ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕೋವಿಡ್ ಚಿಕಿತ್ಸೆಗೆ 5.5 ಕೋಟಿ ರೂ : ಮುರುಗೇಶ ಆರ್ ನಿರಾಣಿ
ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕೋವಿಡ್ ಚಿಕಿತ್ಸೆಗಾಗಿ ಆಮ್ಲಜನಕ ಸಾಂದ್ರಕ, ಆಕ್ಸಿಮೀಟರ್, ಔಷಧಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಖರೀದಿಗಾಗಿ 5.5 ಕೋಟಿ ರೂ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್ಗಳನ್ನು ಖರೀದಿಸಲು ಕ್ರಮ ವಹಿಸಲಾಗಿದೆ. 1,000 ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ. ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು. ಹೊಸದಾಗಿ ಆಕ್ಸಿಜನ್ ಜನರೇಟರ್ ಯೂನಿಟ್ ಬದಲು ಮೂವಿಂಗ್ ಆಕ್ಸಿಜನ್ ಜನರೇಟರ್ ಖರೀದಿಗೆ ಯೋಜಿಸಲಾಗುತ್ತಿದೆ. ಇದರಿಂದ ಜಿಲ್ಲಾ ಮಟ್ಟದಿಂದ ಆಮ್ಲಜನಕ ಜನರೇಟರ್ ನ್ನು ತಾಲ್ಲೂಕುಗಳಿಗೆ ತೆಗೆದುಕೊಂಡು ಹೋಗಿ ಅವಶ್ಯಕತೆಗೆ ತಕ್ಕಂತೆ 300-500 ಸಿಲಿಂಡರ್ಗಳನ್ನು ತುಂಬಿಸಿ ಬರಬಹುದು ಎಂದರು.
ಜಿಲ್ಲೆಯಲ್ಲಿ 110 ಬಿಲ್ಡಿಂಗ್ ಸ್ಟೋನ್ ಕ್ರಷರ್ಗಳಿದ್ದು, 53 ಕ್ರಷರ್ಗಳಿದ್ದು, 13 (ಡೈರೆಕ್ಟರ್ ಜನರಲ್ ಆಫ್ ಮೈನ್ಸ್ ಸೇಫ್ಟಿ) ಡಿ.ಜಿ.ಎಂ.ಎಸ್ ಪರವಾನಗಿ ಹೊಂದಿದೆ. ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ದಲ್ಲಿ ನಡೆದ ಘಟನೆಯಿಂದ ಡಿ.ಜಿ.ಎಂ.ಎಸ್ ಪರವಾನಗಿ ಕಡ್ಡಾಯ ಮಾಡಲಾಗಿದೆ. ಆದರೆ ರಾಜ್ಯದಲ್ಲಿ 5%ಗಣಿಗಾರಿಕೆ ನಡೆಸುವವರ ಬಳಿ ಮಾತ್ರ ಡಿ.ಜಿ.ಎಂ.ಎಸ್ ಪರವಾನಗಿ ಇರುತ್ತದೆ ಉಳಿದ ಗಣಿಗಾರಿಕೆ ನಡೆಸುವವರು ಡಿ.ಜಿ.ಎಂ.ಎಸ್ ಪರವಾನಗಿ ಪಡೆದುಕೊಳ್ಳಲು 90 ದಿನ ಕಾಲಾವಕಾಶ ನೀಡಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಬಹಳಷ್ಟು ಜನರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಗಣಿಕಾರಿಕೆ ಸಂಬಂಧಿಸಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಗಣಿ ಮಾಲೀಕರಿಗೆ ಒಂದು ದಿನದ ಕಾರ್ಯಗಾರ ಆಯೋಜಿಸಿ ತರಬೇತಿ ನೀಡಲಾಗುತ್ತಿದೆ ಎಂದರು.
ಹೊಸದಾಗಿ ನ್ಯೂ ಮೈನಿಂಗ್ ಪಾಲಿಸಿ ಜಾರಿಗೆ ತರಲು ಚಿಂತಿಸಲಾಗುತ್ತಿದೆ. ವಿಭಾಗೀಯವಾರು ಮೈನಿಂಗ್ ಅದಾಲತ್ನ್ನು ಲಾಕ್ಡೌನ್ ತೆರವುಗೊಳಿಸಿದ ನಂತರ ನಡೆಸಲಾಗುವುದು. ಇದರಿಂದ ಗಣಿಗಾರಿಕೆಗೆ ಸಂಬಂಧಿಸಿದ ತೊಂದರೆ ಇದ್ದಲ್ಲಿ ಸ್ಥಳೀಯವಾಗಿ ನಿವಾರಿಸಬಹುದು. ಸಿಂಗಲ್ ವಿಂಡೋ ಸಿಸ್ಟ್ಂ ಜಾರಿಗೆ ತಂದು ಗಣಿಗಾರಿಕೆಗೆ ಅರ್ಜಿ ಸಲ್ಲಿಸುವವರು ಬೇರೆ ಬೇರೆ ಇಲಾಖೆಗೆ ಹೋಗಿ ಎನ್.ಓ.ಸಿ ತರುವುದನ್ನು ತಪ್ಪಿಸಿ ಸಮಯ ಉಳಿತಾಯ ಮಾಡಬಹುದು ಎಂದರು.
ಗಣಿಗಾರಿಕೆ ಹಾಗೂ ಡೀಮ್ಡ್ ಅರಣ್ಯ ಕುರಿತು ಬಹಳ ತೊಂದರೆಗಳಿವೆ. ಗಣಿಗಾರಿಕೆಗೆ ಪರವಾನಗಿ ನೀಡಿ ನಂತರ ಸ್ಥಳ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಬರುತ್ತದೆ ಎಂಬ ಗೊಂದಲಗಳಿದ್ದು, ಅದನ್ನು ನಿವಾರಿಸಲು ಕೇಂದ್ರ ಗಣಿಗಾರಿಕೆ ಸಚಿವರಾದ ಪ್ರಹ್ಲಾದ್ ಜೋಷಿ, ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ, ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ ಪರಿಹರಿಸಲಾಗುವುದು ಎಂದರು.
ಪ್ರತಿಕಾ ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು