Tel: 7676775624 | Mail: info@yellowandred.in

Language: EN KAN

    Follow us :


ಮಹದೇಶ್ವರ ನಗರದಲ್ಲಿನ ಕೋವಿಡ್ ಕೇರ್ ಸೆಂಟರ್ ವಿರೋಧಿಸಿ ಸ್ಥಳೀಯರ ವಿರೋಧ

Posted date: 27 May, 2021

Powered by:     Yellow and Red

ಮಹದೇಶ್ವರ ನಗರದಲ್ಲಿನ ಕೋವಿಡ್ ಕೇರ್ ಸೆಂಟರ್ ವಿರೋಧಿಸಿ ಸ್ಥಳೀಯರ ವಿರೋಧ

ನಗರದ ಮಹದೇಶ್ವರ ನಗರದಲ್ಲಿನ, ಮಹದೇಶ್ವರ ದೇವಾಲಯದ ಆವರಣದಲ್ಲಿರುವ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಪುರುಷ ವಿದ್ಯಾರ್ಥಿ ನಿಲಯದಲ್ಲಿ ಸ್ಥಾಪಿಸಿರುವ ಕೋವಿಡ್ ಸೆಂಟರ್ ನಲ್ಲಿರುವ ಸೋಂಕಿತರನ್ನು ಬೇರೆಡೆಗೆ ಸ್ಥಳಾಂತರಿಸಬೇಕು, ಎಂದು ಮಹದೇಶ್ವರ ನಗರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸಿ ಸಿ ನಾಗೇಶ್ ಒತ್ತಾಯಿಸಿದರು.

ಅವರು ಇಂದು ಮಹದೇಶ್ವರ ನಗರದಲ್ಲಿರುವ ಎಲ್ ಎನ್ ಕಲ್ಯಾಣ ಮಂಟಪದ ಹೊರಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ನಗರದಲ್ಲಿ ಹಲವಾರು ದೊಡ್ಡ ದೊಡ್ಡ ಕಾಲೇಜುಗಳು, ಅಂಬೇಡ್ಕರ್ ಭವನ ಇದ್ದರೂ ಸಹ ಜನವಸತಿ ಬಡಾವಣೆಯಲ್ಲಿ ಸೆಂಟರ್ ಮಾಡಿರುವುದು ದುರದೃಷ್ಟಕರ. ಹಾಸ್ಟೆಲ್ ನ ಮುಂಭಾಗ, ಆಜೂಬಾಜು ಜಾಗವಿದ್ದು, ಹಿಂಭಾಗದಲ್ಲಿ ವಸತಿಗಳು ಹಾಸ್ಟೆಲ್ ಗೆ ಹೊಂದಿಕೊಂಡಿವೆ. ಮನವಿಯ ಮೇರೆಗೆ ಹಿಂಬದಿಯ ಕಿಟಕಿಗಳಿಗೆ ಪ್ಲೇವುಡ್ ಶೀಟ್ ಹೊಡೆದಿದ್ದಾರೆ. ಆದರೆ ಸಂಪೂರ್ಣ ವಸತಿ ಪ್ರದೇಶವಾಗಿರುವುದರಿಂದ ಕೊರೊನಾ ಸೋಂಕು ಹರಡಲು ತಾಲ್ಲೂಕು ಆಡಳಿತವೇ ಇಂಬುಕೊಟ್ಟಂತಾಗುತ್ತದೆ. ಹಾಗಾಗಿ ತಕ್ಷಣವೇ ಸ್ಥಳಾಂತರಗೊಳಿಸಬೇಕೆಂದು ಆಗ್ರಹಿಸಿದರು.


ಇಲ್ಲಿ ದೇವಸ್ಥಾನ ಇದ್ದು ಮದುವೆಗಳು ನಡೆಯುತ್ತವೆ. ಕೋತಿಗಳ ಕಾಟ ಹೆಚ್ಚಾಗಿದೆ. ಸೋಂಕಿತರು ಅಲ್ಲಲ್ಲಿ ಬಿಸಾಡುವ ಮಾಸ್ಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ಸೋಂಕಿತರು ಬಿಸಾಡುತ್ತಾರೆ. ಅವುಗಳನ್ನು ಕೋತಿಗಳು ತಂದು ಮನೆಯ ಬಳಿ ಹಾಕುತ್ತವೆ. ಮಕ್ಕಳಿಗೆ ಇದರಿಂದ ಸೋಂಕು ಹರಡಲು ಅನುವುಮಾಡಿಕೊಟ್ಟಂತಾಗುತ್ತದೆ. ಇದರ ಜೊತೆಗೆ ಸೋಂಕಿತರಿಗೆ ಆಕ್ಸಿಜನ್ ಬಹಳ ಮುಖ್ಯ. ಹಿಂದಿನ ಕಿಟಕಿಗಳನ್ನು ಸಂಪೂರ್ಣವಾಗಿ ಮುಚ್ಚಿರುವುದರಿಂದ ಅವರು ತಮ್ಮ ಗಾಳಿಯನ್ನು ಅವರೆ ಉಸಿರಾಡಬೇಕೆ ? ಅವರಿಗೆ ಒಳ್ಳೆಯ ಗಾಳಿ ಬೆಳಕು ಸಿಗುವ ಕಡೆ ಸ್ಥಳಾಂತರಿಸಬೇಕು ಎಂದು ಗೋಷ್ಠಿಯ ಮೂಲಕ ಮನವಿ ಮಾಡಿದರು.


ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆಂಪರಾಜು ಮಾತನಾಡಿ ತಗಚಗೆರೆ ಹಾಸ್ಟೆಲ್ ಸೇರಿದಂತೆ ನಿರ್ಜನ ಪ್ರದೇಶಗಳಲ್ಲಿರುವ ಹಾಸ್ಟೆಲ್ ಗಳನ್ನು ತಾಲ್ಲೂಕು ಆಡಳಿತ ಬಳಸಿಕೊಳ್ಳಬೇಕೇ ವಿನಹ ಜನವಸತಿ ಕೇಂದ್ರಗಳನ್ನಲ್ಲಾ. ಕಳೆದ ವರ್ಷವೂ ಸಹ ನಾವು ಇದನ್ನು ವಿರೋಧಿಸಿದ್ದೆವು. ಈ ಬಾರಿಯೂ ಸಹ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶಿಲ್ದಾರ್,  ಪೌರಾಯುಕ್ತರು, ಸಚಿವರಾದ ಸಿ ಪಿ ಯೋಗೇಶ್ವರ್, ಶಾಸಕ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರಿಗೂ ಮನವಿ ಮಾಡಿದ್ದೆವು. ಆದರೂ ಸಹ ತಹಶಿಲ್ದಾರ್ ನಾಗೇಶ್ ರವರು ಇಲ್ಲಿಯೇ ಸೆಂಟರ್ ಸ್ಥಾಪಿಸಿದ್ದಾರೆ. ಕೆಲವರನ್ನು ಗುಣಪಡಿಸುವ ಸಲುವಾಗಿ, ವಾರ್ಡ್ ಎಲ್ಲರನ್ನೂ ಸೋಂಕಿಗೆ ದೂಡುತ್ತಿರುವುದು ಸರಿಯಲ್ಲ ಎಂದರು.


ನಿವಾಸಿ ಸತೀಶ್ ಕುಮಾರ್ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ವೃದ್ದರು ವಾಸವಿದ್ದು, ಇಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ. ನಮ್ಮನ್ನೇ ಬೇರೆಡೆಗೆ ಸ್ಥಳಾಂತರಿಸಿಕೊಡಲಿ ಎಂದು ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ನಾರಾಯಣಸ್ವಾಮಿ, ಮಹದೇಶ್ವರ ನಗರ ಹಿತರಕ್ಷಣಾ ವೇದಿಕೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್. ಉಪಾಧ್ಯಕ್ಷ ರಾಮಚಂದ್ರಯ್ಯ, ಸಹಕಾರ್ಯದರ್ಶಿ ನಾಗೇಶ್ ಮತ್ತು ಪ್ರದೀಪ್, ಕೋಶಾಧಿಕಾರಿ ಪ್ರಕಾಶ್, ಸಂಚಾಲಕ ಚಿಕ್ಕಣ್ಣ ,

ಸಂಘಟನಾ ಕಾರ್ಯದರ್ಶಿ ಶರತ್ ಕುಮಾರ್ ಆರ್. ನಿರ್ದೇಶಕರಾದ ವೆಂಕಟೇಶ್, ನಾಗೇಶ್ ಎಸ್ ಎಂ, ರಘುನಂದನ್.ನಾಗರಾಜ್,

ಸುಗುಣ ಚೆಲುವರಾಜು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑