ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗೆ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ 44 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಯಾವುದೇ ತೊಂದರೆ ಇಲ್ಲ. ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳು ಲಭ್ಯವಿದ್ದು, ಕೋವ್ಯಾಕ್ಸಿನ್ ಲಸಿಕೆಯನ್ನು ಎರಡನೇ ಡೋಸ್ ಗೆ ಮಾತ್ರ ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವುದರಿಂದ ಶೇ 80 ರಷ್ಟು ಸೋಂಕು ಹರಡದಂತೆ ತಡೆಗಟ್ಟಬಹುದು. ಸಾರ್ವಜನಿಕರು ಇದನ್ನು ಕಡ್ಡಾಯವಾಗಿ ಪಾಲಿಸುವುದನ್ನು ರೂಡಿಸಿಕೊಳ್ಳಬೇಕು ಎಂದರು.
ನೆಗಡಿ, ಕೆಮ್ಮ, ಜ್ವರ ಮುಂತಾದ ಕೋವಿಡ್ ಲಕ್ಷಣ ಕಂಡು ಬಂದರೆ ತಕ್ಷಣ ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಿ. ರೋಗ ಉಲ್ಬಣಗೊಂಡ ನಂತರ ಚಿಕಿತ್ಸೆ ಅವಧಿ ಹೆಚ್ಚಾಗುತ್ತದೆ. ಆಕ್ಸಿಜನ್, ಐ.ಸಿ.ಯು ವ್ಯವಸ್ಥೆ ಬೇಕಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಸರಾಸರಿ 450 ಸೋಂಕು ಬರುತ್ತಿದೆ. ಒಂದು ವಾರದಿಂದ 3,087 ಪ್ರಕರಣಗಳು ವರದಿಯಾಗಿದ್ದು, ಶೇ 64 ಸೋಂಕಿತರಿಗೆ ಹೋಮ್ ಐಸೊಲೇಷನ್ ಹಾಗೂ ಶೇ 25 ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಸಿಟಿವಿಟಿ ರೇಟ್ ಜಿಲ್ಲೆಯಲ್ಲಿ ಶೇ 30 ಇದೆ ಎಂದರು.
ಮುಂದಿನ ದಿನಗಳಲ್ಲಿ ಹೋಮ್ ಐಸೊಲೇಷನ್ ಕಡಿಮೆ ಮಾಡಿ ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಹಿನ್ನಲೆಯಲ್ಲಿ ಕನಕಪುರ ತಾಲ್ಲೂಕಿನಲ್ಲಿ -5, ಮಾಗಡಿ-2, ರಾಮನಗರ-3, ಮತ್ತು ಚನ್ನಪಟ್ಟಣದಲ್ಲಿ -2 ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇದ್ದರೆ ಹೋಬಳಿ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು ಎಂದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಮೂಲಕ ಕೋವಿಡ್ ಸೋಂಕಿನ ಲಕ್ಷಣ ಇರುವವರ ಸರ್ವೆ ನಡೆಸುತ್ತಿದ್ದಾರೆ. ನಂತರ ಪ್ರತಿ ದಿನ ಪ್ರತಿ ತಾಲ್ಲೂಕಿನ 3 ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಿ ಅವಶ್ಯಕತೆ ಇದ್ದಲ್ಲಿ ಸ್ವಾಬ್ ಸಂಗ್ರಹಿಸಲಾಗುತ್ತಿದೆ. ವರದಿ ಬರುವವರೆಗೂ ಕಾಯದೆ ಸ್ಥಳದಲ್ಲೇ ಔಷಧಿಗಳನ್ನು ಸಹ ನೀಡಲಾಗುತ್ತಿದೆ. ಈ ಕೆಲಸಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎ.ಎಂ.ಒ ಗಳನ್ನು ನಿಯೋಜಿಸಲಾಗಿದೆ. ಪಿ.ಹೆಚ್.ಸಿ ಗಳಿಗೆ ಔಟ್ ಸರ್ಜನ್ ಗಳನ್ನು ನಿಯೋಜಿಸಲಾಗಿದೆ. ಆರೋಗ್ಯ ಶಿಬಿರ 10 ರಿಂದ 12 ದಿನದೊಳಗೆ ಮುಗಿಯುವ ನಿರೀಕ್ಷೆ ಇದೆ ಎಂದರು.
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ಶೇ 57 ಹಾಗೂ ಎರಡನೇ ಡೋಸ್ ಶೇ 38 ಜನರಿಗೆ ನೀಡಲಾಗಿದೆ. ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಆದ್ಯತಾ ಗುಂಪಿನ 18 ವರ್ಷ ಮೇಲ್ಪಟ್ಟ ಕಟ್ಟಡ ಕಾರ್ಮಿಕರು, ಟೆಲಿಕಾಮ್ ಮತ್ತು ಇಂಟರ್ನೆಟ್ ಸೇವಾದಾರರು, ವಿಮಾನಯಾನ ಸಂಸ್ಥೆಗಳ ಸಿಬ್ಬಂದಿಗಳು, ಬ್ಯಾಂಕ್ ಸಿಬ್ಬಂದಿಗಳು, ಪೆಟ್ರೋಲ್ ಬಂಕ್ ನ ಸಿಬ್ಬಂದಿಗಳು, ಚಿತ್ರೋದ್ಯಮದ ಉದ್ಯಮಿ/ಕಾರ್ಯಕರ್ತೆ/ ಸಿಬ್ಬಂದಿಗಳು, ಅಡ್ವೊಕೇಟ್ ಗಳು, ಹೋಟೆಲ್ ಮತ್ತು ಆತಿಥ್ಯ ಸೇವಾದಾರು, ಕೆ.ಎಂ.ಎಫ್. ಸಿಬ್ಬಂದಿಗಳು, ರೈಲ್ವೆ ಸಿಬ್ಬಂದಿಗಳು, ಗಾರ್ಮೆಂಟ್ ಕಾರ್ಖಾನೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು, ಜೈಲ್ ಸಿಬ್ಬಂದಿಗಳು, RSK ಕೆಲಸಗಾರರು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಆಟಗಾರರು, ಸ್ಟಧಾರ್ ಗೃಹ ವಾಸಿಗಳು ಮತ್ತು ರಾಜ್ಯ ಮಹಿಳಾ ನಿಲಯ ವಾಸಿಗಳು (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ), ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯ ಸಿಬ್ಬಂದಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಲಸಿಕೆ ನೀಡಲಾಗುವುದು ಎಂದರು.
ಹೊಸ ಜಿಲ್ಲಾಸ್ಪತ್ರೆಯ ಒಂದು ಭಾಗದಲ್ಲಿ 131 ಬೆಡ್ ಗಳನ್ನು ಸಿದ್ಧ ಮಾಡಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 120 ಐ.ಸಿ.ಯು ಬೆಡ್ ಗಳನ್ನು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಆಸ್ಪತ್ರೆಯ ಇನ್ನಿತರ ಕೆಲಸಗಳನ್ನು ಪೂರ್ಣಗೊಳಿಸಲು 20 ಕೋಟಿ ರೂ ಅನುದಾನದ ಕೋರಿಕೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದರೆ ಚಿಕಿತ್ಸೆ ಪಡೆದವರು ಸೂಕ್ತ ದಾಖಲಾತಿಗಳೊಂದಿಗೆ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ 5 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿ ಯಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್ ಆರ್.ಸಿ.ಹೆಚ್ ಅಧಿಕಾರಿ ಡಾ ಪದ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು