ಲಾಕ್ಡೌನ್ ಬಿಗಿಗೊಳಿಸಲು ರಸ್ತೆಗಿಳಿದ ಪೋಲೀಸರು. ಸಕಾರಣವಿಲ್ಲದೆ ತಿರುಗಾಡುವ ಕೆಲವರು
ತಾಲ್ಲೂಕಿನ ಗಡಿಭಾಗಗಳಲ್ಲದೆ ನಗರದಾದ್ಯಂತ ಆಯಕಟ್ಟಿನ ಜಾಗಗಳಲ್ಲಿ ಪೋಲೀಸರು ನಿಂತು ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಲಾಕ್ಡೌನ್ ನನ್ನು ಬಿಗಿಗೊಳಿಸುತ್ತಿದ್ದಾರೆ.
ಮದ್ದೂರು-ಚನ್ನಪಟ್ಟಣ ಮತ್ತು ಚನ್ನಪಟ್ಟಣ-ರಾಮನಗರ ತಾಲ್ಲೂಕಿನ ಹೆದ್ದಾರಿಯ ಗಡಿ ಭಾಗಗಳಾದ ಕೋಲೂರು ಗ್ರಾಮದ ಗೇಟ್ ಮತ್ತು ಕೆಂಗಲ್ ದೇವಾಲಯದ ಬಳಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಇದರ ಜೊತೆಗೆ ನಗರದ ನ್ಯಾಯಾಲಯದ ಬಳಿ ಹಾಗೂ ಹನುಮಂತನಗರದ ಬಳಿ ಮತ್ತೊಂದು ಚೆಕ್ ಪೋಸ್ಟ್ ನಿರ್ಮಿಸಿಕೊಂಡು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ನಗರದ ಆಯಕಟ್ಟಿನ ಜಾಗಗಳಾದ ಸಾತನೂರು ರಸ್ತೆಯ ಮಹದೇಶ್ವರ ನಗರ, ಸಾತನೂರು ಸರ್ಕಲ್, ಬಸ್ ನಿಲ್ದಾಣ, ಜೆ ಸಿ ರಸ್ತೆಯ ಇಂದಿರಾ ಕ್ಯಾಂಟೀನ್, ಎಂ ಜಿ ರಸ್ತೆಯ ಸಾರ್ವಜನಿಕ ಆಸ್ಪತ್ರೆ, ಷೇರು ಹೋಟೆಲ್ ಮತ್ತು ನಗರ ಮತ್ತು ಸಂಚಾರಿ ಪೋಲೀಸ್ ಠಾಣೆ ಸೇರಿದಂತೆ ವಿವಿಧ ಭಾಗಗಳಲ್ಲಿ ಪೋಲೀಸರು ನಿಂತು ವಾಹನಗಳ ತಪಾಸಣೆಯನ್ನು ಮಾಡುತ್ತಿದ್ದಾರೆ.
ಇದಲ್ಲದೆ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸರು, ಸಂಚಾರಿ ಪೋಲೀಸರು, ಅಕ್ಕೂರು ಪೋಲೀಸರು ಮತ್ತು ಎಂ ಕೆ ದೊಡ್ಡಿ ಪೋಲೀಸರು ಸಹ ಆಯಾ ಪೋಲೀಸ್ ಠಾಣೆಯ ಗಡಿಭಾಗಗಳಲ್ಲಿ ಮತ್ತು ಗ್ರಾಮಗಳಲ್ಲಿ ಅಂಗಡಿಮುಂಗಟ್ಟುಗಳನ್ನು ಹತ್ತು ಗಂಟೆಯ ನಂತರ ಮುಚ್ವಿಸುವುದು, ಗುಂಪುಗೂಡಿರುವವರನ್ನು ಚದುರಿಸುವುದು ಸೇರಿದಂತೆ ಅವರು ಸಹ ಲಾಕ್ಡೌನ್ ಯಶಸ್ವಿಯಾಗಿಸಿ, ಕೊರೊನಾ ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ.
ಅನಗತ್ಯ ಓಡಾಟ, ಗುಂಪುಗುಂಪಾಗಿ ಓಡಾಟ, ಒಂದೇ ವಾಹನದಲ್ಲಿ ಹೆಚ್ಚು ಮಂದಿ ತುಂಬಿರುವುದು ಮತ್ತು ಮಾಸ್ಕ್ ಧರಿಸದೇ, ಧರಿಸಿಯೂ ಮೂಗಿನ ಕೆಳಗೆ ಧರಿಸುವವರನ್ನೇ ಟಾರ್ಗೆಟ್ ಮಾಡಿ ದಂಡ ವಿಧಿಸಲಾಗುತ್ತಿದೆ. ಇನ್ನುಳಿದಂತೆ ದ್ವಿಚಕ್ರ ವಾಹನಗಳ ಸವಾರರ ಹೆಲ್ಮೆಟ್ ಹಾಗೂ ಎಲ್ಲಾ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ, ದಂಡ ವಿಧಿಸುತ್ತಿದ್ದು, ಕೆಲ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ.
ಕೆಲ ಸಾರ್ವಜನಿಕರು ಸಹ ನಗರದಲ್ಲಿ ಸುತ್ತಾಡುವುದನ್ಬು ಫ್ಯಾಷನ್ ಮಾಡಿಕೊಂಡಂತಿದೆ. ನನಗೆ ಎಲ್ಲವೂ ಗೊತ್ತು, ಎಲ್ಲರೂ ಗೊತ್ತು ಎಂಬ ಉಡಾಫೆಯಿಂದ ಓಡಾಡುವವರು ಒಂದೆಡೆಯಾದರೆ, ಅರ್ಧ ಲೀಟರ್ ಹಾಲು, ಒಂದು ಕಿಲೋ ತರಕಾರಿ, ವೈದ್ಯರ ಹಳೆಯ ಚೀಟಿ ಹಿಡಿದು ನಗರ ಸುತ್ತಿ ನಾನು ಗ್ರೇಟ್ ಎಂದು ಸ್ವಯಂ ಬೆನ್ನು ತಟ್ಟಿಕೊಳ್ಳುವವರು ಕೆಲವರಿದ್ದಾರೆ.
ಇಂತಹ ಹುಚ್ಚಾಟಗಳನ್ನು ಸಾರ್ವಜನಿಕರು ಬಿಟ್ಟು, ಅಗತ್ಯವಿದ್ದರೆ ಮಾತ್ರ ಬಂದುಹೋಗುವ ಪರಿಪಾಠ ಬೆಳೆಸಿಕೊಂಡರೆ ಮಾತ್ರ ಲಾಕ್ಡೌನ್ ಯಶಸ್ವಿಯಾಗುವುದರ ಜೊತೆಗೆ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಿ, ತಮ್ಮ ಮತ್ತು ತಮ್ಮನ್ನು ನಂಬಿರುವವರನ್ನು ಉಳಿಸಿಕೊಳ್ಳುವ ಜವಾಬ್ದಾರಿಯನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು