ದಿಢೀರ್ ಧರಣಿ ನಡೆಸಿದ ಸೋಂಕಿತರು. ತಾಲ್ಲೂಕು ಆಡಳಿತ ಭೇಟಿ. ವೀಡಿಯೋ ಕಾಲ್ ಮೂಲಕ ಸಮಾಧಾನ ಪಡಿಸಿದ ಹೆಚ್ಡಿಕೆ
ತಾಲೂಕಿನ ಹೊನ್ನಾನಾಯಕ್ಕನಹಳ್ಳಿಯ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತಾಲೂಕು ಆಡಳಿತ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಊಟ, ನೀರು ಮತ್ತು ಶುಚಿತ್ವದ ಅವ್ಯವಸ್ಥೆಯನ್ನು ಖಂಡಿಸಿ, ಭಾನುವಾರ ಸೋಂಕಿತರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಕೇರ್ ಸೆಂಟರ್ನಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲ, ಬಿಸಿನೀರು ಇರಲಿ, ಟಾಯ್ಲೆಟ್ ನಲ್ಲೂ ಸಹ ನೀರು ಬರುತ್ತಿಲ್ಲ. ಔಷಧಿ ಪಡೆಯಲು ಬಹುದೂರ ಹೋಗಬೇಕು ಹಾಗೂ ನೀಡುವ ಊಟವನ್ನು ಒಂದೆಡೆ ಬಿಸಾಡಿ ಹೋಗಲಾಗುತ್ತದೆ. ಕನಿಷ್ಠ ರೂಂನೊಳಗೆ ಒಂದು ಕಡೆ ಇಟ್ಟರೂ ಆಗಿತ್ತು. ಹಾಸ್ಟೆಲ್ ನ ಹೊರಭಾಗದಲ್ಲಿ ಗುಡ್ಡೆ ಹಾಕಿ ಹೋಗುತ್ತಾರೆ ಎಂದು ಆರೋಪಿಸಿದ ಸೋಂಕಿತರು, ಕೇಂದ್ರದ ಮುಂಭಾಗ ಧರಣಿ ನಡೆಸಿದರು.
ಅಧಿಕಾರಿಗಳು ಆಗಮಿಸಿ ನಮ್ಮ ಮನವಿ ಸ್ವೀಕರಿಸುವವರೆಗೂ ಊಟ, ತಿಂಡಿ ಸೇವಿಸುವುದಿಲ್ಲ ಎಂದು ಪಟ್ಟು ಹಿಡಿದರು.
ವಿಷಯ ತಿಳಿಯುತ್ತಿದಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು ಮತ್ತು ಗ್ರಾಮಾಂತರ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ರವರು ಭೇಟಿ ನೀಡಿ ಸೋಂಕಿತರ ಮನವೊಲಿಸಿದರು. ಹೊರಗಿನ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಇಂತಹ ಸಮಸ್ಯೆಗಳು ಮುಂದೆ ಆಗದಂತೆ ಎಚ್ಚರವಹಿಸುತ್ತೇವೆ. ನೀವೆಲ್ಲರೂ ಈಗ ಸೋಂಕಿತರಿದ್ದು, ಔಷಧ ಸೇವಿಸಬೇಕಾಗಿರುವುದರಿಂದ ಸರಿಯಾದ ಸಮಯದಲ್ಲಿ ಊಟ ಮಾಡಬೇಕು ಎಂದು ತಿಳಿಹೇಳಿದರು.
ಈ ಸಂಬಂಧಪಟ್ಟಂತೆ ಕ್ಷೇತ್ರದ ಶಾಸಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೂ ದೂರವಾಣಿ ಮೂಲಕ ದೂರು ನೀಡಿದರು. ಮಾಹಿತಿ ತಿಳಿಯುತ್ತಲೇ ಸೆಂಟರ್ ಗೆ ಭೇಟಿ ನೀಡಿದ ತಹಸೀಲ್ದಾರ್ ಎಲ್, ನಾಗೇಶ್ ಪ್ರತಿಭಟನಾಕಾರರ ಆಹವಾಲು ಆಲಿಸಿದರು. ಈ ವೇಳೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿಲ್ಲ. ನೀಡುವ ಊಟವನ್ನು ಒಂದೆಡೆ ಗುಡ್ಡೆ ಹಾಕಿ ಹೋಗುತ್ತಾರೆ. ಇದು ಮನಸ್ಸಿಗೆ ಕಸಿವಿಸಿಯಾಗುತ್ತದೆ. ಔಷಧಿ ಪಡೆಯಲು ಪಕ್ಕದಲ್ಲಿರುವ ಇನ್ನೊಂದು ಹಾಸ್ಟೆಲ್ಗೆ ಹೋಗಬೇಕು. ಸೆಂಟರ್ನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಮನವಿ ಸಲ್ಲಿಸಿದರು.
*ಎಚ್ಡಿಕೆಯಿಂದ ಮನವೊಲಿಕೆ:*
ಕೇರ್ ಸೆಂಟರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರೊಂದಿಗೆ ಮಾಜಿ ಸಿಎಂ ಎಚ್ಡಿಕೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಪ್ರತಿಭಟನಾಕಾರರ ಮನವೊಲಿಸಿದರು. ಪ್ರತಿಭಟನೆಯ ಮಾಹಿತಿ ತಿಳಿಯುತ್ತಲೇ ತಹಸೀಲ್ದಾರ್ರನ್ನು ಸ್ಥಳಕ್ಕೆ ಕಳುಹಿಸಿದ ಅವರು, ತಹಸೀಲ್ದಾರ್ ದೂರವಾಣಿ ಮೂಲಕ ವಿಡಿಯೋ ಕಾಲ್ನಲ್ಲಿ ಪ್ರತಿಭಟನಾಕಾರರ ಜೊತೆ ಮಾತನಾಡಿದರು. ಈ ವೇಳೆ ಎಚ್ಡಿಕೆಗೂ ಇಲ್ಲಿನ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.
ತಾಲೂಕು ಆಡಳಿತ ಸೂಕ್ತವಾಗಿ ಕೆಲಸ ನಿರ್ವಹಿಸುತ್ತಿದೆ. ಸಣ್ಣಪುಟ್ಟ ಸಮಸ್ಯೆಗಳು ಸಹಜ. ಆದರೆ, ಯಾವುದೇ ಸಮಸ್ಯೆಗಳನ್ನು ಕೂಡಲೇ ಗಮನಕ್ಕೆ ತಂದರೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.
*ಯಾವುದೇ ಸಮಸ್ಯೆಗೆ ಆಸ್ಪದ ಕೊಡುವುದಿಲ್ಲ:*
ಈ ಪ್ರತಿಭಟನೆಯ ಸಂಬಂಧ ಪತ್ರಿಕೆಗೆ ಮಾಹಿತಿ ನೀಡಿದ ತಹಸೀಲ್ದಾರ್ ಎಲ್. ನಾಗೇಶ್, ಕೆಲ ಸಣ್ಣಪುಟ್ಟ ಸಮಸ್ಯೆಗಳಿಂದ ಅಸಮಾಧಾನಗೊಂಡಿದ್ದರು. ಸ್ಥಳಕ್ಕೆ ತೆರಳಿ ಬಗೆಹರಿಸಲಾಗಿದೆ. ಕೇರ್ ಸೆಂಟರ್ಗಳ ಬಗ್ಗೆ ತಾಲೂಕು ಆಡಳಿತ ಹೆಚ್ಚಿನ ಗಮನಹರಿಸುತ್ತಿದೆ. ಗುಣಮಟ್ಟದ ಊಟವನ್ನು ಖುದ್ದಾಗಿ ಸರಬರಾಜು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಲಾಗುತ್ತದೆ. ಹೊನ್ನಾನಾಯಕ್ಕನಹಳ್ಳಿಯಲ್ಲಿರುವ ಎರಡು ಹಾಸ್ಟಲ್ಗಳ ಪ್ರಾಂಶುಪಾಲರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಅವರುಗಳಿಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು