Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ:‌ ಡಿಸಿಎಂ

Posted date: 19 May, 2021

Powered by:     Yellow and Red

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ:‌ ಡಿಸಿಎಂ

ರಾಮನಗರ: ಇಲ್ಲಿನ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದಲೇ ಈ ಬೆಡ್ ಗಳ ಬಳಕೆಯನ್ನು ಹಂತಹಂತವಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 


ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎರಡನೇ ಹಂತದಲ್ಲಿ, ಅಂದರೆ; 15 ದಿನಗಳಲ್ಲಿ ಇನ್ನು 150 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲಿಗೆ ಒಟ್ಟು 300 ಆಕ್ಸಿಜನ್‌ ಬೆಡ್‌ಗಳಾಗುತ್ತವೆ ಎಂದರು. 


ಈಗಾಗಲೇ ಜಿಲ್ಲೆಯಲ್ಲಿ ಪಾಸಿಟೀವ್‌ ಪ್ರಕರಣಗಳ ತಡೆಗೆ ಎಲ್ಲ ಕ್ರಮ ವಹಿಸಲಾಗಿದೆ. ಹಾಗೆಯೇ, ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಬಂದರೂ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆಕ್ಸಿಜನ್‌ ಬೆಡ್‌ಗಳನ್ನು ಹಾಕಲಾಗುತ್ತಿದೆ. ಜತೆಗೆ, ಕಂದಾಯ ಭವನದಲ್ಲಿ ಈಗ 35 ಆಕ್ಸಿಜನ್‌ ಬೆಡ್‌ ಇದ್ದು, ಅಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ಯಾವುದೇ ತುರ್ತು ಸಂದರ್ಭ ಎದುರಾದರೂ ಜಿಲ್ಲಾ ಕೇಂದ್ರದಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು. 


*ಹೋಮ್‌ ಐಸೋಲೇಷನ್‌ ಇಲ್ಲ*

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಇನ್ನು ಮುಂದೆ ಕೋವಿಡ್‌ ಸೋಂಕಿತರನ್ನು ಮನೆಯಲ್ಲಿ ಕ್ವಾರಂಟೈನ್‌ ಮಾಡುವುದಿಲ್ಲ. ಸೋಂಕು ಕಂಡು ಬಂದೊಡನೆ ಅವರನ್ನು ಕೋವಿಡ್‌ ಕೇರ್‌ ಕೇಂದ್ರಗಳಿಗೆ ಶಿಫ್ಟ್‌ ಮಾಡಿ ಆರೈಕೆ ಮಾಡಲಾಗುವುದು. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮೆಡಿಕಲ್‌ ಸಿಬ್ಬಂದಿ ಇರುತ್ತಾರೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. 


ಜಿಲ್ಲಾ ಕೇಂದ್ರದಲ್ಲಿ ಆಮ್ಲಜನಕದ ಕೊರತೆಯೂ ಇಲ್ಲ. ಈಗಾಗಲೇ 6.8 ಟನ್‌ ಸಾಮರ್ಥ್ಯದ ಆಕ್ಸಿಜನ್‌ ಘಟಕ ಮಂಜೂರಾಗಿದೆ. ಸದ್ಯಕ್ಕೆ 3.5 ಕೆ.ಎಲ್‌ನಷ್ಟು ಆಮ್ಲಜನಕ ಬಳಕೆಯಾಗುತ್ತಿದೆ. ಇದರ ಜತೆಗೆ, ಆಮ್ಲಜನಕ ಸಾಂದ್ರಕಗಳು, ಹೆಚ್ಚುವರಿ ಸಿಲಿಂಡರ್‌ಗಳೂ ನಮ್ಮಲ್ಲಿವೆ. ಹೀಗಾಗಿ ಎಲ್ಲೂ ಕೊರತೆ ಎಂಬುದಿಲ್ಲ ಎಂದರು.


ರಾಜ್ಯದಲ್ಲಿ ಒಟು 60,000 ಆಕ್ಸಿಜನ್‌ ಬೆಡ್‌ಗಳಿದ್ದು, ಅದರಲ್ಲಿ ಅರ್ಧದಷ್ಟು ಬೆಡ್‌ಗಳು ಬೆಂಗಳೂರು ನಗರದಲ್ಲೇ ಇವೆ. ಇನ್ನೂ ಎಲ್ಲಾ ತಾಲೂಕು, ಜಿಲ್ಲಾ ಆಸ್ಪತ್ರೆ ಸೇರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ.


ರಾಮನಗರ ಜಿಲ್ಲೆಯಲ್ಲೂ ಯಾವುದೇ ಸಮಸ್ಯೆ ಇಲ್ಲ. ಅದೇ ರೀತಿ ರೆಮಿಡಿಸಿವರ್‌ ಸೇರಿ ಯಾವ ಔಷಧದ ಕೊರತೆಯೂ ಇಲ್ಲ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.


*ಪಿಎಚ್ ಸಿಗಳಿಗೆ ಭೇಟಿ ನೀಡಿದ ಡಿಸಿಎಂ*


ರಾಮನಗರದ ಕಂದಾಯ ಭವನದಲ್ಲಿನ‌ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಡಿಸಿಎಂ ಅವರು ಅಲ್ಲಿನ‌ ಚಿಕಿತ್ಸೆ ಬಗ್ಗೆ ಸಿಬ್ಬಂದಿ ಜತೆ ಮಾತನಾಡಿದರು. ಚಿಕಿತ್ಸಾ ವ್ಯವಸ್ಥೆ, ಔಷಧಿ ಇತ್ಯಾದಿ ಬಗ್ಗೆ ಮಾಹಿತಿ ಪಡೆದರು. ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಲಭ್ಯತೆ ಬಗ್ಗೆಯೂ ಮಾಹಿತಿ ಪಡೆದರು. 


ರಾಮನಗರದ ಮೆಹಬೂಬ್ ನಗರದ ನಗರ ಪ್ರಾಥಮಿಕ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸಿದರು. 


ರಾಮನಗರ ತಾಲ್ಲೂಕಿನ ಕಣ್ವ ಪ್ರಾಥಮಿಕ ಆರೋಗ್ಯ ಹಾಗೂ ಸುಗ್ಗನಹಳ್ಳಿಯಲ್ಲಿ ಇರುವ ಆಯುಷ್ ತರಬೇತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಸುಗ್ಗನಹಳ್ಳಿಯಲ್ಲಿ ಕೋವಿಡ್ ಸೋಂಕಿತರಿದ್ದು ಅವರು ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಂದ‌ ಮಾಹಿತಿ ಪಡೆದರು. ರೋಗಿಗಳ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಜತೆಯೂ ಮಾತನಾಡಿದರು. 


ಸುಗ್ಗನಹಳ್ಳಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಜತೆಗೂ ಮಾತನಾಡಿದ ಡಿಸಿಎಂ ಅವರು ಊಟ- ಉಪಚಾರದ ಬಗ್ಗೆ ವಿಚಾರಿಸಿದರು. ಎಲ್ಲರೂ ಚೆನ್ನಾಗಿದೆ ಎಂದು‌ ಮೆಚ್ಚುಗೆ ವ್ಯಕ್ತಪಡಿಸಿದರು. 


ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್, ಸಿಇಒ ಇಕ್ರಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌, ಉಪ ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಡಿಎಚ್‌ಒ ಡಾ.ನಿರಂಜನ ಮುಂತಾದವರು ಡಿಸಿಎಂ ಜತೆಯಲ್ಲಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑