತ್ನ ಮಾಡಿದರೆ, ಯಾವುದೋ ಭವನಕ್ಕೋ, ಕಲ್ಯಾಣ ಮಂಟಪಕ್ಕೋ ಬೆಡ್,ಆಕ್ಸಿಜನ್ ಜೋಡಿಸುವ ಬದಲು ಇಲ್ಲೇ ಜೋಡಿಸಬಹುದು.
ಈ ಮನೆಗಳ ಬಳಿ ಒಂದು ವಾಸದ ಮನೆ ಹೊರತುಪಡಿಸಿದರೆ ಕಿಲೋಮೀಟರ್ ಯಾವುದೇ ಗ್ರಾಮಗಳಿಲ್ಲ. ಮನೆಗಳಿರುವ ಜಾಗಕ್ಕೆ ಚನ್ನಪಟ್ಟಣ, ರಾಮನಗರ ಮತ್ತು ಮಾಗಡಿ ಕಡೆಯಿಂದ ಬರಲು ಉತ್ತಮ ರಸ್ತೆಗಳಿವೆ. ಬಹಳ ಮುಖ್ಯವಾಗಿ ಅತಿ ಹೆಚ್ಚು 'ಸಹಜ' ಆಕ್ಸಿಜನ್ ಸಿಗುವ ವಾತಾವರಣವಿರುವಿದ್ದು, ಸಂಪರ್ಕ ಕಡಿಮೆ ಇರುವುದರಿಂದ, ಮಾನಸಿಕವಾಗಿ ಮತ್ತು ದೈಹಿಕವಾಗಿ ರೋಗಿ ಗುಣಮುಖನಾಗಲು ಅನುಕೂಲವಾಗುವುದರಲ್ಲಿ ಅನುಮಾನವೇ ಇಲ್ಲ. ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಮ್ಮೆ ಭೇಟಿ ಕೊಟ್ಟು ಅವಲೋಕಿಸದರೆ ಎರಡು ಕೆಲಸಗಳು ಸುಲಭವಾಗಿ ಆಗುವುದರಲ್ಲಿ ಅನುಮಾನವೇ ಇಲ್ಲ.
ಇತ್ತೀಚೆಗೆ ಬೆಂಗಳೂರಿನಿಂದ ಎರಡು ಕಾರಿನಲ್ಲಿ ಆರು ಮಂದಿ (ಮೂರು ಹುಡುಗರು ಮತ್ತು ಮೂರು ಹುಡುಗಿಯರು) ಪೋಟೋ ಶೂಟ್ ನೆಪದಲ್ಲಿ ಬಂದು ಅನೈತಿಕ ಚಟುವಟಿಕೆ ನಡೆಸುವಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದು, ಏಟು ತಿಂದಿದ್ದರು. ತದನಂತರ ರಾಮನಗರ ಗ್ರಾಮಾಂತರ ಪೋಲೀಸರು ಬಂದು ಕರೆದೊಯ್ದರಾದರೂ ಯಾವುದೇ ದೂರು ದಾಖಲಿಸದೆ ಬಿಟ್ಟು ಕಳುಹಿಸಿದ್ದಾಗಿ ತಿಳಿದುಬಂತು. ಇದಕ್ಕಿಂತಲೂ ಘೋರ ಅಪರಾಧಗಳು ನಡೆಯುವ ಮುನ್ನಾ ಎಚ್ಚೆತ್ತುಕೊಂಡರೆ ಒಳ್ಳೆಯದು.
ಈಗಾಗಲೇ ಮನೆಗಳನ್ನು ನಿರ್ಮಿಸಿ ದಶಕ ಕಳೆಯುತ್ತಿರುವುದರಿಂದ, ಈ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ಅಥವಾ ಈಗಾಗಲೇ ನೀಡಿದರೇ ಅವರು ವಾಸಿಸಲು ಅನುಕೂಲ ಕಲ್ಪಿಸಿಕೊಟ್ಟಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ, ತೀರ್ಮಾನ ತೆಗೆದುಕೊಳ್ಳುವ ಮೂಲಕ ಇಲ್ಲಿ ನಡೆಯುವ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳನ್ನು ತಡೆಯುವುದರ ಜೊತೆಗೆ, ಅದಕ್ಕೆ ದಾಸರಾಗುವವರು ಹಾಗೂ ತೊಡಗಿಸಿಕೊಳ್ಳುವವರನ್ನು ತಡೆಗಟ್ಟಂತಾಗುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು