Tel: 7676775624 | Mail: info@yellowandred.in

Language: EN KAN

    Follow us :


ಪ್ರತಿನಿತ್ಯ ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

Posted date: 29 May, 2021

Powered by:     Yellow and Red

ಪ್ರತಿನಿತ್ಯ ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

ರಾಮನಗರ, ಮೇ.29 ಜಿಲ್ಲೆಯಲ್ಲಿ ಸರಾಸರಿ ಪ್ರತಿದಿನ 350 ರಿಂದ 400 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಪ್ರತಿನಿತ್ಯವೂ ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಕನಿಷ್ಠವೆಂದರೂ 2,100 ಕ್ಕೆ ಹೆಚ್ಚಿಸುವಂತೆ ನಗರಾಭಿವೃದ್ಧಿ ಮತ್ತು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ತುಷಾರ್ ಗಿರಿನಾಥ್ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು. 


ಅವರು ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿದ್ದ ಕೋವಿಡ್-19 ಪ್ರಗತಿ ಪರಿಶೀಲಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖಲಾಗುತ್ತಿದೆ. ಆದರೂ, ಕೋವಿಡ್ ಸೋಂಕಿಗೆ ಒಳಗಾಗುತ್ತಿರುವ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಜಿಲ್ಲೆಯಲ್ಲಿ ಪ್ರತಿನಿತ್ಯ 2,100 ರಿಂದ 2,400 ಮಂದಿಗೆ ಪರೀಕ್ಷೆ ನಡೆಸುವಜಿಲ್ಲೆಯಲ್ಲಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಜಿಲ್ಲಾಡಳಿತಕ್ಕೆ ತಿಳಿಸಿದರು. 


ಐಎಲ್ಐ. ಎಸ್.ಎ.ಆರ್.ಐ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲಿ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಅವುಗಳು  ವರದಿಯಾಗುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆಗೆ ಕಾರ್ಯದರ್ಶಿಗಳು ಸೂಚನೆ ನೀಡಿದರು. 


*ಹೋಮ್ ಐಸೋಲೇಷನ್ ಬೇಡ*

ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್ ಸಂಖ್ಯೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿತಗೊಳಿಸಲಾಗಿದೆ. ಸೋಂಕಿಗೆ ಒಳಗಾಗುವವರಿಗೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಮಟ್ಟದಲ್ಲಿ ಸೋಂಕು ಹರಡುವುದನ್ನು ತಪ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 1,650 ಮಂದಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಇಕ್ರಂ ಅವರು ಮಾಹಿತಿ ನೀಡಿದರು.


ಹೋಮ್ ಐಸೋಲೇಷನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಸೋಂಕಿತರು  ಸೇರ್ಪಡೆಯಾಗುವುದನ್ನು ಉತ್ತೇಜಿಸಬೇಕು. ಇಲ್ಲಿರುವವರಿಗೆ ಅಗತ್ಯ ವೈದ್ಯಕೀಯ ನೆರವು, ಪೌಷ್ಠಿಕ ಆಹಾರ, ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಮಡೆದುಕೊಳ್ಳುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


*ಮೂರುವರೆ ಲಕ್ಷ ಮಂದಿಗೆ ಲಸಿಕೆ*

ಜಿಲ್ಲೆಯಲ್ಲಿ ಒಟ್ಟಾರೆ 12 ಲಕ್ಷ ಜನಸಂಖ್ಯೆ ಇದೆ. ಈಗಾಗಲೇ 3.5 ಲಕ್ಷ ಮಂದಿಗೆ ಲಸಿಕೆ ನೀಡಿದ್ದು, ಈ ಪೈಕಿ 8.5 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿರುತ್ತದೆ. 45 ವರ್ಷ ಮೇಲ್ಪಟ್ಟವರ ಸಂಖ್ಯೆ 3 ಲಕ್ಷದಷ್ಟಿದೆ. ಇವರುಗಳ ಪೈಕಿ ಇದುವರೆಗೆ ಮೊದಲ ಡೋಸ್ ಆಗಿ 1.83 ಲಕ್ಷ ಮಂದಿಗೆ ಲಸಿಕೆ ನೀಡಾಗಿದೆ. ಇನ್ನು 1.17 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿದೆ. ಎಂದು ಜಿಲ್ಲಾ ಪಂಚಾಯಿತಿ ಮುಖ್ಯಾ ಕಾರ್ಯನಿರ್ವಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.


ಜಿಲ್ಲೆಯಲ್ಲಿ ಪ್ರತಿನಿತ್ಯವೂ 5,500 ಮಂದಿಯಿಂದ 6,000 ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಮಾಣವನ್ನು ಮತ್ತಷ್ಟು ಹೆಚ್ಚಳ ಮಾಡಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸುವಂತೆ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.


ಜಿಲ್ಲೆಯಲ್ಲಿ 18 ರಿಂದ 45 ವರ್ಷದೊಳಗಿನವರ ಸಂಖ್ಯೆ 5.13 ಲಕ್ಷದಷ್ಟಿದೆ. ಮುಂದಿನ ದಿನಗಳಲ್ಲಿ ಈ ವರ್ಗದ ಜನರಿಗೆ ಲಸಿಕೆ ನೀಡುವ ವ್ಯವಸ್ಥೆಗೆ ಸಂಬಂಧಿಸಿದಂತೆ ಸೂಕ್ತ ರೂಪು ರೇಷೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದರು. 


ಜಿಲ್ಲೆಯಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿರುವುದು ಸಂತಸದ ಸಂಗತಿ. ಲಸಿಕೆ ಹಾಕಿಸಿಕೊಳ್ಳವುದನ್ನು ಉತ್ತೇಜಿಸುವುದರ ಜೊತೆಗೆ ಮುಂದಿನ 3 ತಿಂಗಳ ಒಳಗಾಗಿ ಜಿಲ್ಲೆಯಲ್ಲಿರುವ ಎಲ್ಲಾ 8.5 ಲಕ್ಷ ಮಂದಿಗೆ ಲಸಿಕೆ ನೀಡುವಂತೆ ಕಾರ್ಯಪ್ರವೃತ್ತರಾಗಲು ಕಾರ್ಯದರ್ಶಿಗಳು ನುಡಿದರು.


*ಬಂದೋಬಸ್ತ್*

ಜಿಲ್ಲೆಯ ಪಡಿತರ ವಿವರಣಾಕೇಂದ್ರ, ಹಾಲಿನ ಬೂತ್, ಬೇರೆ ಬೇರೆ ವ್ಯಾಪಾರಿಗಳು ಸೇರಿದಂತೆ ಕೆಲವು ಕಡೆಗಳಲ್ಲಿ ದೈಹಿಕ ಅಂತರ ಪಾಲನೆಯಾಗುತ್ತಿಲ್ಲ. ಇಂತಹ ಕಡೆಗಳಲ್ಲಿ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸ್ಸಾನಿಟೈಸರ್ ಮತ್ತು ದೈಹಿಕ ಅಂತರವನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದರು.


ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ,  ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್  ಅಧಿಕಾರಿ ಡಾ: ಪದ್ಮಾ ಮತ್ತು ಆರೋಗ್ಯ ಇಲಾಖೆಯ ಇನ್ನಿತರ ಅಧಿಕಾರಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑