ಎಲ್ಲಾ ಖಾಸಗಿ ಶಾಲೆಗಳಿಗೂ ಮಾದರಿ ಹೆಚ್ ಕೆ ಶಾಂತಾಮರಿಯಪ್ಪ ಶಾಲಾ ಆಡಳಿತ ಮಂಡಳಿ. ಸು ತ ರಾ
ಹಳೆ ಮೈಸೂರು ಭಾಗದ ಅಂದಿನ ನಾಯಕರಾಗಿದ್ದ, ಸ್ವಾತಂತ್ರ್ಯ ಸೇನಾನಿ ಹೆಚ್ ಕೆ ವೀರಣ್ಣಗೌಡರ ಕುಟುಂಬ ಬಹಳ ಮಹತ್ವದ ಕುಟುಂಬ. ಈ ಕುಟುಂಬವು ಸ್ವಾತಂತ್ರ್ಯ ಪೂರ್ವದಲ್ಲೇ ಬೆಳೆದು ನಿಂತಿತ್ತು. ಈಗಲೂ ಸಹ ಅವರದೇ ಆದ ಗೌರವವನ್ನು ಉಳಿಸಿಕೊಂಡಿದೆ. ಇಂದು ಇಗ್ಗಲೂರು ಡ್ಯಾಂ ನ್ನು ನನ್ನದು, ನನ್ನದು ಎಂದು ಕೊಚ್ಚಿಕೊಳ್ಳುತ್ತಾರೆ. ಆದರೆ ಹೆಚ್ ಕೆ ವೀರಣ್ಣಗೌಡರು ಅಂದೆ ಈ ಕೆಲಸಕ್ಕೆ ಅಡಿಪಾಯ ಹಾಕಿದರು ಎಂದು ಬಯಲುಸೀಮೆ ಪತ್ರಿಕಾ ಸಂಪಾದಕರಾದ ಸು ತ ರಾಮೇಗೌಡ ತಿಳಿಸಿದರು.
ಅವರು ಇಂದು ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಡಾ ಎಚ್ ಕೆ ಶಾಂತಾಮರಿಯಪ್ಪ ಕಾನ್ವೆಂಟ್ ನಲ್ಲಿ ಸಿಬ್ಬಂದಿಗಳಿಗೆ ಧನಸಹಾಯ ಮತ್ತು ದಿನಸಿ ಕಿಟ್ ನೀಡಿ ಮಾತನಾಡಿದರು.
ಇಂತಹ ಕುಟುಂಬದ ಹಿನ್ನೆಲೆಯಲ್ಲಿ ಬಂದ ಡಾ ಮರಿಯಪ್ಪ ನವರು ಈ ಕೋವಿಡ್ ಸಂದರ್ಭದಲ್ಲಿ ಶಾಲೆ ತೆರೆಯದಿದ್ದರೂ, ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಧನಸಹಾಯ ಮತ್ತು ದಿನಸಿ ಕಿಟ್ ನೀಡುತ್ತಿರುವುದು ಅವರ ಮಾನವೀಯತೆಯನ್ನು ತೋರಿಸುತ್ತದೆ ಎಂದರು. ಮರಿಯಪ್ಪ ನವರ ಅಣ್ಣ ಹೆಚ್ ಕೆ ವೀರಣ್ಣಗೌಡರು ಮುಂಗೋಪಿಯಾದರೂ ಸಮಾಜ ಮತ್ತು ರಾಜಕೀಯವನ್ನು ಅರೆದು ಕುಡಿದವರಾಗಿದ್ದರು. ಇವರ ತಮ್ಮ ಸಹ ಬಡವರ ಮೇಲೆ ಕರುಣೆ ತೋರುವಂತಹ ಹೃದಯವಂತರಾಗಿದ್ದರು. ಇಂದಿನ ಕೋವಿಡ್ ಸಮಯದಲ್ಲೂ ಅವರು ನಿಸ್ವಾರ್ಥದಿಂದ ಮಾಡುತ್ತಿರುವ ಸೇವೆ ಶ್ಲಾಘನೀಯ, ಬಹುಶಃ ಯಾವುದೇ ಖಾಸಗಿ ಶಾಲೆ ನೀಡದ ಸವಲತ್ತುಗಳನ್ನು ಇವರು ನೀಡುತ್ತಿರುವುದರಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪೈಕಿ ಈ ಶಾಲೆಯು ಮಾದರಿಯಾಗಿದೆ ಎಂದರು.
ವಿಶ್ವ ಮಾನವ ಎಂಬ ಬಿರುದು ಕುವೆಂಪು ರವರಂತೆ ಡಾ ಮರಿಯಪ್ಪ ನವರಿಗೆ ಸಲ್ಲುತ್ತದೆ. ಇಂತಹ ವ್ಯಕ್ತಿ ಸಿಗುವುದು ವಿಶ್ವದಲ್ಲೇ ಅಪರೂಪ. ವಿಶ್ವದ ಯಾವುದೋ ಮೂಲೆಯಲ್ಲಿ ಕುಳಿತು ನಮ್ಮ ಶಾಲೆಗಳ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಬಗ್ಗೆ ಚಿಂತಿಸಿ, ಧನಸಹಾಯ ಮತ್ತು ಆಹಾರ ಕಿಟ್ ನೀಡುತ್ತಿರುವುದು ಸಂತಸ ತಂದಿದೆ. ನಾವೆಲ್ಲರೂ ಅವರಿಗೆ ಚಿರ ಋಣಿ ಆಗಿರುತ್ತೇವೆ ಎಂದು ಮದ್ದೂರು ನಗರದ ಹೆಚ್ ಕೆ ವೀರಣ್ಣಗೌಡ ಶಾಲೆಯ ಮುಖ್ಯ ಶಿಕ್ಷಕ ಶೌಕತ್ ಅಲಿ ಶ್ಲಾಘಿಸಿದರು.
ಕಾನ್ವೆಂಟ್ ನ ಮುಖ್ಯ ಶಿಕ್ಷಕ ವರದರಾಜು ರವರು ಮಾತನಾಡಿ ಪ್ರತಿ ವಾರವೂ ಸಹ ಶಾಲೆ ಮತ್ತು ಸಿಬ್ಬಂದಿಗಳ ಬಗ್ಗೆ ಕೇಳುತ್ತಾರೆ. ಈ ಬಾರಿ ಕಳೆದ ಒಂದೂವರೆ ವರ್ಷಗಳ ಕಾಲ ಶಾಲೆ ತೆರೆಯದಿದ್ದರಿಂದ ಸಿಬ್ಬಂದಿಗಳು ಸಂಕಷ್ಟವನ್ನು ಅರಿತು ನಾಲ್ಕನೇ ಬಾರಿಗೆ ಶಿಕ್ಷಕರಿಗೆ ಧನಸಹಾಯ ಮಾಡುತ್ತಿದ್ದಾರೆ. ಧನಸಹಾಯದ ಜೊತೆಗೆ ಈ ಬಾರಿ ದಿನಸಿ ಕಿಟ್ ಸಹ ನೀಡುತ್ತಿರುವುದು ನಮ್ಮೆಲ್ಲರ ಸುದೈವ ಎಂದೇ ಭಾವಿಸಬಹುದು. ಇದರ ಜೊತೆಗೆ ಸರ್ಕಾರಿ ಶಾಲೆಗಳಂತೆ ನಮ್ಮ ಶಾಲೆಯಲ್ಲೂ ಮಕ್ಕಳಿಗೆ ಅನ್ನದಾಸೋಹ ಮಾಡುತ್ತಿರುವುದು ಸಂತಸ ತಂದಿದೆ ಎಂದರು.
ಮದ್ದೂರು ತಾಲ್ಲೂಕಿನ ಶಾಂತಾಮರಿಯಪ್ಪ ಪಬ್ಲಿಕ್ ಸ್ಕೂಲ್ ಮತ್ತು ಅವ್ವೇರಹಳ್ಳಿ ಕಾನ್ವೆಂಟ್ ನ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಉಚಿತವಾಗಿ ಐದು ಸಾವಿರ ರೂಪಾಯಿಗಳ ಚೆಕ್ ಮತ್ತು ದಿನಸಿ ಕಿಟ್ ಗಳನ್ನು ವೇದಿಕೆಯ ಗಣ್ಯರು ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಅಶೋಕ, ಸದಸ್ಯೆ ಪ್ರಿಯಾ ಉಮೇಶ್, ಆಡಳಿತ ಮಂಡಳಿಯ ಹರೀಶ್, ಕರ್ನಾಟಕ ಜಾನಪದ ಪರಿಷತ್ ನ ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ, ಮದ್ದೂರು ತಾಲ್ಲೂಕಿನ ವರದಿಗಾರ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು