Tel: 7676775624 | Mail: info@yellowandred.in

Language: EN KAN

    Follow us :


ಆಶಾ ಕಾರ್ಯಕರ್ತೆಯರು. ಕೊರೊನಾ ಸಂದರ್ಭದಲ್ಲಿ ಅವರು ಮಾಡಿದ ಕೆಲಸ ಶ್ಲಾಘನೀಯ | ಸಂಸದ ಡಿ.ಕೆ. ಸುರೇಶ್

Posted date: 14 Jun, 2021

Powered by:     Yellow and Red

ಆಶಾ ಕಾರ್ಯಕರ್ತೆಯರು. ಕೊರೊನಾ ಸಂದರ್ಭದಲ್ಲಿ ಅವರು ಮಾಡಿದ ಕೆಲಸ ಶ್ಲಾಘನೀಯ | ಸಂಸದ ಡಿ.ಕೆ. ಸುರೇಶ್

ರಾಮನಗರ: ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ಕೊರೊನಾ ಸಂದರ್ಭದಲ್ಲಿ ಕೆಲಸ ಮಾಡಿದವರು ಆಶಾ ಕಾರ್ಯಕರ್ತೆಯರು. ಕೊರೊನಾ ಸಂದರ್ಭದಲ್ಲಿ ಅವರು ಮಾಡಿದ ಕೆಲಸ ಶ್ಲಾಘನೀಯ ಎಂದು ಸಂಸದ ಡಿ.ಕೆ. ಸುರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಚನ್ನಪಟ್ಟಣದ ಸರ್ಕಾರಿ‌ ಪದವಿ ಪೂರ್ವ ಕಾಲೇಜು ಬಳಿ ಮಾತನಾಡಿ, ಸಂಬಳ, ಬಡ್ತಿ ಇಲ್ಲದೆ, ನಿಯತ್ತಾಗಿ ದುಡಿಯುತ್ತಿರುವವರು ಆಶಾ ಕಾರ್ಯಕರ್ತೆಯರು ಎಂದರು.


ಇವರಿಗೆ ನೆರವಾಗಬೇಕಾಗಿದ್ದ ಸರ್ಕಾರ ತಟಸ್ಥವಾಗಿದೆ. ಲಸಿಕೆ, ಕೊರೊನಾ ಸೇರಿದಂತೆ ವಿವಿಧ ಆರೋಗ್ಯಕ್ಕೆ ಸಂಬಂಧಿಸಿದಂತೆ ಮನೆಮನೆಗೆ ತೆರಳಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಶ್ರಮಿಸುತ್ತಿದ್ದಾರೆ. ಇವರಿಗೆ ನಮ್ಮ ಪಕ್ಷದಿಂದ ಅಲ್ಪ ಸಹಾಯ ಮಾಡುವ ಸಲುವಾಗಿ ದಿನಸಿ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು‌ ಹೇಳಿದರು.

ಇದೇ ಸರ್ಕಾರಗಳು ಲಸಿಕೆ ಬಂದಾಗ ಹೆದರಿಕೊಂಡು, ಅಧಿಕಾರಿಗಳಿಗಾಗಲಿ, ಸಚಿವ ಶಾಸಕರಿಗಾಗಲಿ ನೀಡದೆ, ಆಶಾ ಕಾರ್ಯಕರ್ತೆಯರು ಮತ್ತು ಡಿ ಗ್ರೂಪ್ ನೌಕರರ ಮೇಲೆ ಪ್ರಯೋಗ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.


ಆಶಾ ಕಾರ್ಯಕರ್ತೆಯರು, ಸವಿತಾ ಸಮಾಜ, ಮಡಿವಾಳ, ವಿಶ್ವಕರ್ಮ ಸೇರಿದಂತೆ ವಿವಿಧ ಸ್ತರದ ಜನಾಂಗಕ್ಕೆ ದಿನಸಿ ಕಿಟ್ ನೀಡಿದರು.

ಎಂಎಲ್ಸಿ ಎಸ್. ರವಿ, ಶರತ್ ಚಂದ್ರ, ಪ್ರಮೋದ್, ಸುನಿಲ್, ವೀರೇಗೌಡ, ಶಿವಮಾದು, ನಿಜಾಮ್ ಫೌಜದಾರ್, ಪಿ ಡಿ ರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮತ್ತಿತರಿದ್ದರು.


ಜಿಲ್ಲಾ ಪಂಚಾಯತಿ ಮಾಜಿ‌ ಉಪಾಧ್ಯಕ್ಷೆ ವೀಣಾಕುಮಾರಿ, ಚಂದ್ರ ಸಾಗರ್ ನೇತೃತ್ವದಲ್ಲಿ ಚನ್ನಪಟ್ಟಣ ತಾಲೂಕಿನ  ಲಾಳಾಘಟ್ಟ ಗ್ರಾಮದ ಶಾಲೆಯ ಬಳಿ ಬಡಬಗ್ಗರಿಗೆ ದಿನಸಿ ಕಿಟ್ ಗಳನ್ನು ಸಂಸದ ಡಿ ಕೆ ಸುರೇಶ್ ನೀಡಿದರು. ಲಾಳಾಘಟ್ಟ ಗ್ರಾಮ, ಹೊಸ ಸೈಟ್ ಮತ್ತು ತಮಿಳು ಕಾಲೋನಿಗಳ ನಿವಾಸಿಗಳಿಗೆ ದಿನಸಿ ಕಿಟ್ ನೀಡಿ ಮಾತನಾಡಿದ ಡಿ.ಕೆ. ಸುರೇಶ್,

ಅಡುಗೆ ಎಣ್ಣೆ, ಪೆಟ್ರೋಲ್ ಸೇರಿದಂತೆ ಎಲ್ಲಾ ರೇಟುಗಳು ಹೆಚ್ಚಾಗಿವೆ. ಕನಿಷ್ಠ ಮೂರು ತಿಂಗಳ ಕಾಲ ವಿದ್ಯುತ್ ಬಿಲ್ ನಿಲ್ಲಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದೆವೆ, ಆದರೂ ಸರ್ಕಾರ ಒಪ್ಪುತ್ತಿಲ್ಲಾ ಎಂದು ದೂರಿದರು.


ಜನಸಾಮಾನ್ಯರ ಬದುಕಿಗೆ ದಾರಿ ದೀಪವಾಗೇಕಾಗಿದ್ದ ಸರ್ಕಾರಗಳು ಜನಸಾಮಾನ್ಯರ ಬದುಕಿಗೆ ಕೊಳ್ಳಿ ಇಟ್ಟಿವೆ.

ಕೂಲಿಕಾರ್ಮಿಕರಿಗೆ ನೆರವಾಗುವಂತಹ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿಲ್ಲಾ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑