ಹಾರೋಹಳ್ಳಿ ಪಿಎಸ್ಐ ರವರಿಂದ ಬಡವರಿಗೆ ದಿನಸಿ ಕಿಟ್, ಹಸಿದವರಿಗೆ ಅನ್ನ. ಶ್ಲಾಘಿಸಿದ ಎಸ್ ಪಿ
ರಾಮನಗರ: ಕೊರೋನಾ ಸಂಕಷ್ಟದ ನಡುವೆ ಪೊಲೀಸರಿಗೆ ಸಾಕಷ್ಟು ಕೆಲಸಗಳಿರುತ್ತವೆ. ಲಾಕ್ ಡೌನ್ ಚೆಕ್ ಪೋಸ್ಟ್ ಡ್ಯೂಟಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಇದರ ಜತೆಗೆ ಮಹಾ ಹೆಮ್ಮಾರಿ ಕರೋನಾದ ಭಯ. ಇಷ್ಟೆಲ್ಲದರ ನಡುವೆ ಬಡವರ ಕಷ್ಟಕ್ಕೆ ಪೊಲೀಸರು ನೆರವಾಗಿದ್ದಾರೆ. ಎರಡೊತ್ತಿನ ಊಟಕ್ಕೂ ಅನುಕೂಲವಿಲ್ಲದ ಗ್ರಾಮಗಳಲ್ಲಿರುವ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ. ಇಷ್ಟೆಲ್ಲಾ ಮಾಡುತ್ತಿರುವ ಪೊಲೀಸರ ಕಾರ್ಯ ಜನರ ಪ್ರೀತಿಗೆ ಪಾತ್ರವಾಗಿದೆ.
ರಾಮನಗರ ಜಿಲ್ಲೆ ಹಾರೋಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಮುರಳಿ ಅವರ ನೇತೃತ್ವದಲ್ಲಿ ಇಂಥದೊಂದು ಉತ್ತಮ ಕೆಲಸ ನಡೆಯುತ್ತಿದೆ. ಲಾಕ್ ಡೌನ್ ನಿಂದ ಬಡವರು ಸಾಕಷ್ಟು ಕಷ್ಟದಿಂದ ಬಳಲುತ್ತಿದ್ದಾರೆ. ಇದನ್ನು ಅರಿತ ಪೊಲೀಸರು ಬಡವರ ನೆರವಿಗೆ ಮುಂದಾಗಿದ್ದಾರೆ. ಪೊಲೀಸ್ ಠಾಣೆಯ ಮುಂಭಾಗದಲ್ಲೇ ಬಡವರಿಗೆ ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟ ವಿತರಣೆ ಮಾಡುತ್ತಿದ್ದಾರೆ. ಊಟ ಹಾಗೂ ತಿಂಡಿಯನ್ನು ಕ್ಯಾಂಟೀನ್ ಒಂದಕ್ಕೆ ವಹಿಸಲಾಗಿದೆ. ಕ್ಯಾಂಟೀನ್ ನಿಂದ ಬಂದ ಊಟವನ್ನ ಠಾಣೆಯ ಮುಂಭಾಗದಲ್ಲೇ ಪಿಎಸ್ಐ ಮುರಳಿ ಹಾಗೂ ಅವರ ಸಿಬ್ಬಂದಿಯೇ ವಿತರಣೆ ಮಾಡುತ್ತಾರೆ. ಅಂದಹಾಗೆ, ಇವರು ಮಾಡುತ್ತಿರುವ ಉತ್ತಮ ಕೆಲಸಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಗಿರೀಶ್ ಶ್ಲಾಘನೆ ವ್ಯಕ್ತಪಡಿಸುತ್ತಾರೆ
ಪಿಎಸ್ಐ ಹಾಗೂ ಸಿಬ್ಬಂದಿ ತಮ್ಮ ಸ್ವಂತ ಹಣ ಬಳಸಿಕೊಂಡು ಪ್ರತಿನಿತ್ಯ 400-500 ಮಂದಿಗೆ, ಹಸಿದು ಬಂದವರಿಗೆ ಊಟ ಹಾಕುತ್ತಿದ್ದಾರೆ. ಇನ್ನು ದೂರದ ಗಡಿ ಭಾಗದಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳ ಕಷ್ಟಕ್ಕೆ ಮಿಡಿದ ಪಿಎಸ್ಐ ಮುರಳಿ ಯಾವುದೇ ಅನುಕೂಲ ಇಲ್ಲದ ಗ್ರಾಮಗಳನ್ನ ಗುರುತಿಸಿ ಅಲ್ಲಿನ ಕುಟುಂಬಗಳಿಗೆ ಅಕ್ಕಿ, ಎಣ್ಣೆ, ಬೆಳೆ ಕಿಟ್ ಮಾಡಿ ಬಡ ಕುಟುಂಬಗಳಿಗೆ ನೆರವಾಗಿದ್ದಾರೆ. ಅಷ್ಟೇ ಅಲ್ಲದೇ ಕೊರೋನಾ ಬಗ್ಗೆ ಹಳ್ಳಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಕರೊನಾ ತಡೆಗಟ್ಟುವ ಕ್ರಮಗಳನ್ನು ಹೇಳಿಕೊಡುತ್ತಿದ್ದಾರೆ. ಇನ್ನು ಲಾಕ್ಡೌನ್ ಆದಗಿನಿಂದ ಶುರುವಾಗಿರುವ ಇವರ ಕಾರ್ಯಕ್ರಮ ಇನ್ನು ಕೂಡ ಮುಂದುವರೆದಿದೆ.
ಎಷ್ಟೇ ಕಷ್ಟ ಇದ್ದರೂ ಪೊಲೀಸರು ಎರಡೊತ್ತಿನ ಊಟ ಜೊತೆಗೆ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಮಾಡುತ್ತಿರುವ ಕೆಲಸ ನಿಜಕ್ಕೂ ಶ್ಲಾಘನೀಯ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು