ತಾಲ್ಲೂಕಿನಲ್ಲಿ ಅಬ್ಬರಿಸಿದ ಕೊರೋನಾ ಒಂದೇ ದಿನದಲ್ಲಿ ಇಪ್ಪತ್ತು ಮಂದಿಗೆ ಸೋಂಕು ದೃಢ

ಚನ್ನಪಟ್ಟಣ: ತಾಲ್ಲೂಕಿನಲ್ಲಿ ಮೂರನೆ ಅಲೆಯ ಕೊರೋನಾ ಇದೆ ಎಂಬುದನ್ನು ಮರೆತಿದ್ದ ಮಂದಿಗೆ ನಾನಿದ್ದೇನೆ ಎಂದು ಕೊರೊನಾ ತೋರಿಸಿಕೊಟ್ಟಿದೆ. ನಿನ್ನೆ ಅಂದರೆ 12ನೇ ತಾರೀಖು ಶುಕ್ರವಾರ ಒಂದೇ ದಿನ ನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನಾದ್ಯಂತ ಇರುವ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡವರ ಪೈಕಿ ಇಪ್ಪತ್ತು ಮಂದಿಗೆ ಸೋಂಕು ದೃಢಪಟ್ಟಿದೆ.
ಈಗಾಗಲೇ ಶಾಲಾ ಮಕ್ಕಳಿಂದ ಹಿಡಿದು ವೃದ್ದರವರೆಗೆ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಕೆಲವರು ರೂಸ್ಟರ್ ಡೋಸ್ ಸಹ ಪಡೆದುಕೊಂಡಿದ್ದಾರೆ. ಕೆಲವೇ ಮಂದಿ ಮಾತ್ರ ಮಾಸ್ಕ್ ಧರಿಸುತ್ತಾರೆಯೇ ವಿನಹ ಬಹುತೇಕ ಮಂದಿಗೆ ಅದರ ಅವಶ್ಯಕತೆ ಇಲ್ಲಾ ಎಂಬಂತೆ ನಡೆದುಕೊಂಡಿದ್ದಾರೆ. ಸ್ಯಾನಿಟೈಸರ್ ಮತ್ತು ಅಂತರ ಎಂಬುದು ಬಹುದೂರ ಸಾಗಿದೆ. ದೆಹಲಿ, ಬೆಂಗಳೂರು ಸೇರಿದಂತೆ ಶುಕ್ರವಾರ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿರುವುದರ ಜೊತೆಗೆ ರಾಮನಗರ ಜಿಲ್ಲಾದ್ಯಂತ ಒಂದೇ ದಿನ 55 ಮಂದಿಗೆ ಸೋಂಕು ದೃಢಪಟ್ಟಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಚನ್ನಪಟ್ಟಣ 20, ಕನಕಪುರ 19, ಮಾಗಡಿ 06 ಮತ್ತು ರಾಮನಗರ ತಾಲ್ಲೂಕಿನಲ್ಲಿ 10 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಜಿಲ್ಲಾದ್ಯಂತ ಒಟ್ಟು 55 ಮಂದಿಗೆ ಸೋಂಕು ದೃಢಪಟ್ಟಿದೆ. ಚನ್ನಪಟ್ಟಣ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ 06, ಮೈಲನಾಯಕನಹೊಸಹಳ್ಳಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿ 04, ಬೇವೂರು ಆರೋಗ್ಯ ಕೇಂದ್ರದಲ್ಲಿ 03, ಹೊಂಗನೂರು ಆರೋಗ್ಯ ಕೇಂದ್ರದಲ್ಲಿ 03, ಕೂರಣಗೆರೆ ಆರೋಗ್ಯ ಕೇಂದ್ರದಲ್ಲಿ 03, ಬಿವಿ ಹಳ್ಳಿ ಆರೋಗ್ಯ ಕೇಂದ್ರದಲ್ಲಿ 01 ಮತ್ತು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಶನಿವಾರ 02 ಮಂದಿಗೆ ಸೋಂಕು ದೃಢಪಟ್ಟಿದೆ.
*ನಾವು ತಾಲ್ಲೂಕಿನಲ್ಲಿ ಪ್ರತಿದಿನವೂ ನೂರಾ ಐವತ್ತಕ್ಕೂ ಹೆಚ್ಚು ಮಂದಿಗೆ ಪರೀಕ್ಷೆ ಮಾಡುತ್ತಿದ್ದೇವೆ. ಶುಕ್ರವಾರ ಅತಿ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿರುವುದು ನಿಜ. ಅವರೆಲ್ಲರನ್ನೂ ಅವರವರ ಮನೆಯಲ್ಲೇ ಐಸೋಲೇಷನ್ ನಲ್ಲಿ ಇರುವಂತೆ ಸೂಚಿಸಲಾಗಿದೆ. ಜನರು ಅವರ ಎಚ್ಚರಿಕೆಯಲ್ಲಿರುವುದು ಒಳ್ಳೆಯದು.*
*ರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಪಟ್ಟಣ*
*ಕೊರೋನಾ ಸೋಂಕು, ವೈರಲ್ ಫಿವರ್ ಹೆಚ್ಚಾಗುತ್ತಿದೆ. ವಾತಾವರಣವೂ ಇದಕ್ಕೆ ಕಾರಣವಿರಬಹುದು. ಸಾರ್ವಜನಿಕರು ಈ ಮೊದಲಿನಂತೆಯೇ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು. ಬಿಸಿನೀರು ಉಪಯೋಗಿಸಬೇಕು. ಆರೋಗ್ಯದಲ್ಲಿ ಯಾವುದೇ ರೀತಿಯ ಮುನ್ಸೂಚನೆ ಕಂಡ ತಕ್ಷಣ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಮನೆಯಲ್ಲೇ ಐಸೋಲೇಷನ್ ನಲ್ಲಿ ಇರಬೇಕು*
*ಬಿ ಕೆ ಸುದರ್ಶನ್ ತಾಲ್ಲೂಕು ದಂಡಾಧಿಕಾರಿಗಳು*
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »

ತಾಲ್ಲೂಕಿನಲ್ಲಿ ಅಬ್ಬರಿಸಿದ ಕೊರೋನಾ ಒಂದೇ ದಿನದಲ್ಲಿ ಇಪ್ಪತ್ತು ಮಂದಿಗೆ ಸೋಂಕು ದೃಢ
ಚನ್ನಪಟ್ಟಣ: ತಾಲ್ಲೂಕಿನಲ್ಲಿ ಮೂರನೆ ಅಲೆಯ ಕೊರೋನಾ ಇದೆ ಎಂಬುದನ್ನು ಮರೆತಿದ್ದ ಮಂದಿಗೆ ನಾನಿದ್ದೇನೆ ಎಂದು ಕೊರೊನಾ ತೋರಿಸಿಕೊಟ್ಟಿದೆ. ನಿನ್ನೆ

ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು